ಹನೂರು: ಕಾಶ್ಮೀರದ ಉಗ್ರದಾಳಿಯಲ್ಲಿ ಗುಪ್ತಚರ ಇಲಾಖೆ ವೈಫಲ್ಯ (Intelligence failure) ಇದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಪುಲ್ವಾಮ ದಾಳಿಯಲ್ಲಿ 40 ಮಂದಿ ಸೈನಿಕರು ಅಸುನೀಗಿದ್ದರು, ಮೊನ್ನೆ ಘಟನೆಯಲ್ಲಿ 26 ಮಂದಿ ನಾಗರಿಕರು ಅಸುನೀಗಿದ್ದಾರೆ. ಪುಲ್ವಾಮ ದಾಳಿ ಬಳಿಕ ಕೇಂದ್ರ ಸರ್ಕಾರ ವಿರಮಿಸಬಾರದಿತ್ತು, ಮೂರನೇ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದರು.
ಮೊನ್ನೆ ನಡೆದ ಉಗ್ರದಾಳಿ ಅತ್ಯಂತ ಅಮಾನವೀಯ ಹೇಯ ಕೃತ್ಯ, ಮೃತ ಕುಟುಂಬಸ್ಥರ ಜೊತೆ ನಾವಿದ್ದು ಎಲ್ಲರಿಗೂ 10 ಲಕ್ಷ ಪರಿಹಾರ ಕೊಟ್ಟಿದ್ದೇವೆ, ಬಹಳ ಎಚ್ಚರಿಕೆಯಿಂದ ಇರಬೇಕೆಂರು ಪೊಲೀಸರಿಗೆ ಸೂಚನೆ ಕೊಟ್ಟಿದ್ದೇನೆ ಎಂದರು.
ಉಗ್ರರು ಎಲ್ಲೇ ಇರಲಿ, ಯಾವ ಜಾತಿ- ಧರ್ಮದವರೇ ಆಗಿರಲಿ ಅವರನ್ನು ಮಟ್ಟ ಹಾಕಬೇಕು, ಕೇಂದ್ರ ಸರ್ಕಾರವು ಉಗ್ರ ಚಟುವಟಿಕೆ ಬೆಳೆಯಲು, ನಡೆಸಲು ಕೇಂದ್ರ ಸರ್ಕಾರ ಅವಕಾಶ ಕೊಡಬಾರದು ಎಂದರು.
ಇದೇ ವೇಳೆ ಮೇಕೆದಾಟು ವಿಚಾರ ಸಂಬಂಧ ಮಾತನಾಡಿ , ಮೇಕೆದಾಟು ಯೋಜನೆಗೆ ಅನುಮತಿ ಕೊಡಬೇಕಿರುವುದು ಕೇಂದ್ರ ಸರ್ಕಾರ. ಅವರು ಇಂದು ಅನುಮತಿ ಕೊಟ್ಟರೇ ನಾಳೆಯಿಂದಲೇ ಯೋಜನೆ ಅನುಷ್ಟಾನ ಮಾಡುತ್ತೇವೆ. ಕೇಂದ್ರ ಸರ್ಕಾರ ಘೋಚಣೆ ಮಾಡಿದ ಅನುದಾನವನ್ನೇ ಕೊಡುತ್ತಿಲ್ಲ, ರಾಜಕೀಯ ದ್ವೇಷದ ಕಾರಣ ಎನಿಸುತ್ತದೆ ಎಂದರು.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫೆಬ್ರವರಿ.14ರಂದು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಗಳ ನೇತೃತ್ವದಲ್ಲಿ ಹನುಮಾನ್ ಚಾಲೀಸಾ ಪಾರಾಯಣ ಕಾರ್ಯಕ್ರಮ ನಡೆಯಲಿದೆ.…
ಎಚ್.ಡಿ.ಕೋಟೆ: ಶಾರ್ಟ್ ಸರ್ಕ್ಯೂಟ್ನಿಂದ ಸ್ಟೇಷನರಿ ಅಂಗಡಿಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಸುಮಾರು 25 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ…
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…