ಚಾಮರಾಜನಗರ

ಮಾದಪ್ಪನ ಹುಂಡಿಯಲ್ಲಿ ಸಿಕ್ತು 28 ಲಕ್ಷ ಮೌಲ್ಯದ ಅಮಾನ್ಯ ನೋಟುಗಳು!

ಚಾಮರಾಜನಗರ : ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಕಾಣಿಕೆ ಹುಂಡಿ ಎಣಿಕೆಯಲ್ಲಿ 28 ಲಕ್ಷ ರೂ ಮೌಲ್ಯದ ಅಮಾನ್ಯ ನೋಟುಗಳು ಪತ್ತೆಯಾಗಿವೆ.

ಭಕ್ತರು ಇನ್ನುಮುಂದೆ ಅಮಾನ್ಯವಾದ ನೋಟುಗಳನ್ನು ಹುಂಡಿಗೆ ಹಾಕಬಾರದೆಂದು ಮಲೆ ಮಹದೇಶ್ವರ ಬೆಟ್ಟ ಪ್ರಾಧಿಕಾರ ಮನವಿ ಮಾಡಿದೆ.

ನೋಟ್‌ ಬ್ಯಾನ್‌ ಆಗಿ ವರ್ಷಗಳೇ ಕಳೆದರು, ಅಮಾನ್ಯವಾದ ಲಕ್ಷಾಂತರ ರೂಪಾಯಿ ಹಣ ಹುಂಡಿಗೆ ಸೇರಿದೆ. ಕಳೆದ ಮಂಗಳವಾರ ಹುಂಡಿ ಎಣಿಕೆ ವೇಳೆ ಈ ನೋಟುಗಳು ಪತ್ತೆಯಾಗಿವೆ.

ಇದರಲ್ಲಿ ಸಾವಿರ ಮುಖಬೆಲೆಯ 677 ನೋಟುಗಳು, 500 ಮುಖಬೆಲೆಯ 4353 ಸೋಟುಗಳು ಪತ್ತೆಯಾಗಿದ್ದು, ಇವುಗಳ ಒಟ್ಟು ಮೊತ್ತ 28,53,500 ಲಕ್ಷ ರೂಪಾಯಿ ಆಗಿದೆ. ಆದರೆ ಇದ್ಯಾವುದು ಉಪಯೋಗಕ್ಕೆ ಬಾರದಂತಾಗಿದೆ.

ಜೊತೆಗೆ 2000 ಮುಖಬೆಲೆಯ ನೋಟುಗಳು ಬಂದಿದ್ದು,ಅವುಗಳ ಒಟ್ಟು ಮೊತ್ತ 3.56 ಲಕ್ಷ ರೂ ಆಗಿದೆ. ಭಾರತ ಸರ್ಕಾರ ಇತ್ತೀಚೆಗೆ 2000 ಮುಖಬೆಲೆಯ ನೋಟುಗಳನ್ನು ಹಿಂಪಡೆದಿದ್ದು, ಸದ್ಯ ಹುಂಟಿಯಲ್ಲಿ ದೊರೆತಿರುವ 2000 ಮುಖ ಬೆಲೆಯ ನೋಟುಗಳನ್ನು ವಿನಿಮಯ ಮಾಡಿಕೊಳ್ಳಬಹುದಾಗಿದೆ.

“ಅಮಾನ್ಯಗೊಂಡಿರುವ ನೋಟುಗಳನ್ನು ಕಾಣಿಕೆ ರೂಪದಲ್ಲಿ ಹುಂಡಿಗೆ ಹಾಕುವುದರಿಂದ ನಿಮ್ಮ ಹರಕೆ ನಿಮಗೆ ತೃಪ್ತಿ ಆಗಬಹುದು. ಆದರೆ ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಹಾಗಾಗಿ ಅಮಾನ್ಯಗೊಂಡಿರುವ 500, 1000 ರೂ ಮುಖಬೆಲೆಯ ನೋಟುಗಳನ್ನು ಹಾಗೂ ಸರ್ಕಾರ ಹಿಂಪಡೆದಿರುವ ಪಡೆದಿರುವ 2000 ರೂ ಮುಖ ಬೆಲೆಯ ನೋಟುಗಳನ್ನು ಭಕ್ತರು ಹುಂಡಿಗೆ ಹಾಕಬಾರದು”, ಎಂದು ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಮನವಿ ಮಾಡಿದ್ದಾರೆ

ಮೇ ಅಂತ್ಯಕ್ಕೆ 2.53 ಕೋಟಿ ಸಂಗ್ರಹ

ಈ ವರ್ಷ ಮೇ 31ರಂದು ದೇವಸ್ಥಾನದ ಕಾಣಿಕೆ ಡಬ್ಬಿ ಎಣಿಕೆ ಮಾಡಿದಾಗ 2.53 ಕೋಟಿ ರೂಪಾಯಿ ಹಣ ಸಂಗ್ರಹವಾಗಿತ್ತು. ಅದರಲ್ಲೂ 14 ಲಕ್ಷ ರೂಪಾಯಿಗೂ ಅಧಿಕ ಹಣ ನಾಣ್ಯಗಳ ರೂಪದಲ್ಲೇ ಸಂಗ್ರಹವಾಗಿತ್ತು. ಇನ್ನು 65 ಗ್ರಾಂ ಚಿನ್ನದ ರೂಪದಲ್ಲಿ, 3.35 ಕಿಗ್ರಾಂ ಬೆಳ್ಳಿಯ ರೂಪದಲ್ಲಿ ದೇವಸ್ಥಾನದ ಕಾಣಿಕೆ ಹುಂಡಿಗೆ ಭಕ್ತರು ಹಾಕಿದ್ದರು.

andolanait

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

20 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

20 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

20 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

20 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

20 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

20 hours ago