ಚಾಮರಾಜನಗರ

ಅದ್ದೂರಿ ದೀಪಾಲಂಕಾರ; ಮೈಸೂರು ದಸರಾ ರೀತಿ ಕಂಗೊಳಿಸಿದ ಮಹದೇಶ್ವರ ಬೆಟ್ಟ

ದೀಪಾವಳಿ ಬಂತೆಂದರೆ ಇಡೀ ದೇಶದಾದ್ಯಂತ ದೀಪ ಹಚ್ಚಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಹಬ್ಬವನ್ನು ಆಚರಿಸುವುದು ವಾಡಿಕೆ. ಆದರೆ ಕೆಲ ಪುಣ್ಯ ಕ್ಷೇತ್ರಗಳಲ್ಲಿ ಮಾತ್ರ ದೀಪಾವಳಿ ಪ್ರಯುಕ್ತ ಜಾತ್ರಾ ಮಹೋತ್ಸವ, ವಿವಿಧ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿವೆ. ಇಂತಹ ಪುಣ್ಯಕ್ಷೇತ್ರಗಳ ಪೈಕಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಸಹ ಒಂದು.

ಐದು ದಿನಗಳ ಕಾಲ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವ ನಡೆಯಲಿದ್ದು, ನವೆಂಬರ್‌ 10ರ ಶುಕ್ರವಾರದಿಂದ ಧಾರ್ಮಿಕ ಆಚರಣೆಗಳು ಆರಂಭಗೊಂಡಿವೆ. ಎರಡನೇ ದಿನ ಶನಿವಾರ ಮಹದೇಶ್ವರ ಸ್ವಾಮಿಗೆ ಎಣ್ಣೆ ಮಜ್ಜನ ಸೇವೆ ನಡೆದಿದ್ದು, ಮೂರನೇ ದಿನ ಭಾನುವಾರ ನರಕ ಚತುರ್ಥಿ ಅಂಗವಾಗಿ ವಿಶೇಷ ಸೇವೆಗಳು ಹಾಗೂ ಉತ್ಸವಗಳು ಜರುಗಿದವು.

ಇಂದು ( ನವೆಂಬರ್‌ 13 ) ಅಮಾವಾಸ್ಯೆಯ ಅಂಗವಾಗಿ ಹಾಲರುವೆ ಉತ್ಸವ ಹಾಗೂ ಬಿಳಿ ಆನೆ ಉತ್ಸವಗಳು ನಡೆಯಲಿದ್ದು, ನಾಳೆ ನಡೆಯಲಿರುವ ನಡುಮಲೆ ಮಹದೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವದ ಮೂಲಕ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.

ಈ ವಿಶೇಷ ಜಾತ್ರಾ ಮಹೋತ್ಸವದಂದು ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸಿದ್ದು, ದೇವಾಲಯದ ಸುತ್ತಮುತ್ತ ಆಯೋಜಿಸಲಾಗಿರುವ ವಿದ್ಯುತ್‌ ದೀಪಾಲಂಕಾರ ಕಣ್ಮನ ಸೂರೆಗೊಳ್ಳುವಂತೆ ಮಾಡಿದೆ. ದೀಪಾವಳಿ ಪ್ರಯುಕ್ತ ಮಹದೇಶ್ವರ ಬೆಟ್ಟ ತಲುಪಿದ ಭಕ್ತಾದಿಗಳು ಈ ದೀಪಾಲಂಕಾರದ ಫೋಟೊಗಳನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಚಿತ್ರಗಳು ಹಾಗೂ ವಿಡಿಯೊಗಳು ಫೇಸ್‌ಬುಕ್‌ ಹಾಗೂ ಇನ್ಸ್ಟಾಗ್ರಾಮ್‌ಗಳಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಈ ದೀಪಾಲಂಕಾರವನ್ನು ಮೆಚ್ಚಿ ʼಮೈಸೂರು ದಸರಾ ದೀಪಾಲಂಕಾರದ ರೀತಿ ಮಹದೇಶ್ವರ ಬೆಟ್ಟ ಕಂಗೊಳಿಸುತ್ತಿದೆʼ ಎಂದು ಕಾಮೆಂಟ್‌ ಮಾಡಿದ್ದಾರೆ.

andolana

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

5 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

6 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

7 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

7 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

7 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

15 hours ago