ಚಾಮರಾಜನಗರ

ಅದ್ದೂರಿ ದೀಪಾಲಂಕಾರ; ಮೈಸೂರು ದಸರಾ ರೀತಿ ಕಂಗೊಳಿಸಿದ ಮಹದೇಶ್ವರ ಬೆಟ್ಟ

ದೀಪಾವಳಿ ಬಂತೆಂದರೆ ಇಡೀ ದೇಶದಾದ್ಯಂತ ದೀಪ ಹಚ್ಚಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಹಬ್ಬವನ್ನು ಆಚರಿಸುವುದು ವಾಡಿಕೆ. ಆದರೆ ಕೆಲ ಪುಣ್ಯ ಕ್ಷೇತ್ರಗಳಲ್ಲಿ ಮಾತ್ರ ದೀಪಾವಳಿ ಪ್ರಯುಕ್ತ ಜಾತ್ರಾ ಮಹೋತ್ಸವ, ವಿವಿಧ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿವೆ. ಇಂತಹ ಪುಣ್ಯಕ್ಷೇತ್ರಗಳ ಪೈಕಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಸಹ ಒಂದು.

ಐದು ದಿನಗಳ ಕಾಲ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವ ನಡೆಯಲಿದ್ದು, ನವೆಂಬರ್‌ 10ರ ಶುಕ್ರವಾರದಿಂದ ಧಾರ್ಮಿಕ ಆಚರಣೆಗಳು ಆರಂಭಗೊಂಡಿವೆ. ಎರಡನೇ ದಿನ ಶನಿವಾರ ಮಹದೇಶ್ವರ ಸ್ವಾಮಿಗೆ ಎಣ್ಣೆ ಮಜ್ಜನ ಸೇವೆ ನಡೆದಿದ್ದು, ಮೂರನೇ ದಿನ ಭಾನುವಾರ ನರಕ ಚತುರ್ಥಿ ಅಂಗವಾಗಿ ವಿಶೇಷ ಸೇವೆಗಳು ಹಾಗೂ ಉತ್ಸವಗಳು ಜರುಗಿದವು.

ಇಂದು ( ನವೆಂಬರ್‌ 13 ) ಅಮಾವಾಸ್ಯೆಯ ಅಂಗವಾಗಿ ಹಾಲರುವೆ ಉತ್ಸವ ಹಾಗೂ ಬಿಳಿ ಆನೆ ಉತ್ಸವಗಳು ನಡೆಯಲಿದ್ದು, ನಾಳೆ ನಡೆಯಲಿರುವ ನಡುಮಲೆ ಮಹದೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವದ ಮೂಲಕ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.

ಈ ವಿಶೇಷ ಜಾತ್ರಾ ಮಹೋತ್ಸವದಂದು ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸಿದ್ದು, ದೇವಾಲಯದ ಸುತ್ತಮುತ್ತ ಆಯೋಜಿಸಲಾಗಿರುವ ವಿದ್ಯುತ್‌ ದೀಪಾಲಂಕಾರ ಕಣ್ಮನ ಸೂರೆಗೊಳ್ಳುವಂತೆ ಮಾಡಿದೆ. ದೀಪಾವಳಿ ಪ್ರಯುಕ್ತ ಮಹದೇಶ್ವರ ಬೆಟ್ಟ ತಲುಪಿದ ಭಕ್ತಾದಿಗಳು ಈ ದೀಪಾಲಂಕಾರದ ಫೋಟೊಗಳನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಚಿತ್ರಗಳು ಹಾಗೂ ವಿಡಿಯೊಗಳು ಫೇಸ್‌ಬುಕ್‌ ಹಾಗೂ ಇನ್ಸ್ಟಾಗ್ರಾಮ್‌ಗಳಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಈ ದೀಪಾಲಂಕಾರವನ್ನು ಮೆಚ್ಚಿ ʼಮೈಸೂರು ದಸರಾ ದೀಪಾಲಂಕಾರದ ರೀತಿ ಮಹದೇಶ್ವರ ಬೆಟ್ಟ ಕಂಗೊಳಿಸುತ್ತಿದೆʼ ಎಂದು ಕಾಮೆಂಟ್‌ ಮಾಡಿದ್ದಾರೆ.

andolana

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

2 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

5 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

7 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

7 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

7 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

8 hours ago