.
ಕೊಳ್ಳೇಗಾಲ: ವಿವಿಧ ಪಕ್ಷವನ್ನು ತೊರೆದು ಪೆದ್ದನಪಾಳ್ಯ ಗ್ರಾಮದ ಮುಖಂಡರು ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಜಾತ್ಯಾತೀತ ಜನತಾದಳ ಪಕ್ಷವನ್ನು ಇಂದು ಸೇರ್ಪಡೆಯಾದರು.
ಪಟ್ಟಣದ ಹೊಸಕುರುಬರ ಬೀದಿಯ ಹನೂರು ತಾಲ್ಲೂಕಿನ ಹೂಗ್ಯಂ ಗ್ರಾ.ಪಂ. ಪೆದ್ದನಪಾಳ್ಯ ಗ್ರಾಮದ ಶಿವು, ಮಾರ್ಕಂಡ, ಶಿವಲಿಂಗ, ಸ್ವಾಮಿ, ಮುನಿಯಪ್ಪ, ಶಿವು ಸೇರಿದಂತೆ ಯುವಕರು ಮಾತನಾಡಿ, ಜೆಡಿಎಸ್ ಪಕ್ಷ ಹಾಗೂ ಜಿಲ್ಲಾಧ್ಯಕ್ಷ ಎಂ.ಆರ್.ಮಂಜುನಾಥ್ ರವರ ಮೇಲಿನ ನಂಬಿಕೆ, ವಿಶ್ವಾಸದಿಂದಾಗಿ ನಾವುಗಳು ವಿವಿಧ ಪಕ್ಷವನ್ನು ತೊರೆದು ಇಂದು ಜೆಡಿಎಸ್ ಪಕ್ಷವನ್ನು ಸೇರ್ಪಡೆಯಾಗಿದ್ದೇವೆ ಎಂದು ತಿಳಿಸಿದರು.
ಜೆಡಿಎಸ್ ಶಾಲನ್ನು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ್ ಮಾತನಾಡಿ, ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಇತ್ತೀಚೆಗೆ ಅನೇಕರು ವಿವಿಧ ಪಕ್ಷವನ್ನು ತೊರೆದು ನಮ್ಮ ಪಕ್ಷವನ್ನು ಸೇರ್ಪಡೆಯಾಗುತ್ತಿರುವುದು ಹೆಚ್ಚಿನ ಬಲ ಸಿಕ್ಕಿದಂತಾಗಿದೆ. ಇದ್ದರಿಂದಾಗಿ ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷ ಹನೂರು ಕ್ಷೇತ್ರದಲ್ಲಿ ಗೆಲವು ಸಾಧಿಸುವ ದಿಕ್ಸೂಚಿಯಾಗಿದೆ ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಜಿ.ಪಂ ಮಾಜಿ ಸದಸ್ಯ ಶಿವಮೂರ್ತಿ, ಚಾಮುಲ್ ನಿರ್ದೇಶಕ ಪ್ರಸಾದ್, ಜೆಡಿಎಸ್ ಮುಖಂಡರಾದ ಜೆಸಿಮ್ಮ ಪಾಷ, ಕೌಸರ್, ಪೀಣ್ಯ ಮಾದೇವ, ಮಂಜೇಶ್ ಗೌಡ, ಸೆಲ್ವಂ, ಮಂಜೇಗೌಡ, ಡಿ.ಕೆ ರಾಜು, ವೆಂಕಟೇಶ್, ಶರತ್, ಮಹದೇವಣ್ಣ ಸೇರಿದಂತೆ ಅನೇಕರು ಇದ್ದರು.
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…