Mysore
23
few clouds

Social Media

ಸೋಮವಾರ, 30 ಮಾರ್ಚ್ 2026
Light
Dark

ಅಕ್ರಮ ಪಡಿತರ ಸಾಗಾಟ : ಓರ್ವ ಬಂಧನ

Illegal ration distribution: One person arrested.

ಕೊಳ್ಳೇಗಾಲ : ತಾಲ್ಲೂಕಿನ ಕಾಮಗೆರೆ ಗ್ರಾಮದಲ್ಲಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣಿಕೆ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿ ಬಂಧಿಸಿ, ಇನ್ನೋರ್ವ ಆರೋಪಿ ಪರಾರಿಯಾಗಿರುವ ಘಟನೆ ಶನಿವಾರ ಜರುಗಿದೆ.

ನರಸೀಪುರ ಟೌನ್ ಅಬ್ದುಲ್ ರೆಹಮಾನ್(೨೯) ಎಂಬಾತ ಬಂಧಿತ ಆರೋಪಿ ಇನ್ನೋರ್ವ ಆರೋಪಿ ಮಹಮ್ಮದ್ ಸುಹೇಬ್ ಪರಾರಿಯಾದ ಎನ್ನಲಾಗಿದೆ. ಆರೋಪಿಯಿಂದ ೨೩ ಚೀಲದಲ್ಲಿದ್ದ ೭೪೫ ಕೆ.ಜಿ ಅಕ್ಕಿ ಹಾಗೂ ಸಾಗಾಣಿಕೆ ಬಳಸಿದ್ದ ಗೂಡ್ಸ್ ವಾಹನವನ್ನು ಜಪ್ತಿ ಮಾಡಿದರು.

ಇವರುಗಳು ಕಾಮಗೆರೆ ಗ್ರಾಮದ ಅಕ್ಕಪಕ್ಕದ ಹಳ್ಳಿಗಳಲ್ಲಿ ಕಡಿಮೆ ಬೆಲೆಗೆ ಅಕ್ಕಿಯನ್ನು ಖರೀದಿ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಸಲುವಾಗಿ ಕಾಮಗೆರೆಯ ಬೂದುಬಾಳು ರಸ್ತೆಯಲ್ಲಿ ಸಾಗಾಣಿಕೆ ಮಾಡುತ್ತಿರುವುದರ ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಪೊಲೀಸ್ ಠಾಣೆಯ ಎಸ್‌ಐ ಸುಪ್ರೀತ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದಾಗ ಓರ್ವ ಅರೋಪಿ ಪರಾರಿಯಾಗಿದ್ದು, ಇನ್ನೋರ್ವ ಆರೋಪಿಯನ್ನು ಮಾಲು ಸಮೇತ ಬಂಧಿಸಿದ್ದಾರೆ.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ. ದಾಳಿಯಲ್ಲಿ ಆಹಾರ ಇಲಾಖೆಯ ಫುಡ್ ಇನ್ಸ್‌ಪೆಕ್ಟರ್ ಪ್ರಸಾದ್, ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸಟೇಬಲ್ ಗಳು ರಾಜಪ್ಪ, ಗುರುಪ್ರಸಾದ್, ಕಾನ್ಸಟೇಬಲ್ ಪ್ರಭು ಇದ್ದರು.

Tags:
error: Content is protected !!