Mysore
22
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣ: ಮಹದೇಶ್ವರ ಬೆಟ್ಟಕ್ಕೆ ಹೋಗದಂತೆ ಇಮ್ಮಡಿ ಮಹದೇವಸ್ವಾಮಿಗೆ ನಿರ್ಬಂಧ

ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.

ಈ ಕುರಿತು ಹನೂರು ತಹಶೀಲ್ದಾರ್‌ ಚೈತ್ರಾ ಅವರು ಆದೇಶ ಹೊರಡಿಸಿದ್ದಾರೆ.

ಜಾಮೀನಿನ ಮೇಲೆ ಜೈಲಿನಿಂದ ಇಮ್ಮಡಿ ಮಹದೇವಸ್ವಾಮಿ ಹೊರ ಬಂದಿದ್ದಾನೆ. ಸಾಲೂರು ಮಠದಲ್ಲಿ ನಡೆಯಲಿರುವ ಪಟ್ಟದ ಮಹದೇವಸ್ವಾಮಿಯ 32ನೇ ಸಂಸ್ಮರಣೋತ್ಸವದಲ್ಲಿ ಭಾಗವಹಿಸಲು ಆರೋಪಿ ಇಮ್ಮಡಿ ಮಹದೇವಸ್ವಾಮಿ ಮುಂದಾಗಿದ್ದನು. ಆರೋಪಿ ಭಾಗಿಯಾದರೆ ಪ್ರತಿಭಟನೆ ಮಾಡುವುದಾಗಿ ಸಂತ್ರಸ್ತರು ಹಾಗೂ ದಲಿತ ಸಂಘಟನೆಗಳು ಎಚ್ಚರಿಕೆ ನೀಡಿದ್ದರು.

ಇಮ್ಮಡಿ ಮಹದೇವಸ್ವಾಕಿ ಭಾಗಿಯಾದರೆ ಗಲಭೆ, ಶಾಂತಿಭಂಗ ಉಂಟಾಗುವ ಸಾಧ್ಯತೆಯಿದೆ. ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಇಂದಿನಿಂದ ಮುಂದಿನ ಆದೇಶದವರೆಗೂ ಮಹದೇಶ್ವರ ಬೆಟ್ಟಕ್ಕೆ ಆರೋಪಿಗೆ ಪ್ರವೇಶ ನಿಷೇಧಿಸಲಾಗಿದೆ.

 

Tags:
error: Content is protected !!