ಚಾಮರಾಜನಗರ

ಪರಿಶಿಷ್ಟ ಜಾತಿ ನೌಕರರಿಗೆ ಬಡ್ತಿಯಲ್ಲಿ ಅನ್ಯಾಯ : ಬಿಎಸ್ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಆರೋಪ

ಚಾಮರಾಜನಗರ : ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಎಸ್ಸಿ, ಎಸ್ಪಿ ನೌಕರರಿಗೆ ನೇಮಕಾತಿ ಹಾಗೂ ಬಡ್ತಿ ವಿಚಾರದಲ್ಲಿ ಅನ್ಯಾಯ ಮಾಡುತ್ತಿದೆ ಎಂದು ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಆರೋಪಿಸಿದರು.

ರಾಜ್ಯದ ಅಧಿಕಾರ ಹಿಡಿಯಲು ದಲಿತ ಪರ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರ ರಾಜ್ಯದ ೩೧ ಜಿಲ್ಲೆಗಳ ಪೈಕಿ ಕೇವಲ ಕೋಲಾರ ಜಿಲ್ಲೆಗೆ ಮಾತ್ರ ಎಸ್ಸಿಗೆ ಸೇರಿದ ಜಿಲ್ಲಾಧಿಕಾರಿಯನ್ನು ನೇಮಿಸಿದೆ. ಆ ಮೂಲಕ ಎಸ್ಸಿ, ಎಸ್ಟಿ ಜನಾಂಗದ ಐಎಎಸ್ ಅಧಿಕಾರಿಗಳಿಗೆ ಮಹತ್ವದ ಹುದ್ದೆಗಳನ್ನು ನೀಡದೆ ವಂಚಿಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.

ರಾಜ್ಯದ ಪದವಿ ಪೂರ್ವ ಶಿಕ್ಷಣ, ಗೃಹ, ಅರಣ್ಯ, ತೋಟಗಾರಿಕೆ, ಕೃಷಿ, ನಗರಾಭಿವೃದ್ಧಿ, ಸಾರಿಗೆ, ಡಿಪಿಎಆರ್, ಇಂಧನ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಮುಂಬಡ್ತಿಗೆ ಅರ್ಹರಾಗಿರುವ ಎಸ್ಸಿ, ಎಸ್ಪಿ ನೌಕರರಿಗೆ ಸಕಾಲದಲ್ಲಿ ಬಡ್ತಿ ನೀಡದೆ ವಂಚಿಸಲಾಗಿದೆ. ಕೃಷಿ ಇಲಾಖೆಯಲ್ಲಿ ೫೦ ಎಸ್ಸಿ, ಎಸ್‌ಟಿ ಅಧಿಕಾರಿಗಳಿಗೆ ಬಡ್ತಿ ನೀಡಿಲ್ಲ. ಸಹಾಯಕ ತೋಟಗಾರಿಕೆ ನಿರ್ದೇಶಕರ ಹುದ್ದೆಗಳಿಗೆ ರೋಸ್ಟರ್ ಪದ್ಧತಿ ಅಳವಡಿಸಿಲ್ಲ ಎಂದು ದೂರಿದರು.

ಸಾಂವಿಧಾನಿಕ ಸಂಸ್ಥೆಯಾಗಿರುವ ಶಾಸಕ ಪಿ.ಎಂ.ನರೇಂದ್ರಸ್ವಾಮಿ ನೇತೃತ್ವದ ಸದನ ಸಮಿತಿಯ ಆದೇಶವನ್ನು ಕಡೆಗಣಿಸಿ ಎಸ್ಸಿ, ಎಸ್ಟಿ ಜನಾಂಗದ ೮೦ ಉಪನ್ಯಾಸಕರಿಗೆ ಅನ್ಯಾಯ ಮಾಡಲೆಂದೆ ಇತರರಿಗೆ ಬಡ್ತಿ ನೀಡಲಾಗಿದೆ. ಆ ಮೂಲಕ ಸಮಿತಿಗೆ ಯಾವುದೇ ಮಹತ್ವ ಇಲ್ಲ ಎಂದು ಸಾಬೀತುಪಡಿಸಿದೆ ಎಂದರು.

ಎಸ್ಸಿ, ಎಸ್ಪಿ ನೌಕರರಿಗೆ ಇಷ್ಟೆಲ್ಲ ಅನ್ಯಾಯವಾಗುತ್ತಿದ್ದರೂ ಕೂಡ ಎಸ್ಸಿ, ಎಸ್ಟಿ ಜನಾಂಗದ ಸಂಪುಟ ದರ್ಜೆ ಸಚಿವರು ಹಾಗೂ ಮೀಸಲು ಕ್ಷೇತ್ರಗಳಿಂದ ಗೆದ್ದಿರುವ ಶಾಸಕರು ಬಾಯಿ ಮುಚ್ಚಿಕೊಂಡು ಕುಳಿತಿರುವುದು ವಿಪರ್ಯಾಸ. ಇವರು ಮೌನವಾಗಿರುವುದೇಕೆ ಎಂದು ಪ್ರಶ್ನಿಸಿದರು.

ಎರಡೂವರೆ ವರ್ಷಗಳಿಂದ ಎಸ್ಸಿ, ಎಸ್ಪಿ ಆಯೋಗಕ್ಕೆ ಅಧ್ಯಕ್ಷರನ್ನೇ ನೇಮಕ ಮಾಡದೆ ಕಾಂಗ್ರೆಸ್ ಸರ್ಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ. ಕಾಂಗ್ರೆಸ್ ಸರ್ಕಾರ ಈ ಅನ್ಯಾಯವನ್ನು ಸರಿಪಡಿಸದಿದ್ದರೆ ಈ ದಲಿತ ವಿರೋಧಿ ನೀತಿ ಖಂಡಿಸಿ ಮುಂದಿನ ದಿನಗಳಲ್ಲಿ ಬಿಎಸ್ಪಿ ಪಕ್ಷದ ವತಿಯಿಂದ ಹೋರಾಟ ಮಾಡಬೇಕಾಗುತ್ತದೆ. ಇದಲ್ಲದೆ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ತಿಳಿಸಿದರು.

ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಎನ್.ನಾಗಯ್ಯ, ರಾಜ್ಯ ಸಮಿತಿ ಸದಸ್ಯ ಬ್ಯಾಡಮೂಡ್ಲು ಬಸವಣ್ಣ, ಜಿಲ್ಲಾ ಉಸ್ತುವಾರಿ ಪುಟ್ಟಸ್ವಾಮಿ, ಜಿಲ್ಲಾಧ್ಯಕ್ಷ ಬ.ಮ.ಕೃಷ್ಣಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್, ಮುಖಂಡ ಎಸ್.ಪಿ.ಮಹೇಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

10 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

10 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

10 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

11 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

11 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

11 hours ago