ಚಾಮರಾಜನಗರ :ನಗರದ ವಿವಿಧ ಕಡೆಗಳಲ್ಲಿ ಸುನೀಲ್ ಬೋಸ್ ವಿರುದ್ಧ ಭಿತ್ತಿಪತ್ರಗಳು ಬುಧವಾರ ಬೆಳಿಗ್ಗೆ ಕಂಡು ಬಂದವು.
ಬೋಸ್ ಅವರ ಫೋಟೊ ಹಾಕಿದ್ದ ಭಿತ್ತಿ ಪತ್ರದಲ್ಲಿ ‘ಮರಳು ಮಾಫಿಯಾದ ಅನಭಿಷಿಕ್ತ ದೊರೆ ಗೋ ಬ್ಯಾಕ್’ ಎಂದು ಬರೆಯಲಾಗಿತ್ತು. ವಿಷಯಗೊತ್ತಾಗುತ್ತಿದ್ದಂತೆಯೇ ಪೊಲೀಸರು ಭಿತ್ತಿಪತ್ರಗಳನ್ನು ತೆರವುಗೊಳಿಸಿದರು.
ಈ ಬಗ್ಗೆ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸುನೀಲ್ ಬೋಸ್, ‘ಹೈಕೋರ್ಟ್ ನಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ನಾನು ನಿರ್ದೋಷಿ ಎಂದು ಕೋರ್ಟ್ ಹೇಳಿದೆ. ಇದು ಬಿಜೆಪಿಯರ ಕೃತ್ಯ ಇರಬಹುದು. ಬಿಜೆಪಿಯವರಿಗೆ ಬೇರೆ ಯಾವುದೇ ಕೆಲಸಗಳಿಲ್ಲ. ಹತಾಶರಾಗಿ ಈ ರೀತಿ ಮಾಡುತ್ತಿದ್ದಾರೆ’ ಎಂದರು.
ಒಂದು ವೇಳೆ ಆರೋಪ ಸಾಭೀತು ಮಾಡಿದರೆ ನಾನು ನಾಮ ಪತ್ರ ಸಲ್ಲಿಸುವುದಿಲ್ಲ ಎಂದು ತಿಳಿಸಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…