ಚಾಮರಾಜನಗರ

ಮಾದಪ್ಪನ ಹುಂಡಿಯಲ್ಲಿ ಸಿಕ್ತು 28 ಲಕ್ಷ ಮೌಲ್ಯದ ಅಮಾನ್ಯ ನೋಟುಗಳು!

ಚಾಮರಾಜನಗರ : ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಕಾಣಿಕೆ ಹುಂಡಿ ಎಣಿಕೆಯಲ್ಲಿ 28 ಲಕ್ಷ ರೂ ಮೌಲ್ಯದ ಅಮಾನ್ಯ ನೋಟುಗಳು ಪತ್ತೆಯಾಗಿವೆ.

ಭಕ್ತರು ಇನ್ನುಮುಂದೆ ಅಮಾನ್ಯವಾದ ನೋಟುಗಳನ್ನು ಹುಂಡಿಗೆ ಹಾಕಬಾರದೆಂದು ಮಲೆ ಮಹದೇಶ್ವರ ಬೆಟ್ಟ ಪ್ರಾಧಿಕಾರ ಮನವಿ ಮಾಡಿದೆ.

ನೋಟ್‌ ಬ್ಯಾನ್‌ ಆಗಿ ವರ್ಷಗಳೇ ಕಳೆದರು, ಅಮಾನ್ಯವಾದ ಲಕ್ಷಾಂತರ ರೂಪಾಯಿ ಹಣ ಹುಂಡಿಗೆ ಸೇರಿದೆ. ಕಳೆದ ಮಂಗಳವಾರ ಹುಂಡಿ ಎಣಿಕೆ ವೇಳೆ ಈ ನೋಟುಗಳು ಪತ್ತೆಯಾಗಿವೆ.

ಇದರಲ್ಲಿ ಸಾವಿರ ಮುಖಬೆಲೆಯ 677 ನೋಟುಗಳು, 500 ಮುಖಬೆಲೆಯ 4353 ಸೋಟುಗಳು ಪತ್ತೆಯಾಗಿದ್ದು, ಇವುಗಳ ಒಟ್ಟು ಮೊತ್ತ 28,53,500 ಲಕ್ಷ ರೂಪಾಯಿ ಆಗಿದೆ. ಆದರೆ ಇದ್ಯಾವುದು ಉಪಯೋಗಕ್ಕೆ ಬಾರದಂತಾಗಿದೆ.

ಜೊತೆಗೆ 2000 ಮುಖಬೆಲೆಯ ನೋಟುಗಳು ಬಂದಿದ್ದು,ಅವುಗಳ ಒಟ್ಟು ಮೊತ್ತ 3.56 ಲಕ್ಷ ರೂ ಆಗಿದೆ. ಭಾರತ ಸರ್ಕಾರ ಇತ್ತೀಚೆಗೆ 2000 ಮುಖಬೆಲೆಯ ನೋಟುಗಳನ್ನು ಹಿಂಪಡೆದಿದ್ದು, ಸದ್ಯ ಹುಂಟಿಯಲ್ಲಿ ದೊರೆತಿರುವ 2000 ಮುಖ ಬೆಲೆಯ ನೋಟುಗಳನ್ನು ವಿನಿಮಯ ಮಾಡಿಕೊಳ್ಳಬಹುದಾಗಿದೆ.

“ಅಮಾನ್ಯಗೊಂಡಿರುವ ನೋಟುಗಳನ್ನು ಕಾಣಿಕೆ ರೂಪದಲ್ಲಿ ಹುಂಡಿಗೆ ಹಾಕುವುದರಿಂದ ನಿಮ್ಮ ಹರಕೆ ನಿಮಗೆ ತೃಪ್ತಿ ಆಗಬಹುದು. ಆದರೆ ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಹಾಗಾಗಿ ಅಮಾನ್ಯಗೊಂಡಿರುವ 500, 1000 ರೂ ಮುಖಬೆಲೆಯ ನೋಟುಗಳನ್ನು ಹಾಗೂ ಸರ್ಕಾರ ಹಿಂಪಡೆದಿರುವ ಪಡೆದಿರುವ 2000 ರೂ ಮುಖ ಬೆಲೆಯ ನೋಟುಗಳನ್ನು ಭಕ್ತರು ಹುಂಡಿಗೆ ಹಾಕಬಾರದು”, ಎಂದು ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಮನವಿ ಮಾಡಿದ್ದಾರೆ

ಮೇ ಅಂತ್ಯಕ್ಕೆ 2.53 ಕೋಟಿ ಸಂಗ್ರಹ

ಈ ವರ್ಷ ಮೇ 31ರಂದು ದೇವಸ್ಥಾನದ ಕಾಣಿಕೆ ಡಬ್ಬಿ ಎಣಿಕೆ ಮಾಡಿದಾಗ 2.53 ಕೋಟಿ ರೂಪಾಯಿ ಹಣ ಸಂಗ್ರಹವಾಗಿತ್ತು. ಅದರಲ್ಲೂ 14 ಲಕ್ಷ ರೂಪಾಯಿಗೂ ಅಧಿಕ ಹಣ ನಾಣ್ಯಗಳ ರೂಪದಲ್ಲೇ ಸಂಗ್ರಹವಾಗಿತ್ತು. ಇನ್ನು 65 ಗ್ರಾಂ ಚಿನ್ನದ ರೂಪದಲ್ಲಿ, 3.35 ಕಿಗ್ರಾಂ ಬೆಳ್ಳಿಯ ರೂಪದಲ್ಲಿ ದೇವಸ್ಥಾನದ ಕಾಣಿಕೆ ಹುಂಡಿಗೆ ಭಕ್ತರು ಹಾಕಿದ್ದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

12 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

16 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

16 hours ago