ಚಾಮರಾಜನಗರ

ಕಬಿನಿ ಹೊರಹರಿವು ಹೆಚ್ಚಳ: ಕೊಳ್ಳೇಗಾಲ ತಾಲ್ಲೂಕಿನ 9 ಗ್ರಾಮಗಳಿಗೆ ಮುಳುಗಡೆ ಭೀತಿ

ಕೊಳ್ಳೇಗಾಲ: ಕಬಿನಿ ಜಲಾಶಯದಿಂದ 20 ಸಾವಿರ ಕ್ಯೂಸೆಕ್‌ ನೀರನ್ನು ನದಿಗೆ ಹರಿಸುತ್ತಿರುವುದರಿಂದ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ.

ಸಾಮಾನ್ಯವಾಗಿ ಜುಲೈ ಹಾಗೂ ಆಗಸ್ಟ್‌ನಲ್ಲಿ ಕಬಿನಿ ಹಾಗೂ ಕೆಆರ್‌ಎಸ್‌ನಿಂದ ನೀರು ಹೊರಬಿಡುವುದರಿಂದ ನದಿ ಪಾತ್ರದ ಗ್ರಾಮಗಳು ಮುಳುಗಡೆ ಭೀತಿ ಎದುರಿಸುತ್ತವೆ. ತಾಲ್ಲೂಕಿನ ಮುಳ್ಳೂರು, ಹಳೆ ಹಂಪಾಪುರ, ದಾಸನಪುರ, ಹಳೆ ಅಣಗಳ್ಳಿ, ಹರಳೆ, ಸರಗೂರು, ಧನಗೆರೆ, ಸತ್ತೇಗಾಲ, ಯಡಕುರಿಯಾ ಗ್ರಾಮಗಳಲ್ಲಿ ಆತಂಕ ಮನೆಮಾಡುತ್ತದೆ.

ಕಾವೇರಿ ನದಿಯಲ್ಲಿ ನೀರು ಹೆಚ್ಚಾದ ಕೂಡಲೇ 9 ಗ್ರಾಮಗಳು ಭಾಗಶಃ ಮುಳುಗಡೆಯಾಗುತ್ತವೆ. ಸಾವಿರಾರು ಎಕರೆ ಕೃಷಿ ಭೂಮಿಯೂ ಜಲಾವೃತಗೊಂಡು ಬೆಳೆ ನಷ್ಟ ಸಂಭವಿಸುತ್ತದೆ. ಈ ಬಾರಿಯೂ ಮುಳುಗಡೆಯಾಗಬಹುದು ಎಂದು ಗ್ರಾಮಸ್ಥರು ಆತಂಕದಲ್ಲಿದ್ದಾರೆ.

ಕಳೆದ ವರ್ಷ ಸರಿಯಾಗಿ ಮಳೆಯಾಗದ ಕಾರಣ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿರಲಿಲ್ಲ. ಆದರೆ ಈ ವರ್ಷ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಗಳು ಮುಳುಗಡೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬಂತಾಗಿದೆ.

ಇನ್ನೂ ಕೇರಳದ ವಯನಾಡು ಹಾಗೂ ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಕಬಿನಿ ಹಾಗೂ ಕೆಆರ್‌ಎಸ್‌ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಜಲಾಶಯಗಳಿಂದ ಭಾರೀ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ಗ್ರಾಮಗಳಿಗೆ ಜಲಕಂಟಕ ಎದುರಾಗಿದೆ.

ಮುಳುಗಡೆ ಭೀತಿಯಿಂದ ಬೇಸತ್ತು ಹೋಗಿರುವ ಗ್ರಾಮಸ್ಥರುಗಳು, ಗ್ರಾಮವನ್ನೇ ತೊರೆದು ಹೋಗುವ ನಿರ್ಧಾರ ಮಾಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

2 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

8 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

8 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

8 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

8 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

8 hours ago