ಚಾಮರಾಜನಗರ: ಗಡಿನಾಡು ಜಿಲ್ಲೆ ಚಾಮರಾಜನಗರದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನೆಲೆಸಿರುವ ಮಾಯ್ಕಾರ ಮಾದಪ್ಪ ಮತ್ತೊಮ್ಮೆ ಕೋಟ್ಯಾಧಿಪತಿಯಾಗಿದ್ದಾನೆ.
ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಕಾಣಿಕಗಳ ಎಣಿಕೆ ಪ್ರಕ್ರಿಯೆ ನಡೆದಿದ್ದು, ಬರೋಬ್ಬರಿ ಎರಡೂವರೆ ಕೋಟಿ ಹಣ ಸಂಗ್ರಹವಾಗಿದೆ. ಈ ಒಂದು ತಿಂಗಳಲ್ಲಿ ಬೆಟ್ಟಕ್ಕೆ ಅಪಾರ ಪ್ರವಾಸಿಗರು ಆಗಮಿಸಿ ಮಾದಪ್ಪನ ದರ್ಶನ ಪಡೆದಿದ್ದಾರೆ. ಈ ಅವಧಿಯಲ್ಲಿ ಕಾಣಿಕೆ ಹುಂಡಿಗಳನ್ನು ತೆರೆದು ಹಣ ಎಣಿಕೆ ಕಾರ್ಯ ನಡೆಸಿದ್ದು, ನಗದು ರೂಪದಲ್ಲಿ ಮಾದಪ್ಪನಿಗೆ 2,58,44,097 ರೂ. ಕಾಣಿಕೆ ಬಂದು ಸೇರಿದೆ.
ಜತೆಗೆ 93 ಗ್ರಾಂ ಚಿನ್ನ, 3.350 ಕೆಜಿ ಬೆಳ್ಳಿ ಹಾಗೂ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 25 ನೋಟುಗಳು ಪತ್ತೆಯಾಗಿದೆ. ವಿಶೇಷವೆಂದರೆ ಈ ಕಾಣಿಕೆಯಲ್ಲಿ ಸೌದಿ ಅರೇಬಿಯಾ, ನೇಪಾಳ, ಕತಾರ್ ಹಾಗೂ ಜಪಾನ್ ನ ಕರೆನ್ಸಿಗಳು ಕಂಡುಬಂದಿದೆ.
ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…
ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…
ಚಾಮರಾಜನಗರ ಜಿಲ್ಲೆಯ ಮರಿಯಾಲ ಗ್ರಾಮದ ಪ್ರಮುಖ ರಸ್ತೆಯು ಹಾಳಾಗಿದೆ. ಈ ರಸ್ತೆಯು ಕೆಲ್ಲಂಬಳ್ಳಿ, ಕಸ್ತೂರು ಮೂಲಕ ವಿವಿಧ ಗ್ರಾಮಗಳ ಮೂಲಕ…
ತಮಿಳುನಾಡಿನಲ್ಲಿ, ಕಳೆದ ಕೆಲವು ದಿನಗಳ ಹಿಂದೆ, ೧೦ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಕೊಲೆಗೈದ ವಿಷಯಕ್ಕೆ ಸಂಬಂಧಿಸಿದಂತೆ…
ಅಮೆರಿಕ -ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಇರಾನ್ ಹಾರ್ಮುಜ್ ಜಲಸಂಽಯನ್ನು ಮುಚ್ಚಿದ್ದರಿಂದಾಗಿ ಕಚ್ಚಾತೈಲದ ಆಮದು ಪ್ರಮಾಣವು…
ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…