ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ವಾಂಗಾಳಿ ಅಮ್ಮನವರ ವಿಗ್ರಹ ಪ್ರತಿಷ್ಠಾಪನೆ ಹಾಗೂ ದೇವಾಲಯದ ವಿಮಾನ ಗೋಪುರ, ಕಳಸ ಪ್ರತಿಷ್ಠಾಪನೆ ಕಾರ್ಯಕ್ರಮವೂ ಫೆಬ್ರವರಿ 25ರಂದು ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಾಯಿಯ ಕೃಪೆಗೆ ಪಾತ್ರರಾಗುವಂತೆ ವಾಂಗಾಳಿ ಅಮ್ಮನವರ ಸಮಿತಿಯ ಸದಸ್ಯರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ತಾಲ್ಲೂಕಿನ ಚಂಗವಾಡಿ ಗ್ರಾಮದಲ್ಲಿ ನೂತನವಾಗಿ ಲೋಕಾರ್ಪಣೆಗೊಳ್ಳುತ್ತಿರುವ ವಾಂಗಾಳಿ ಅಮ್ಮನವರ ದೇವಾಲಯದ ಪೂಜಾ ಪುನಸ್ಕಾರಗಳನ್ನು ಇದೇ ತಿಂಗಳ 25ರ ಬುಧವಾರದಂದು ಹಮ್ಮಿಕೊಳ್ಳಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕು ಎಂದು ಪ್ರಕಟಣೆ ಹೊರಡಿಸಿದ್ದಾರೆ.
25ರ ಬುಧವಾರ ಸಂಜೆ 3:30ಕ್ಕೆ ಸಕಲ ಮಂಗಳವಾದ್ಯಗಳೊಂದಿಗೆ ಗಂಗಾ ಪೂಜೆ ಮಾಡಿ ಗಂಗೆ ತರುವುದು. ನಂತರ ಗಣಪತಿ ಪೂಜೆ ಪುಣ್ಯಾಹ ವಾಚನ ಮೃತಿಕಾ ಸಂಗ್ರಹಣ ಮಹಾಮಂಗಳಾರತಿ ಕಾರ್ಯಕ್ರಮಗಳು ನಡೆಯಲಿದೆ. 26ರ ಗುರುವಾರದಂದು ಬೆಳಗ್ಗೆ 8:30ರಿಂದ ಬಿಂಬಕ್ಕೆ ಜಲದಿವಾಸ, ಕ್ಷೀರಾದಿವಾಸ ಅಗ್ನಿ ಪ್ರತಿಷ್ಠೆ ಮೂಲ ಮಂತ್ರ ಹೋಮ, ಅಂಗಹೋಮ, ಸ್ಪರ್ಶ ಹೋಮ, ದುರ್ಗ ಹೋಮ, ಗಣಪತಿ ಹೋಮ, ಕ್ರಿಯಾ ಹೋಮ, ಮಂಗಳಾರತಿ ನಂತರ ಅಷ್ಟ ಬಂಧನ ಪೂರ್ವಕ ದೇವಿಯ ಸ್ಥಿರ ಬಿಂಬ ಪ್ರತಿಷ್ಠ, ಗಣಪತಿ ಪ್ರತಿಷ್ಠ ವಿಮಾನ ಗೋಪುರ ಕಳಸ ಪ್ರತಿಷ್ಠಾಪನೆ ಮಹಾಮಂಗಳಾರತಿ ನಡೆಯಲಿದೆ.
27ರ ಶುಕ್ರವಾರದಂದು ಬೆಳಗ್ಗೆ 7:30 ರಿಂದ ನಿತ್ಯ ಹೋಮ, ದೇವಿಯ ಪ್ರಾಣ ಪ್ರತಿಷ್ಠೆ, ನಾಡಿಸಂಧಾನ ತತ್ವನ್ಯಾಸ ಮಹಾನ್ಯಾಸ, ಪ್ರತಿಷ್ಠ ಹೋಮ, ಪಂಚಾಮೃತ ಅಭಿಷೇಕ, ಕಲಾ ಹೋಮ, ತತ್ವ ಹೋಮ ಹೀಗೆ 10ರಿಂದ 10.50 ರಲ್ಲಿ ಸಲ್ಲುವ ಶುಭ ಮೇಷ ಲಗ್ನದಲ್ಲಿ ದೇವಿಗೆ ಕುಂಭಾಭಿಷೇಕ, ವಿಶೇಷ ಅಲಂಕಾರ, ಅಷ್ಟಾವಧಾನ ಸೇವೆ, ನಿರೀಕ್ಷಣ ಮಧ್ಯಾಹ್ನ 12:30 ಕ್ಕೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಇದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಶ್ರೀ ವಾಂಗಾಳಿ ಅಮ್ಮನವರ ಕೃಪೆಗೆ ಪಾತ್ರರಾಗಬೇಕೆಂದು ವಾಂಗಾಳಿ ಅಮ್ಮನವರ ದೇವಸ್ಥಾನದ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…