ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ವಾಂಗಾಳಿ ಅಮ್ಮನವರ ವಿಗ್ರಹ ಪ್ರತಿಷ್ಠಾಪನೆ ಹಾಗೂ ದೇವಾಲಯದ ವಿಮಾನ ಗೋಪುರ, ಕಳಸ ಪ್ರತಿಷ್ಠಾಪನೆ ಕಾರ್ಯಕ್ರಮವೂ ಫೆಬ್ರವರಿ 25ರಂದು ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಾಯಿಯ ಕೃಪೆಗೆ ಪಾತ್ರರಾಗುವಂತೆ ವಾಂಗಾಳಿ ಅಮ್ಮನವರ ಸಮಿತಿಯ ಸದಸ್ಯರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ತಾಲ್ಲೂಕಿನ ಚಂಗವಾಡಿ ಗ್ರಾಮದಲ್ಲಿ ನೂತನವಾಗಿ ಲೋಕಾರ್ಪಣೆಗೊಳ್ಳುತ್ತಿರುವ ವಾಂಗಾಳಿ ಅಮ್ಮನವರ ದೇವಾಲಯದ ಪೂಜಾ ಪುನಸ್ಕಾರಗಳನ್ನು ಇದೇ ತಿಂಗಳ 25ರ ಬುಧವಾರದಂದು ಹಮ್ಮಿಕೊಳ್ಳಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕು ಎಂದು ಪ್ರಕಟಣೆ ಹೊರಡಿಸಿದ್ದಾರೆ.
25ರ ಬುಧವಾರ ಸಂಜೆ 3:30ಕ್ಕೆ ಸಕಲ ಮಂಗಳವಾದ್ಯಗಳೊಂದಿಗೆ ಗಂಗಾ ಪೂಜೆ ಮಾಡಿ ಗಂಗೆ ತರುವುದು. ನಂತರ ಗಣಪತಿ ಪೂಜೆ ಪುಣ್ಯಾಹ ವಾಚನ ಮೃತಿಕಾ ಸಂಗ್ರಹಣ ಮಹಾಮಂಗಳಾರತಿ ಕಾರ್ಯಕ್ರಮಗಳು ನಡೆಯಲಿದೆ. 26ರ ಗುರುವಾರದಂದು ಬೆಳಗ್ಗೆ 8:30ರಿಂದ ಬಿಂಬಕ್ಕೆ ಜಲದಿವಾಸ, ಕ್ಷೀರಾದಿವಾಸ ಅಗ್ನಿ ಪ್ರತಿಷ್ಠೆ ಮೂಲ ಮಂತ್ರ ಹೋಮ, ಅಂಗಹೋಮ, ಸ್ಪರ್ಶ ಹೋಮ, ದುರ್ಗ ಹೋಮ, ಗಣಪತಿ ಹೋಮ, ಕ್ರಿಯಾ ಹೋಮ, ಮಂಗಳಾರತಿ ನಂತರ ಅಷ್ಟ ಬಂಧನ ಪೂರ್ವಕ ದೇವಿಯ ಸ್ಥಿರ ಬಿಂಬ ಪ್ರತಿಷ್ಠ, ಗಣಪತಿ ಪ್ರತಿಷ್ಠ ವಿಮಾನ ಗೋಪುರ ಕಳಸ ಪ್ರತಿಷ್ಠಾಪನೆ ಮಹಾಮಂಗಳಾರತಿ ನಡೆಯಲಿದೆ.
27ರ ಶುಕ್ರವಾರದಂದು ಬೆಳಗ್ಗೆ 7:30 ರಿಂದ ನಿತ್ಯ ಹೋಮ, ದೇವಿಯ ಪ್ರಾಣ ಪ್ರತಿಷ್ಠೆ, ನಾಡಿಸಂಧಾನ ತತ್ವನ್ಯಾಸ ಮಹಾನ್ಯಾಸ, ಪ್ರತಿಷ್ಠ ಹೋಮ, ಪಂಚಾಮೃತ ಅಭಿಷೇಕ, ಕಲಾ ಹೋಮ, ತತ್ವ ಹೋಮ ಹೀಗೆ 10ರಿಂದ 10.50 ರಲ್ಲಿ ಸಲ್ಲುವ ಶುಭ ಮೇಷ ಲಗ್ನದಲ್ಲಿ ದೇವಿಗೆ ಕುಂಭಾಭಿಷೇಕ, ವಿಶೇಷ ಅಲಂಕಾರ, ಅಷ್ಟಾವಧಾನ ಸೇವೆ, ನಿರೀಕ್ಷಣ ಮಧ್ಯಾಹ್ನ 12:30 ಕ್ಕೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಇದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಶ್ರೀ ವಾಂಗಾಳಿ ಅಮ್ಮನವರ ಕೃಪೆಗೆ ಪಾತ್ರರಾಗಬೇಕೆಂದು ವಾಂಗಾಳಿ ಅಮ್ಮನವರ ದೇವಸ್ಥಾನದ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…