ಚಾಮರಾಜನಗರ

ಮಲೆಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ದಾರ, ಮಣಿಸರ ವಶಕ್ಕೆ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆ ಹಾಗೂ ದಾಸೋಹ ಭವನದ ರಸ್ತೆಯ ಗಣಪತಿ ದೇವಸ್ಥಾನದಲ್ಲಿ ಅನಧಿಕೃತವಾಗಿ ಮಾರಾಟ ಮಾಡುತ್ತಿದ್ದ ಕೈಗೆ ಕಟ್ಟುವ ದಾರ ಹಾಗೂ ಮಣಿಸರಗಳನ್ನು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಮಾರ್ಗದರ್ಶನದಲ್ಲಿ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದ ಅಂತರ ಗಂಗೆಯಲ್ಲಿ ಸ್ನಾನ ಮಾಡಿ ಬರುವ ಭಕ್ತರನ್ನು ಆಕರ್ಷಿಸುವ ರೀತಿಯಲ್ಲಿ ಮಹದೇಶ್ವರ ಮೂರ್ತಿಯನ್ನು ಹೊಸದಾಗಿ ಪ್ರತಿಷ್ಠಾಪಿಸಿ ಆ ಸ್ಥಳದಲ್ಲಿ ತಾಯತ, ವಿವಿಧ ಬಣ್ಣಗಳ ದಾರಗಳು, ಮಹದೇಶ್ವರ ಸ್ವಾಮಿಯ ಡಾಲರ್ ಇರುವ ದಾರಗಳನ್ನು ಪ್ರಾಧಿಕಾರದ ಅನುಮತಿ ಇಲ್ಲದೆ 20 ಹಾಗೂ 30 ರೂಪಾಯಿಗಳಿಗೆ ಮಾರಾಟ ಮಾಡುವ ಮೂಲಕ ಭಕ್ತರಿಂದ ಹಗಲು ದರೋಡೆ ಮಾಡುತ್ತಿದ್ದರು.

ಈ ಸಂಬಂಧ ಭಕ್ತಾದಿಗಳು ಪ್ರಾಧಿಕಾರದ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘುರವರ ಸೂಚನೆಯ ಮೇರೆಗೆ ಉಪ ಕಾರ್ಯದರ್ಶಿ ಚಂದ್ರಶೇಖರ್ ಹಾಗೂ ಸಿಬ್ಬಂದಿಗಳು ಅಂತರಗಂಗೆ ಹಾಗೂ ದಾಸೋಹ ಭವನಕ್ಕೆ ಹೋಗುವ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಮಾರಾಟ ಮಾಡುತ್ತಿದ್ದ ಅನಧಿಕೃತ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಅಂತರಗಂಗೆ ಸಮೀಪದ ಶೇಷಣ್ಣ ಒಡೆಯರ್ ಗದ್ದುಗೆ, ಅಂತರಗಂಗೆ ಉಗಮ ಸ್ಥಾನ, ದಾಸೋಹ ಭವನದ ರಸ್ತೆಯ ಗಣಪತಿ ದೇವಾಲಯದಲ್ಲಿ ಪೂಜೆ ಮಾಡಲು ಟೆಂಡರ್ ನೀಡಲಾಗಿದೆ. ಟೆಂಡರ್ ಪಡೆದುಕೊಂಡಿರುವವರು ನಿಯಮ ಬಾಹಿರವಾಗಿ ಮರು ಟೆಂಡರ್ ನೀಡಿರುವುದಾಗಿ ಆರೋಪಗಳು ಕೇಳಿ ಬಂದಿದೆ. ಮರು ಟೆಂಡರ್ ಪಡೆದುಕೊಂಡಿರುವವರು ಅನಧಿಕೃತವಾಗಿ ದಾರ ಹಾಗೂ ತೀರ್ಥ ಪ್ರಸಾದ ಮಾರಾಟ ಮಾಡುತ್ತಿದ್ದರು. ಈ ಸಂಬಂಧ ಭಕ್ತರು ಪ್ರಾಧಿಕಾರಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆ ಪ್ರಾಧಿಕಾರದ ಸಿಬ್ಬಂದಿಗಳು ಇಂದು ಬೆಳ್ಳಂಬೆಳ್ಳಗೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

1 min ago

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…

23 mins ago

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

48 mins ago

ಕೊಕ್ಕರೆ ಬೆಳ್ಳೂರನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸಲು ಚಿಂತನೆ : ಶಾಸಕ ಉದಯ್‌

ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…

56 mins ago

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

2 hours ago

ಮಹದೇಶ್ವರ ಬೆಟ್ಟ | ಪಾದಯಾತ್ರೆ, ದ್ವಿಚಕ್ರ ವಾಹನಕ್ಕೆ ತಾತ್ಕಾಲಿಕ ನಿರ್ಬಂಧ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…

2 hours ago