ಚಾಮರಾಜನಗರ : ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಕಾಣಿಕೆ ಹುಂಡಿ ಎಣಿಕೆಯಲ್ಲಿ 28 ಲಕ್ಷ ರೂ ಮೌಲ್ಯದ ಅಮಾನ್ಯ ನೋಟುಗಳು ಪತ್ತೆಯಾಗಿವೆ.
ಭಕ್ತರು ಇನ್ನುಮುಂದೆ ಅಮಾನ್ಯವಾದ ನೋಟುಗಳನ್ನು ಹುಂಡಿಗೆ ಹಾಕಬಾರದೆಂದು ಮಲೆ ಮಹದೇಶ್ವರ ಬೆಟ್ಟ ಪ್ರಾಧಿಕಾರ ಮನವಿ ಮಾಡಿದೆ.
ನೋಟ್ ಬ್ಯಾನ್ ಆಗಿ ವರ್ಷಗಳೇ ಕಳೆದರು, ಅಮಾನ್ಯವಾದ ಲಕ್ಷಾಂತರ ರೂಪಾಯಿ ಹಣ ಹುಂಡಿಗೆ ಸೇರಿದೆ. ಕಳೆದ ಮಂಗಳವಾರ ಹುಂಡಿ ಎಣಿಕೆ ವೇಳೆ ಈ ನೋಟುಗಳು ಪತ್ತೆಯಾಗಿವೆ.
ಇದರಲ್ಲಿ ಸಾವಿರ ಮುಖಬೆಲೆಯ 677 ನೋಟುಗಳು, 500 ಮುಖಬೆಲೆಯ 4353 ಸೋಟುಗಳು ಪತ್ತೆಯಾಗಿದ್ದು, ಇವುಗಳ ಒಟ್ಟು ಮೊತ್ತ 28,53,500 ಲಕ್ಷ ರೂಪಾಯಿ ಆಗಿದೆ. ಆದರೆ ಇದ್ಯಾವುದು ಉಪಯೋಗಕ್ಕೆ ಬಾರದಂತಾಗಿದೆ.
ಜೊತೆಗೆ 2000 ಮುಖಬೆಲೆಯ ನೋಟುಗಳು ಬಂದಿದ್ದು,ಅವುಗಳ ಒಟ್ಟು ಮೊತ್ತ 3.56 ಲಕ್ಷ ರೂ ಆಗಿದೆ. ಭಾರತ ಸರ್ಕಾರ ಇತ್ತೀಚೆಗೆ 2000 ಮುಖಬೆಲೆಯ ನೋಟುಗಳನ್ನು ಹಿಂಪಡೆದಿದ್ದು, ಸದ್ಯ ಹುಂಟಿಯಲ್ಲಿ ದೊರೆತಿರುವ 2000 ಮುಖ ಬೆಲೆಯ ನೋಟುಗಳನ್ನು ವಿನಿಮಯ ಮಾಡಿಕೊಳ್ಳಬಹುದಾಗಿದೆ.
“ಅಮಾನ್ಯಗೊಂಡಿರುವ ನೋಟುಗಳನ್ನು ಕಾಣಿಕೆ ರೂಪದಲ್ಲಿ ಹುಂಡಿಗೆ ಹಾಕುವುದರಿಂದ ನಿಮ್ಮ ಹರಕೆ ನಿಮಗೆ ತೃಪ್ತಿ ಆಗಬಹುದು. ಆದರೆ ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಹಾಗಾಗಿ ಅಮಾನ್ಯಗೊಂಡಿರುವ 500, 1000 ರೂ ಮುಖಬೆಲೆಯ ನೋಟುಗಳನ್ನು ಹಾಗೂ ಸರ್ಕಾರ ಹಿಂಪಡೆದಿರುವ ಪಡೆದಿರುವ 2000 ರೂ ಮುಖ ಬೆಲೆಯ ನೋಟುಗಳನ್ನು ಭಕ್ತರು ಹುಂಡಿಗೆ ಹಾಕಬಾರದು”, ಎಂದು ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಮನವಿ ಮಾಡಿದ್ದಾರೆ
ಮೇ ಅಂತ್ಯಕ್ಕೆ 2.53 ಕೋಟಿ ಸಂಗ್ರಹ
ಈ ವರ್ಷ ಮೇ 31ರಂದು ದೇವಸ್ಥಾನದ ಕಾಣಿಕೆ ಡಬ್ಬಿ ಎಣಿಕೆ ಮಾಡಿದಾಗ 2.53 ಕೋಟಿ ರೂಪಾಯಿ ಹಣ ಸಂಗ್ರಹವಾಗಿತ್ತು. ಅದರಲ್ಲೂ 14 ಲಕ್ಷ ರೂಪಾಯಿಗೂ ಅಧಿಕ ಹಣ ನಾಣ್ಯಗಳ ರೂಪದಲ್ಲೇ ಸಂಗ್ರಹವಾಗಿತ್ತು. ಇನ್ನು 65 ಗ್ರಾಂ ಚಿನ್ನದ ರೂಪದಲ್ಲಿ, 3.35 ಕಿಗ್ರಾಂ ಬೆಳ್ಳಿಯ ರೂಪದಲ್ಲಿ ದೇವಸ್ಥಾನದ ಕಾಣಿಕೆ ಹುಂಡಿಗೆ ಭಕ್ತರು ಹಾಕಿದ್ದರು.
ನವದೆಹಲಿ: ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ…
ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ…
ರಾಹುಲ್ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…
ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…
ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…
ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…