ಚಾಮರಾಜನಗರ: ಗಡಿನಾಡು ಜಿಲ್ಲೆ ಚಾಮರಾಜನಗರದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನೆಲೆಸಿರುವ ಮಾಯ್ಕಾರ ಮಾದಪ್ಪ ಮತ್ತೊಮ್ಮೆ ಕೋಟ್ಯಾಧಿಪತಿಯಾಗಿದ್ದಾನೆ.
ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಕಾಣಿಕಗಳ ಎಣಿಕೆ ಪ್ರಕ್ರಿಯೆ ನಡೆದಿದ್ದು, ಬರೋಬ್ಬರಿ ಎರಡೂವರೆ ಕೋಟಿ ಹಣ ಸಂಗ್ರಹವಾಗಿದೆ. ಈ ಒಂದು ತಿಂಗಳಲ್ಲಿ ಬೆಟ್ಟಕ್ಕೆ ಅಪಾರ ಪ್ರವಾಸಿಗರು ಆಗಮಿಸಿ ಮಾದಪ್ಪನ ದರ್ಶನ ಪಡೆದಿದ್ದಾರೆ. ಈ ಅವಧಿಯಲ್ಲಿ ಕಾಣಿಕೆ ಹುಂಡಿಗಳನ್ನು ತೆರೆದು ಹಣ ಎಣಿಕೆ ಕಾರ್ಯ ನಡೆಸಿದ್ದು, ನಗದು ರೂಪದಲ್ಲಿ ಮಾದಪ್ಪನಿಗೆ 2,58,44,097 ರೂ. ಕಾಣಿಕೆ ಬಂದು ಸೇರಿದೆ.
ಜತೆಗೆ 93 ಗ್ರಾಂ ಚಿನ್ನ, 3.350 ಕೆಜಿ ಬೆಳ್ಳಿ ಹಾಗೂ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 25 ನೋಟುಗಳು ಪತ್ತೆಯಾಗಿದೆ. ವಿಶೇಷವೆಂದರೆ ಈ ಕಾಣಿಕೆಯಲ್ಲಿ ಸೌದಿ ಅರೇಬಿಯಾ, ನೇಪಾಳ, ಕತಾರ್ ಹಾಗೂ ಜಪಾನ್ ನ ಕರೆನ್ಸಿಗಳು ಕಂಡುಬಂದಿದೆ.
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…
ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…