ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಇವಿಎಂ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭಿತಿಯಲ್ಲಿದ್ದ ಗ್ರಾಮದ ಜನರು ಕಾಡಿನಲ್ಲಿ ಅವಿತಿದ್ದರು. ಈ ಜನರ ಮನವೊಲಿಸಿ ಮತ್ತೆ ಗ್ರಾಮಕ್ಕೆ ಕರೆತರುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿದೆ.
ಬಳಿಕ ಗ್ರಾಮಸ್ಥರೊಂದಿಗೆ ಮಾತನಾಡಿರುವ ಜಿಲ್ಲಾಡಳಿತ, ಪ್ರಕರಣದಲ್ಲಿ ಭಾಗಿಯಾಗಿರುವವರ ಮೇಲೆ ಮಾತ್ರ ಕ್ರಮ ಕೈಗೊಳ್ಳಲಾಗುವುದು, ಉಳಿದವರು ಹೆದರುವ ಅವಶ್ಯಕತೆಯಿಲ್ಲ, ನಿರ್ಭೀತಿಯಿಂದ ಇರಬಹುದು ಎಂದು ಧೈರ್ಯ ತುಂಬಿದರು.
ಇದರಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಡಿವೈಎಸ್ಪಿ ಧರ್ಮೇಂದ್ರ ಹಾಗೂ ಉಪವಿಭಾಗಾಧಿಕಾರಿ ಶಿವಮೂರ್ತಿ ಇದ್ದರು.
ಬಂಧನದ ಭೀತಿಯಿಂದ ಕಾಡಿನಲ್ಲಿ ಅಡಗಿಕೊಂಡಿದ್ದ ಗ್ರಾಮಸ್ಥರಿಗೆ ಸರಿಯಾದ ಊಟ ಆಹಾರವಿಲ್ಲದೇ ಉಪವಾಸ ಅನುಭವಿಸಿದ್ದರು. ಸರಿಯಾದ ಮೇವು ನೀರು ಸಿಗದೇ ಗ್ರಾಮದಲ್ಲಿ ಎರಡು ಎಮ್ಮೆಗಳು ಸತ್ತಿದ್ದವು. ಇದನ್ನು ಮನಗಂಡ ಜಿಲ್ಲಾಡಳಿತ ಗ್ರಾಮಸ್ಥರ ಮನವೊಲಿಸಿ ಕಾಡಿನಿಂದ ನಾಡಿಗೆ ಅವರನ್ನು ಕರೆತಂದಿದ್ದಾರೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…