ಚಾಮರಾಜನಗರ

ಫಹಲ್ಗಾಮ್‌ ಉಗ್ರದಾಳಿಯಲ್ಲಿ ಗುಪ್ತಚರ ವೈಫಲ್ಯ : ಸಿಎಂ ಸಿದ್ದರಾಮಯ್ಯ

ಹನೂರು: ಕಾಶ್ಮೀರದ ಉಗ್ರದಾಳಿಯಲ್ಲಿ ಗುಪ್ತಚರ ಇಲಾಖೆ ವೈಫಲ್ಯ (Intelligence failure) ಇದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಪುಲ್ವಾಮ ದಾಳಿಯಲ್ಲಿ 40 ಮಂದಿ ಸೈನಿಕರು ಅಸುನೀಗಿದ್ದರು‌, ಮೊನ್ನೆ ಘಟನೆಯಲ್ಲಿ 26 ಮಂದಿ ನಾಗರಿಕರು ಅಸುನೀಗಿದ್ದಾರೆ. ಪುಲ್ವಾಮ ದಾಳಿ ಬಳಿಕ ಕೇಂದ್ರ ಸರ್ಕಾರ ವಿರಮಿಸಬಾರದಿತ್ತು, ಮೂರನೇ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದರು.

ಮೊನ್ನೆ ನಡೆದ ಉಗ್ರದಾಳಿ ಅತ್ಯಂತ ಅಮಾನವೀಯ ಹೇಯ ಕೃತ್ಯ, ಮೃತ ಕುಟುಂಬಸ್ಥರ ಜೊತೆ ನಾವಿದ್ದು ಎಲ್ಲರಿಗೂ 10 ಲಕ್ಷ ಪರಿಹಾರ ಕೊಟ್ಟಿದ್ದೇವೆ, ಬಹಳ ಎಚ್ಚರಿಕೆಯಿಂದ ಇರಬೇಕೆಂರು ಪೊಲೀಸರಿಗೆ ಸೂಚನೆ ಕೊಟ್ಟಿದ್ದೇನೆ ಎಂದರು.

ಉಗ್ರರು ಎಲ್ಲೇ ಇರಲಿ, ಯಾವ ಜಾತಿ- ಧರ್ಮದವರೇ ಆಗಿರಲಿ ಅವರನ್ನು ಮಟ್ಟ ಹಾಕಬೇಕು, ಕೇಂದ್ರ ಸರ್ಕಾರವು ಉಗ್ರ ಚಟುವಟಿಕೆ ಬೆಳೆಯಲು, ನಡೆಸಲು ಕೇಂದ್ರ ಸರ್ಕಾರ ಅವಕಾಶ ಕೊಡಬಾರದು ಎಂದರು.

ಇದೇ ವೇಳೆ ಮೇಕೆದಾಟು ವಿಚಾರ ಸಂಬಂಧ ಮಾತನಾಡಿ , ಮೇಕೆದಾಟು ಯೋಜನೆಗೆ ಅನುಮತಿ ಕೊಡಬೇಕಿರುವುದು ಕೇಂದ್ರ ಸರ್ಕಾರ. ಅವರು ಇಂದು ಅನುಮತಿ ಕೊಟ್ಟರೇ ನಾಳೆಯಿಂದಲೇ ಯೋಜನೆ ಅನುಷ್ಟಾನ ಮಾಡುತ್ತೇವೆ. ಕೇಂದ್ರ ಸರ್ಕಾರ ಘೋಚಣೆ ಮಾಡಿದ ಅನುದಾನವನ್ನೇ ಕೊಡುತ್ತಿಲ್ಲ, ರಾಜಕೀಯ ದ್ವೇಷದ ಕಾರಣ ಎನಿಸುತ್ತದೆ ಎಂದರು.

ಆಂದೋಲನ ಡೆಸ್ಕ್

Recent Posts

ಪಾಕಿಸ್ತಾನದಲ್ಲಿ ಮಜೂದ್‌ ಅಜರ್‌ ಸಹೋದರ ಅನುಮಾನಾಸ್ಪದ ಸಾವು

ಇಸ್ಲಾಮಾಬಾದ್:‌ ಭಾರತದಲ್ಲಿ ಈ ಹಿಂದೆ ನಡೆದಿದ್ದ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ…

18 mins ago

ಮಾಲ್ದಾರೆ ಅರಣ್ಯ ಮಾರ್ಗದಲ್ಲಿ ಪ್ರವಾಸಿಗರಿಗೆ ಹುಲಿ ದರ್ಶನ

ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…

1 hour ago

ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ: ಎಸ್.ಟಿ.ಸೋಮಶೇಖರ್‌

ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

2 hours ago

ಬಿಹಾರದ ನಳಂದಾ ದೇಗುಲದಲ್ಲಿ ಕಾಲ್ತುಳಿತ: 8 ಮಂದಿ ಸಾವು

ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.…

2 hours ago

ಕೌಟುಂಬಿಕ ಕಲಹ: ಬೆಂಗಳೂರಿನಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ…

2 hours ago

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್‌: ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ

ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್‌ ತಂದರು. ಹಳ್ಳಿಗಳಲ್ಲೂ ಗ್ಯಾಸ್‌ ಬಂತು. ಈಗ…

3 hours ago