ಚಾಮರಾಜನಗರ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಮಾಹಿತಿಯೊಂದನ್ನು ಹಂಚಿಕೊಂಡಿದೆ.
ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ, ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು (Airspace) ಅನಿರ್ದಿಷ್ಟ ಅವಧಿಯವರೆಗೆ ಮುಚ್ಚಲಾಗಿದೆ.
ಈ ಅನಿರೀಕ್ಷಿತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ.
ಜಿಲ್ಲಾಡಳಿತದ ಕ್ರಮಗಳು :
ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ, ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 24×7 ಕಾರ್ಯನಿರ್ವಹಿಸುತ್ತಿವೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿಗಳು ನೀಡುವ ಸೂಚನೆಗಳನ್ನು ಜಿಲ್ಲಾಡಳಿತವು ನಿರಂತರವಾಗಿ ಗಮನಿಸುತ್ತಿದೆ.
ಚಾಮರಾಜನಗರ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಮತ್ತು ಸಹಾಯಕ್ಕಾಗಿ 24/7 ಕಾರ್ಯನಿರ್ವಹಿಸುವ ಚಾಮರಾಜನಗರ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರದ ಈ ಕೆಳಕಂಡ ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬಹುದು.
08226-223160, 223161, 223163. ಮೊ.ನಂ.9740942901, 1077 ಟೋಲ್ ಫ್ರೀ ಸಂಖ್ಯೆ ಹಾಗೂ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ 080-22340676, 080-22253707, ಟೋಲ್ ಫ್ರೀ ಸಂಖ್ಯೆ: 1070ಗೆ ಕರೆ ಮಾಡಿ ಮಾಹಿತಿ ಹಾಗೂ ಸಹಾಯ ಪಡೆಯಬಹುದು.
ಸಾರ್ವಜನಿಕರಿಗೆ ಪ್ರಮುಖ ಸೂಚನೆಗಳು: ಮಧ್ಯಪ್ರಾಚ್ಯ ದೇಶಗಳಲ್ಲಿರುವ ಕರ್ನಾಟಕದ ನಿವಾಸಿಗಳು ಹಾಗೂ ಜಿಲ್ಲೆಯವರಿದ್ದಲ್ಲಿ ಅಲ್ಲಿನ ಸ್ಥಳೀಯ ಸರ್ಕಾರಗಳು ನೀಡುವ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಕಷ್ಟದಲ್ಲಿರುವವರು ಆಯಾ ದೇಶದ ಭಾರತೀಯ ರಾಯಭಾರಿ ಕಚೇರಿಯ ಸಹಾಯವಾಣಿಗೆ ಕರೆ ಮಾಡಬೇಕು ಅಥವಾ ‘ಸಾರಥಿ ಸಹಾಯತಾ’ (Sarthi Sahayata) ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಬೇಕು. ವಿಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್.ಆರ್.ಆರ್.ಒ (FRRO) ಕಚೇರಿಯನ್ನು ಸಂಪರ್ಕಿಸಬೇಕೆಂದು ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪ ತಿಳಿಸಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…