ಚಾಮರಾಜನಗರ

ಹನೂರು| ಫೆ.25ರಂದು ವಾಂಗಾಳಿ ಅಮ್ಮನವರ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ವಾಂಗಾಳಿ ಅಮ್ಮನವರ ವಿಗ್ರಹ ಪ್ರತಿಷ್ಠಾಪನೆ ಹಾಗೂ ದೇವಾಲಯದ ವಿಮಾನ ಗೋಪುರ, ಕಳಸ ಪ್ರತಿಷ್ಠಾಪನೆ ಕಾರ್ಯಕ್ರಮವೂ ಫೆಬ್ರವರಿ 25ರಂದು ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಾಯಿಯ ಕೃಪೆಗೆ ಪಾತ್ರರಾಗುವಂತೆ ವಾಂಗಾಳಿ ಅಮ್ಮನವರ ಸಮಿತಿಯ ಸದಸ್ಯರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ತಾಲ್ಲೂಕಿನ ಚಂಗವಾಡಿ ಗ್ರಾಮದಲ್ಲಿ ನೂತನವಾಗಿ ಲೋಕಾರ್ಪಣೆಗೊಳ್ಳುತ್ತಿರುವ ವಾಂಗಾಳಿ ಅಮ್ಮನವರ ದೇವಾಲಯದ ಪೂಜಾ ಪುನಸ್ಕಾರಗಳನ್ನು ಇದೇ ತಿಂಗಳ 25ರ ಬುಧವಾರದಂದು ಹಮ್ಮಿಕೊಳ್ಳಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕು ಎಂದು ಪ್ರಕಟಣೆ ಹೊರಡಿಸಿದ್ದಾರೆ.

25ರ ಬುಧವಾರ ಸಂಜೆ 3:30ಕ್ಕೆ ಸಕಲ ಮಂಗಳವಾದ್ಯಗಳೊಂದಿಗೆ ಗಂಗಾ ಪೂಜೆ ಮಾಡಿ ಗಂಗೆ ತರುವುದು. ನಂತರ ಗಣಪತಿ ಪೂಜೆ ಪುಣ್ಯಾಹ ವಾಚನ ಮೃತಿಕಾ ಸಂಗ್ರಹಣ ಮಹಾಮಂಗಳಾರತಿ ಕಾರ್ಯಕ್ರಮಗಳು ನಡೆಯಲಿದೆ. 26ರ ಗುರುವಾರದಂದು ಬೆಳಗ್ಗೆ 8:30ರಿಂದ ಬಿಂಬಕ್ಕೆ ಜಲದಿವಾಸ, ಕ್ಷೀರಾದಿವಾಸ ಅಗ್ನಿ ಪ್ರತಿಷ್ಠೆ ಮೂಲ ಮಂತ್ರ ಹೋಮ, ಅಂಗಹೋಮ, ಸ್ಪರ್ಶ ಹೋಮ, ದುರ್ಗ ಹೋಮ, ಗಣಪತಿ ಹೋಮ, ಕ್ರಿಯಾ ಹೋಮ, ಮಂಗಳಾರತಿ ನಂತರ ಅಷ್ಟ ಬಂಧನ ಪೂರ್ವಕ ದೇವಿಯ ಸ್ಥಿರ ಬಿಂಬ ಪ್ರತಿಷ್ಠ, ಗಣಪತಿ ಪ್ರತಿಷ್ಠ ವಿಮಾನ ಗೋಪುರ ಕಳಸ ಪ್ರತಿಷ್ಠಾಪನೆ ಮಹಾಮಂಗಳಾರತಿ ನಡೆಯಲಿದೆ.

