ಚಾಮರಾಜನಗರ : ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಕಾಣಿಕೆ ಹುಂಡಿ ಎಣಿಕೆಯಲ್ಲಿ 28 ಲಕ್ಷ ರೂ ಮೌಲ್ಯದ ಅಮಾನ್ಯ ನೋಟುಗಳು ಪತ್ತೆಯಾಗಿವೆ.
ಭಕ್ತರು ಇನ್ನುಮುಂದೆ ಅಮಾನ್ಯವಾದ ನೋಟುಗಳನ್ನು ಹುಂಡಿಗೆ ಹಾಕಬಾರದೆಂದು ಮಲೆ ಮಹದೇಶ್ವರ ಬೆಟ್ಟ ಪ್ರಾಧಿಕಾರ ಮನವಿ ಮಾಡಿದೆ.
ನೋಟ್ ಬ್ಯಾನ್ ಆಗಿ ವರ್ಷಗಳೇ ಕಳೆದರು, ಅಮಾನ್ಯವಾದ ಲಕ್ಷಾಂತರ ರೂಪಾಯಿ ಹಣ ಹುಂಡಿಗೆ ಸೇರಿದೆ. ಕಳೆದ ಮಂಗಳವಾರ ಹುಂಡಿ ಎಣಿಕೆ ವೇಳೆ ಈ ನೋಟುಗಳು ಪತ್ತೆಯಾಗಿವೆ.
ಇದರಲ್ಲಿ ಸಾವಿರ ಮುಖಬೆಲೆಯ 677 ನೋಟುಗಳು, 500 ಮುಖಬೆಲೆಯ 4353 ಸೋಟುಗಳು ಪತ್ತೆಯಾಗಿದ್ದು, ಇವುಗಳ ಒಟ್ಟು ಮೊತ್ತ 28,53,500 ಲಕ್ಷ ರೂಪಾಯಿ ಆಗಿದೆ. ಆದರೆ ಇದ್ಯಾವುದು ಉಪಯೋಗಕ್ಕೆ ಬಾರದಂತಾಗಿದೆ.
ಜೊತೆಗೆ 2000 ಮುಖಬೆಲೆಯ ನೋಟುಗಳು ಬಂದಿದ್ದು,ಅವುಗಳ ಒಟ್ಟು ಮೊತ್ತ 3.56 ಲಕ್ಷ ರೂ ಆಗಿದೆ. ಭಾರತ ಸರ್ಕಾರ ಇತ್ತೀಚೆಗೆ 2000 ಮುಖಬೆಲೆಯ ನೋಟುಗಳನ್ನು ಹಿಂಪಡೆದಿದ್ದು, ಸದ್ಯ ಹುಂಟಿಯಲ್ಲಿ ದೊರೆತಿರುವ 2000 ಮುಖ ಬೆಲೆಯ ನೋಟುಗಳನ್ನು ವಿನಿಮಯ ಮಾಡಿಕೊಳ್ಳಬಹುದಾಗಿದೆ.
“ಅಮಾನ್ಯಗೊಂಡಿರುವ ನೋಟುಗಳನ್ನು ಕಾಣಿಕೆ ರೂಪದಲ್ಲಿ ಹುಂಡಿಗೆ ಹಾಕುವುದರಿಂದ ನಿಮ್ಮ ಹರಕೆ ನಿಮಗೆ ತೃಪ್ತಿ ಆಗಬಹುದು. ಆದರೆ ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಹಾಗಾಗಿ ಅಮಾನ್ಯಗೊಂಡಿರುವ 500, 1000 ರೂ ಮುಖಬೆಲೆಯ ನೋಟುಗಳನ್ನು ಹಾಗೂ ಸರ್ಕಾರ ಹಿಂಪಡೆದಿರುವ ಪಡೆದಿರುವ 2000 ರೂ ಮುಖ ಬೆಲೆಯ ನೋಟುಗಳನ್ನು ಭಕ್ತರು ಹುಂಡಿಗೆ ಹಾಕಬಾರದು”, ಎಂದು ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಮನವಿ ಮಾಡಿದ್ದಾರೆ
ಮೇ ಅಂತ್ಯಕ್ಕೆ 2.53 ಕೋಟಿ ಸಂಗ್ರಹ
ಈ ವರ್ಷ ಮೇ 31ರಂದು ದೇವಸ್ಥಾನದ ಕಾಣಿಕೆ ಡಬ್ಬಿ ಎಣಿಕೆ ಮಾಡಿದಾಗ 2.53 ಕೋಟಿ ರೂಪಾಯಿ ಹಣ ಸಂಗ್ರಹವಾಗಿತ್ತು. ಅದರಲ್ಲೂ 14 ಲಕ್ಷ ರೂಪಾಯಿಗೂ ಅಧಿಕ ಹಣ ನಾಣ್ಯಗಳ ರೂಪದಲ್ಲೇ ಸಂಗ್ರಹವಾಗಿತ್ತು. ಇನ್ನು 65 ಗ್ರಾಂ ಚಿನ್ನದ ರೂಪದಲ್ಲಿ, 3.35 ಕಿಗ್ರಾಂ ಬೆಳ್ಳಿಯ ರೂಪದಲ್ಲಿ ದೇವಸ್ಥಾನದ ಕಾಣಿಕೆ ಹುಂಡಿಗೆ ಭಕ್ತರು ಹಾಕಿದ್ದರು.
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…