ಚಾಮರಾಜನಗರ: ಗಡಿನಾಡು ಜಿಲ್ಲೆ ಚಾಮರಾಜನಗರದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನೆಲೆಸಿರುವ ಮಾಯ್ಕಾರ ಮಾದಪ್ಪ ಮತ್ತೊಮ್ಮೆ ಕೋಟ್ಯಾಧಿಪತಿಯಾಗಿದ್ದಾನೆ.
ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಕಾಣಿಕಗಳ ಎಣಿಕೆ ಪ್ರಕ್ರಿಯೆ ನಡೆದಿದ್ದು, ಬರೋಬ್ಬರಿ ಎರಡೂವರೆ ಕೋಟಿ ಹಣ ಸಂಗ್ರಹವಾಗಿದೆ. ಈ ಒಂದು ತಿಂಗಳಲ್ಲಿ ಬೆಟ್ಟಕ್ಕೆ ಅಪಾರ ಪ್ರವಾಸಿಗರು ಆಗಮಿಸಿ ಮಾದಪ್ಪನ ದರ್ಶನ ಪಡೆದಿದ್ದಾರೆ. ಈ ಅವಧಿಯಲ್ಲಿ ಕಾಣಿಕೆ ಹುಂಡಿಗಳನ್ನು ತೆರೆದು ಹಣ ಎಣಿಕೆ ಕಾರ್ಯ ನಡೆಸಿದ್ದು, ನಗದು ರೂಪದಲ್ಲಿ ಮಾದಪ್ಪನಿಗೆ 2,58,44,097 ರೂ. ಕಾಣಿಕೆ ಬಂದು ಸೇರಿದೆ.
ಜತೆಗೆ 93 ಗ್ರಾಂ ಚಿನ್ನ, 3.350 ಕೆಜಿ ಬೆಳ್ಳಿ ಹಾಗೂ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 25 ನೋಟುಗಳು ಪತ್ತೆಯಾಗಿದೆ. ವಿಶೇಷವೆಂದರೆ ಈ ಕಾಣಿಕೆಯಲ್ಲಿ ಸೌದಿ ಅರೇಬಿಯಾ, ನೇಪಾಳ, ಕತಾರ್ ಹಾಗೂ ಜಪಾನ್ ನ ಕರೆನ್ಸಿಗಳು ಕಂಡುಬಂದಿದೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…