ಚಾಮರಾಜನಗರ

ಅದ್ದೂರಿ ದೀಪಾಲಂಕಾರ; ಮೈಸೂರು ದಸರಾ ರೀತಿ ಕಂಗೊಳಿಸಿದ ಮಹದೇಶ್ವರ ಬೆಟ್ಟ

ದೀಪಾವಳಿ ಬಂತೆಂದರೆ ಇಡೀ ದೇಶದಾದ್ಯಂತ ದೀಪ ಹಚ್ಚಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಹಬ್ಬವನ್ನು ಆಚರಿಸುವುದು ವಾಡಿಕೆ. ಆದರೆ ಕೆಲ ಪುಣ್ಯ ಕ್ಷೇತ್ರಗಳಲ್ಲಿ ಮಾತ್ರ ದೀಪಾವಳಿ ಪ್ರಯುಕ್ತ ಜಾತ್ರಾ ಮಹೋತ್ಸವ, ವಿವಿಧ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿವೆ. ಇಂತಹ ಪುಣ್ಯಕ್ಷೇತ್ರಗಳ ಪೈಕಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಸಹ ಒಂದು.

ಐದು ದಿನಗಳ ಕಾಲ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವ ನಡೆಯಲಿದ್ದು, ನವೆಂಬರ್‌ 10ರ ಶುಕ್ರವಾರದಿಂದ ಧಾರ್ಮಿಕ ಆಚರಣೆಗಳು ಆರಂಭಗೊಂಡಿವೆ. ಎರಡನೇ ದಿನ ಶನಿವಾರ ಮಹದೇಶ್ವರ ಸ್ವಾಮಿಗೆ ಎಣ್ಣೆ ಮಜ್ಜನ ಸೇವೆ ನಡೆದಿದ್ದು, ಮೂರನೇ ದಿನ ಭಾನುವಾರ ನರಕ ಚತುರ್ಥಿ ಅಂಗವಾಗಿ ವಿಶೇಷ ಸೇವೆಗಳು ಹಾಗೂ ಉತ್ಸವಗಳು ಜರುಗಿದವು.

ಇಂದು ( ನವೆಂಬರ್‌ 13 ) ಅಮಾವಾಸ್ಯೆಯ ಅಂಗವಾಗಿ ಹಾಲರುವೆ ಉತ್ಸವ ಹಾಗೂ ಬಿಳಿ ಆನೆ ಉತ್ಸವಗಳು ನಡೆಯಲಿದ್ದು, ನಾಳೆ ನಡೆಯಲಿರುವ ನಡುಮಲೆ ಮಹದೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವದ ಮೂಲಕ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.

ಈ ವಿಶೇಷ ಜಾತ್ರಾ ಮಹೋತ್ಸವದಂದು ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸಿದ್ದು, ದೇವಾಲಯದ ಸುತ್ತಮುತ್ತ ಆಯೋಜಿಸಲಾಗಿರುವ ವಿದ್ಯುತ್‌ ದೀಪಾಲಂಕಾರ ಕಣ್ಮನ ಸೂರೆಗೊಳ್ಳುವಂತೆ ಮಾಡಿದೆ. ದೀಪಾವಳಿ ಪ್ರಯುಕ್ತ ಮಹದೇಶ್ವರ ಬೆಟ್ಟ ತಲುಪಿದ ಭಕ್ತಾದಿಗಳು ಈ ದೀಪಾಲಂಕಾರದ ಫೋಟೊಗಳನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಚಿತ್ರಗಳು ಹಾಗೂ ವಿಡಿಯೊಗಳು ಫೇಸ್‌ಬುಕ್‌ ಹಾಗೂ ಇನ್ಸ್ಟಾಗ್ರಾಮ್‌ಗಳಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಈ ದೀಪಾಲಂಕಾರವನ್ನು ಮೆಚ್ಚಿ ʼಮೈಸೂರು ದಸರಾ ದೀಪಾಲಂಕಾರದ ರೀತಿ ಮಹದೇಶ್ವರ ಬೆಟ್ಟ ಕಂಗೊಳಿಸುತ್ತಿದೆʼ ಎಂದು ಕಾಮೆಂಟ್‌ ಮಾಡಿದ್ದಾರೆ.

andolana

Recent Posts

ಮಧ್ಯ ಪ್ರಾಚ್ಯ ಬಿಕ್ಕಟ್ಟು | ವಿದೇಶಾಂಗ ನೀತಿ ಬದಲಿಸಲು ಖರ್ಗೆ ಆಗ್ರಹ

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…

3 mins ago

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

1 hour ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

1 hour ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

2 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

3 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

4 hours ago