ಹನೂರು: ಕಾಶ್ಮೀರದ ಉಗ್ರದಾಳಿಯಲ್ಲಿ ಗುಪ್ತಚರ ಇಲಾಖೆ ವೈಫಲ್ಯ (Intelligence failure) ಇದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಪುಲ್ವಾಮ ದಾಳಿಯಲ್ಲಿ 40 ಮಂದಿ ಸೈನಿಕರು ಅಸುನೀಗಿದ್ದರು, ಮೊನ್ನೆ ಘಟನೆಯಲ್ಲಿ 26 ಮಂದಿ ನಾಗರಿಕರು ಅಸುನೀಗಿದ್ದಾರೆ. ಪುಲ್ವಾಮ ದಾಳಿ ಬಳಿಕ ಕೇಂದ್ರ ಸರ್ಕಾರ ವಿರಮಿಸಬಾರದಿತ್ತು, ಮೂರನೇ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದರು.
ಮೊನ್ನೆ ನಡೆದ ಉಗ್ರದಾಳಿ ಅತ್ಯಂತ ಅಮಾನವೀಯ ಹೇಯ ಕೃತ್ಯ, ಮೃತ ಕುಟುಂಬಸ್ಥರ ಜೊತೆ ನಾವಿದ್ದು ಎಲ್ಲರಿಗೂ 10 ಲಕ್ಷ ಪರಿಹಾರ ಕೊಟ್ಟಿದ್ದೇವೆ, ಬಹಳ ಎಚ್ಚರಿಕೆಯಿಂದ ಇರಬೇಕೆಂರು ಪೊಲೀಸರಿಗೆ ಸೂಚನೆ ಕೊಟ್ಟಿದ್ದೇನೆ ಎಂದರು.
ಉಗ್ರರು ಎಲ್ಲೇ ಇರಲಿ, ಯಾವ ಜಾತಿ- ಧರ್ಮದವರೇ ಆಗಿರಲಿ ಅವರನ್ನು ಮಟ್ಟ ಹಾಕಬೇಕು, ಕೇಂದ್ರ ಸರ್ಕಾರವು ಉಗ್ರ ಚಟುವಟಿಕೆ ಬೆಳೆಯಲು, ನಡೆಸಲು ಕೇಂದ್ರ ಸರ್ಕಾರ ಅವಕಾಶ ಕೊಡಬಾರದು ಎಂದರು.
ಇದೇ ವೇಳೆ ಮೇಕೆದಾಟು ವಿಚಾರ ಸಂಬಂಧ ಮಾತನಾಡಿ , ಮೇಕೆದಾಟು ಯೋಜನೆಗೆ ಅನುಮತಿ ಕೊಡಬೇಕಿರುವುದು ಕೇಂದ್ರ ಸರ್ಕಾರ. ಅವರು ಇಂದು ಅನುಮತಿ ಕೊಟ್ಟರೇ ನಾಳೆಯಿಂದಲೇ ಯೋಜನೆ ಅನುಷ್ಟಾನ ಮಾಡುತ್ತೇವೆ. ಕೇಂದ್ರ ಸರ್ಕಾರ ಘೋಚಣೆ ಮಾಡಿದ ಅನುದಾನವನ್ನೇ ಕೊಡುತ್ತಿಲ್ಲ, ರಾಜಕೀಯ ದ್ವೇಷದ ಕಾರಣ ಎನಿಸುತ್ತದೆ ಎಂದರು.
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…
ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…
ಮೈಸೂರು : ನಾನು ಅಹಿಂದ ಚಾಂಪಿಯನ್ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು…