ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಇವಿಎಂ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭಿತಿಯಲ್ಲಿದ್ದ ಗ್ರಾಮದ ಜನರು ಕಾಡಿನಲ್ಲಿ ಅವಿತಿದ್ದರು. ಈ ಜನರ ಮನವೊಲಿಸಿ ಮತ್ತೆ ಗ್ರಾಮಕ್ಕೆ ಕರೆತರುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿದೆ.
ಬಳಿಕ ಗ್ರಾಮಸ್ಥರೊಂದಿಗೆ ಮಾತನಾಡಿರುವ ಜಿಲ್ಲಾಡಳಿತ, ಪ್ರಕರಣದಲ್ಲಿ ಭಾಗಿಯಾಗಿರುವವರ ಮೇಲೆ ಮಾತ್ರ ಕ್ರಮ ಕೈಗೊಳ್ಳಲಾಗುವುದು, ಉಳಿದವರು ಹೆದರುವ ಅವಶ್ಯಕತೆಯಿಲ್ಲ, ನಿರ್ಭೀತಿಯಿಂದ ಇರಬಹುದು ಎಂದು ಧೈರ್ಯ ತುಂಬಿದರು.
ಇದರಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಡಿವೈಎಸ್ಪಿ ಧರ್ಮೇಂದ್ರ ಹಾಗೂ ಉಪವಿಭಾಗಾಧಿಕಾರಿ ಶಿವಮೂರ್ತಿ ಇದ್ದರು.
ಬಂಧನದ ಭೀತಿಯಿಂದ ಕಾಡಿನಲ್ಲಿ ಅಡಗಿಕೊಂಡಿದ್ದ ಗ್ರಾಮಸ್ಥರಿಗೆ ಸರಿಯಾದ ಊಟ ಆಹಾರವಿಲ್ಲದೇ ಉಪವಾಸ ಅನುಭವಿಸಿದ್ದರು. ಸರಿಯಾದ ಮೇವು ನೀರು ಸಿಗದೇ ಗ್ರಾಮದಲ್ಲಿ ಎರಡು ಎಮ್ಮೆಗಳು ಸತ್ತಿದ್ದವು. ಇದನ್ನು ಮನಗಂಡ ಜಿಲ್ಲಾಡಳಿತ ಗ್ರಾಮಸ್ಥರ ಮನವೊಲಿಸಿ ಕಾಡಿನಿಂದ ನಾಡಿಗೆ ಅವರನ್ನು ಕರೆತಂದಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…