27ರ ಶುಕ್ರವಾರದಂದು ಬೆಳಗ್ಗೆ 7:30 ರಿಂದ ನಿತ್ಯ ಹೋಮ, ದೇವಿಯ ಪ್ರಾಣ ಪ್ರತಿಷ್ಠೆ, ನಾಡಿಸಂಧಾನ ತತ್ವನ್ಯಾಸ ಮಹಾನ್ಯಾಸ, ಪ್ರತಿಷ್ಠ ಹೋಮ, ಪಂಚಾಮೃತ ಅಭಿಷೇಕ, ಕಲಾ ಹೋಮ, ತತ್ವ ಹೋಮ ಹೀಗೆ 10ರಿಂದ 10.50 ರಲ್ಲಿ ಸಲ್ಲುವ ಶುಭ ಮೇಷ ಲಗ್ನದಲ್ಲಿ ದೇವಿಗೆ ಕುಂಭಾಭಿಷೇಕ, ವಿಶೇಷ ಅಲಂಕಾರ, ಅಷ್ಟಾವಧಾನ ಸೇವೆ, ನಿರೀಕ್ಷಣ ಮಧ್ಯಾಹ್ನ 12:30 ಕ್ಕೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಇದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಶ್ರೀ ವಾಂಗಾಳಿ ಅಮ್ಮನವರ ಕೃಪೆಗೆ ಪಾತ್ರರಾಗಬೇಕೆಂದು ವಾಂಗಾಳಿ ಅಮ್ಮನವರ ದೇವಸ್ಥಾನದ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ʻಮನ್‌ ಕಿ ಬಾತ್‌ʼನಲ್ಲಿ ಕರ್ನಾಟಕದ ರೈತರನ್ನು ಪ್ರಶಂಸಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ರೈತರ…

5 mins ago

ಮುಂದಿನ ಮುಖ್ಯಮಂತ್ರಿ ದಲಿತ ನಾಯಕರೇ ಆಗಬೇಕು : ಹೈಕಮಾಂಡ್‌ಗೆ ಎಚ್‌ಸಿ ಮಹದೇವಪ್ಪ ಒತ್ತಾಯ

ಮಡಿಕೇರಿ : ಕರ್ನಾಟಕದಲ್ಲಿ ಮುಂದಿನ ಮುಖ್ಯಮಂತ್ರಿಯಾಗಿ ದಲಿತ ನಾಯಕರೇ ಆಗಬೇಕು ಎಂದು ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರು ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ.…

21 mins ago

ಮುಂದಿನ ವಾರ ಡಿಸಿಎಂ ಡಿಕೆಶಿ ಮತ್ತೆ ದೆಹಲಿಗೆ

ಬೆಂಗಳೂರು: ನಾನು ದೆಹಲಿಗೆ ಹೋಗುವುದು ಬರುವುದು ಇದ್ದೇ ಇರುತ್ತದೆ. ನಾನು ಹೋಗದೇ ಮತ್ಯಾರು ಹೋಗುತ್ತಾರೆ? ಅವರು ಯಾವಾಗ ಕರೆಯುತ್ತಾರೋ ಆಗೆಲ್ಲಾ…

2 hours ago

ಪರಪ್ಪನ ಅಗ್ರಹಾರ ಜೈಲು ಸೇರಿದ ಶಾಸಕ ಚಂದ್ರು ಲಮಾಣಿ

ಬೆಂಗಳೂರು: ಗದಗ ಜಿಲ್ಲೆ ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ನ್ಯಾಯಾಂಗ ಬಂಧನಕ್ಕೆ…

2 hours ago

ಕುರ್ಚಿಗಾಗಿ ಜಾತಿ ಎಳೆದು ತಂದಿದ್ದಾರೆ ಎಂಬ ಎಚ್‌ಡಿಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್‌

ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ…

3 hours ago

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮತ್ತೆ ಆಸ್ಪತ್ರೆಗೆ ದಾಖಲು

ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್‌ ಪಕ್ಷದ ಮುಖ್ಯಸ್ಥ ಶರದ್‌ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್‌ ಪವಾರ್‌…

3 hours ago