ಚಾಮರಾಜನಗರ

ಮಾದಪ್ಪನ ಹುಂಡಿಯಲ್ಲಿ ಸಿಕ್ತು 28 ಲಕ್ಷ ಮೌಲ್ಯದ ಅಮಾನ್ಯ ನೋಟುಗಳು!

ಚಾಮರಾಜನಗರ : ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಕಾಣಿಕೆ ಹುಂಡಿ ಎಣಿಕೆಯಲ್ಲಿ 28 ಲಕ್ಷ ರೂ ಮೌಲ್ಯದ ಅಮಾನ್ಯ ನೋಟುಗಳು ಪತ್ತೆಯಾಗಿವೆ.

ಭಕ್ತರು ಇನ್ನುಮುಂದೆ ಅಮಾನ್ಯವಾದ ನೋಟುಗಳನ್ನು ಹುಂಡಿಗೆ ಹಾಕಬಾರದೆಂದು ಮಲೆ ಮಹದೇಶ್ವರ ಬೆಟ್ಟ ಪ್ರಾಧಿಕಾರ ಮನವಿ ಮಾಡಿದೆ.

ನೋಟ್‌ ಬ್ಯಾನ್‌ ಆಗಿ ವರ್ಷಗಳೇ ಕಳೆದರು, ಅಮಾನ್ಯವಾದ ಲಕ್ಷಾಂತರ ರೂಪಾಯಿ ಹಣ ಹುಂಡಿಗೆ ಸೇರಿದೆ. ಕಳೆದ ಮಂಗಳವಾರ ಹುಂಡಿ ಎಣಿಕೆ ವೇಳೆ ಈ ನೋಟುಗಳು ಪತ್ತೆಯಾಗಿವೆ.

ಇದರಲ್ಲಿ ಸಾವಿರ ಮುಖಬೆಲೆಯ 677 ನೋಟುಗಳು, 500 ಮುಖಬೆಲೆಯ 4353 ಸೋಟುಗಳು ಪತ್ತೆಯಾಗಿದ್ದು, ಇವುಗಳ ಒಟ್ಟು ಮೊತ್ತ 28,53,500 ಲಕ್ಷ ರೂಪಾಯಿ ಆಗಿದೆ. ಆದರೆ ಇದ್ಯಾವುದು ಉಪಯೋಗಕ್ಕೆ ಬಾರದಂತಾಗಿದೆ.

ಜೊತೆಗೆ 2000 ಮುಖಬೆಲೆಯ ನೋಟುಗಳು ಬಂದಿದ್ದು,ಅವುಗಳ ಒಟ್ಟು ಮೊತ್ತ 3.56 ಲಕ್ಷ ರೂ ಆಗಿದೆ. ಭಾರತ ಸರ್ಕಾರ ಇತ್ತೀಚೆಗೆ 2000 ಮುಖಬೆಲೆಯ ನೋಟುಗಳನ್ನು ಹಿಂಪಡೆದಿದ್ದು, ಸದ್ಯ ಹುಂಟಿಯಲ್ಲಿ ದೊರೆತಿರುವ 2000 ಮುಖ ಬೆಲೆಯ ನೋಟುಗಳನ್ನು ವಿನಿಮಯ ಮಾಡಿಕೊಳ್ಳಬಹುದಾಗಿದೆ.

“ಅಮಾನ್ಯಗೊಂಡಿರುವ ನೋಟುಗಳನ್ನು ಕಾಣಿಕೆ ರೂಪದಲ್ಲಿ ಹುಂಡಿಗೆ ಹಾಕುವುದರಿಂದ ನಿಮ್ಮ ಹರಕೆ ನಿಮಗೆ ತೃಪ್ತಿ ಆಗಬಹುದು. ಆದರೆ ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಹಾಗಾಗಿ ಅಮಾನ್ಯಗೊಂಡಿರುವ 500, 1000 ರೂ ಮುಖಬೆಲೆಯ ನೋಟುಗಳನ್ನು ಹಾಗೂ ಸರ್ಕಾರ ಹಿಂಪಡೆದಿರುವ ಪಡೆದಿರುವ 2000 ರೂ ಮುಖ ಬೆಲೆಯ ನೋಟುಗಳನ್ನು ಭಕ್ತರು ಹುಂಡಿಗೆ ಹಾಕಬಾರದು”, ಎಂದು ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಮನವಿ ಮಾಡಿದ್ದಾರೆ

ಮೇ ಅಂತ್ಯಕ್ಕೆ 2.53 ಕೋಟಿ ಸಂಗ್ರಹ

ಈ ವರ್ಷ ಮೇ 31ರಂದು ದೇವಸ್ಥಾನದ ಕಾಣಿಕೆ ಡಬ್ಬಿ ಎಣಿಕೆ ಮಾಡಿದಾಗ 2.53 ಕೋಟಿ ರೂಪಾಯಿ ಹಣ ಸಂಗ್ರಹವಾಗಿತ್ತು. ಅದರಲ್ಲೂ 14 ಲಕ್ಷ ರೂಪಾಯಿಗೂ ಅಧಿಕ ಹಣ ನಾಣ್ಯಗಳ ರೂಪದಲ್ಲೇ ಸಂಗ್ರಹವಾಗಿತ್ತು. ಇನ್ನು 65 ಗ್ರಾಂ ಚಿನ್ನದ ರೂಪದಲ್ಲಿ, 3.35 ಕಿಗ್ರಾಂ ಬೆಳ್ಳಿಯ ರೂಪದಲ್ಲಿ ದೇವಸ್ಥಾನದ ಕಾಣಿಕೆ ಹುಂಡಿಗೆ ಭಕ್ತರು ಹಾಕಿದ್ದರು.

andolanait

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

12 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

12 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

13 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

14 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

14 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

14 hours ago