ಹನೂರು: ಕಾಶ್ಮೀರದ ಉಗ್ರದಾಳಿಯಲ್ಲಿ ಗುಪ್ತಚರ ಇಲಾಖೆ ವೈಫಲ್ಯ (Intelligence failure) ಇದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಪುಲ್ವಾಮ ದಾಳಿಯಲ್ಲಿ 40 ಮಂದಿ ಸೈನಿಕರು ಅಸುನೀಗಿದ್ದರು, ಮೊನ್ನೆ ಘಟನೆಯಲ್ಲಿ 26 ಮಂದಿ ನಾಗರಿಕರು ಅಸುನೀಗಿದ್ದಾರೆ. ಪುಲ್ವಾಮ ದಾಳಿ ಬಳಿಕ ಕೇಂದ್ರ ಸರ್ಕಾರ ವಿರಮಿಸಬಾರದಿತ್ತು, ಮೂರನೇ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದರು.
ಮೊನ್ನೆ ನಡೆದ ಉಗ್ರದಾಳಿ ಅತ್ಯಂತ ಅಮಾನವೀಯ ಹೇಯ ಕೃತ್ಯ, ಮೃತ ಕುಟುಂಬಸ್ಥರ ಜೊತೆ ನಾವಿದ್ದು ಎಲ್ಲರಿಗೂ 10 ಲಕ್ಷ ಪರಿಹಾರ ಕೊಟ್ಟಿದ್ದೇವೆ, ಬಹಳ ಎಚ್ಚರಿಕೆಯಿಂದ ಇರಬೇಕೆಂರು ಪೊಲೀಸರಿಗೆ ಸೂಚನೆ ಕೊಟ್ಟಿದ್ದೇನೆ ಎಂದರು.
ಉಗ್ರರು ಎಲ್ಲೇ ಇರಲಿ, ಯಾವ ಜಾತಿ- ಧರ್ಮದವರೇ ಆಗಿರಲಿ ಅವರನ್ನು ಮಟ್ಟ ಹಾಕಬೇಕು, ಕೇಂದ್ರ ಸರ್ಕಾರವು ಉಗ್ರ ಚಟುವಟಿಕೆ ಬೆಳೆಯಲು, ನಡೆಸಲು ಕೇಂದ್ರ ಸರ್ಕಾರ ಅವಕಾಶ ಕೊಡಬಾರದು ಎಂದರು.
ಇದೇ ವೇಳೆ ಮೇಕೆದಾಟು ವಿಚಾರ ಸಂಬಂಧ ಮಾತನಾಡಿ , ಮೇಕೆದಾಟು ಯೋಜನೆಗೆ ಅನುಮತಿ ಕೊಡಬೇಕಿರುವುದು ಕೇಂದ್ರ ಸರ್ಕಾರ. ಅವರು ಇಂದು ಅನುಮತಿ ಕೊಟ್ಟರೇ ನಾಳೆಯಿಂದಲೇ ಯೋಜನೆ ಅನುಷ್ಟಾನ ಮಾಡುತ್ತೇವೆ. ಕೇಂದ್ರ ಸರ್ಕಾರ ಘೋಚಣೆ ಮಾಡಿದ ಅನುದಾನವನ್ನೇ ಕೊಡುತ್ತಿಲ್ಲ, ರಾಜಕೀಯ ದ್ವೇಷದ ಕಾರಣ ಎನಿಸುತ್ತದೆ ಎಂದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…