ಚಾಮರಾಜನಗರ

ಹನೂರು| 490 ಕೋಟಿ ವೆಚ್ಚದ ನೀರಾವರಿ ಯೋಜನೆಗೆ ಅನುಮೋದನೆ: ಜೆಡಿಎಸ್ ಕಾರ್ಯಕರ್ತರ ಸಂಭ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಜಲಾಶಯಗಳು, ಕೆರೆಗಳಿಗೆ ನೀರು ತುಂಬಿಸುವ 490 ಕೋಟಿ ವೆಚ್ಚದ ನೀರಾವರಿ ಯೋಜನೆಗೆ ಬಜೆಟ್ ನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಅನುಮೋದನೆ ನೀಡುತ್ತಿದ್ದಂತೆ ಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರು ಮುಖಂಡರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಈ ವೇಳೆ ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಲಿಂಗೇಗೌಡ ಮಾತನಾಡಿ, ಉತ್ತರ ದಿಕ್ಕಿನಿಂದ ದಕ್ಷಿಣಕ್ಕೆ ಬಂದ ಮಲೆ ಮಹದೇಶ್ವರರು ಪವಾಡ ಪುರುಷರಾಗಿ ನಮ್ಮ ಹನೂರು ಕ್ಷೇತ್ರದಲ್ಲಿಯೇ ನೆಲೆಸಿದ್ದಾರೆ. ಅದೇ ರೀತಿ ಬೆಂಗಳೂರಿನಿಂದ ಹನೂರು ವಿಧಾನಸಭಾ ಕ್ಷೇತ್ರದ ಜನರ ಕಷ್ಟ ಸುಖಗಳಿಗೆ ಸ್ಪಂದಿಸಲು ಮಂಜುನಾಥ್ ರವರು ಶಾಸಕರಾಗಿ ಬಂದಿದ್ದಾರೆ. ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಮೊದಲ ಅವಧಿಯಲ್ಲಿ ನೀರಾವರಿಯ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಹಲವಾರು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ರಾಮನ ಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಹಲವರು ಚೆಕ್ ಡ್ಯಾಮ್ ಗಳಿಗೆ ನೀರು ಹರಿಸುವ ಮೂಲಕ ಆಧುನಿಕ ಭಗೀರಥರಾಗಿದ್ದಾರೆ. ತಾಲೂಕು ಕೇಂದ್ರವಾಗಿ ಹಲವಾರು ವರ್ಷಗಳು ಕಳೆದಿದ್ದರು ತಾಲೂಕು ಆಸ್ಪತ್ರೆ ಇಲ್ಲದ ಪರಿಣಾಮ ಸಾರ್ವಜನಿಕರಿಗೆ ಹಾಗೂ ರೋಗಿಗಳಿಗೆ ತೊಂದರೆಯಾಗಿತ್ತು. 20 ಕೋಟಿ ವೆಚ್ಚದಲ್ಲಿ 50 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ ಭೂಮಿ ಪೂಜೆ ಸಲ್ಲಿಸಿದ್ದು ಕಾಮಗಾರಿ ಪ್ರಾರಂಭವಾಗಿದೆ ಈ ಕಾಮಗಾರಿ ಮುಗಿದ ನಂತರ ಕ್ಷೇತ್ರದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಸಿಗಲಿದೆ. 200 ಕೋಟಿಗೂ ಹೆಚ್ಚು ಅನುದಾನ ತಂದು ಪ್ರಮುಖ ರಸ್ತೆಗಳ ಅಭಿವೃದ್ಧಿಪಡಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಮುಂದಿನ ಎರಡು ವರ್ಷಗಳ ಕಾಲಾವಕಾಶದಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿ ಮಾಡಲಿದ್ದಾರೆ ಅವರಿಗೆ ಕ್ಷೇತ್ರದ ಜನರು ಹೆಚ್ಚಿನ ಸಹಕಾರ ನೀಡಬೇಕು ಎಂದರು.

ಮಡಿವಾಳ ಸಂಘದ ಜಿಲ್ಲಾ ಉಪಾಧ್ಯಕ್ಷ ವಿಜಯಕುಮಾರ್ ಮಾತನಾಡಿ, ಶಾಸಕರಾದ ಎಂ ಆರ್ ಮಂಜುನಾಥ್ ರವರು ಜ್ಞಾನೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವವನ್ನೇ ಮಾಡುತ್ತಿದ್ದಾರೆ. ಇದೀಗ ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇನ್ನು ಹತ್ತು ಹಲವು ಯೋಜನೆಗಳನ್ನು ಪೂರ್ಣಗೊಳಿಸಲು ಕ್ಷೇತ್ರದ ಆರಾದ್ಯದೈವ ಮಹದೇಶ್ವರರು ಹೆಚ್ಚಿನ ಆರೋಗ್ಯ ಭಾಗ್ಯ ನೀಡಲಿ ಎಂದು ಶುಭ ಕೋರಿದರು.

ಇದೇ ಸಮಯದಲ್ಲಿ ಪಟ್ಟಣ ಪಂಚಾಯತಿ ಮಾಜಿ ಉಪಾಧ್ಯಕ್ಷರಾದ ಆನಂದ್ ಕುಮಾರ್, ಮಡಿವಾಳ ಸಮುದಾಯದ ಜಿಲ್ಲಾ ಉಪಾಧ್ಯಕ್ಷರಾದ ವಿಜಯಕುಮಾರ್, ಜೆಸಿಮ್ ಪಾಷ, ಚಿನ್ನವೆಂಕಟ್, ಎಸ್ ಆರ್ ಮಹದೇವ್, ಶಾಂತಣ್ಣ, ಶ್ರೀರಂಗ ,ಗುರುಸ್ವಾಮಿ, ನಟಣ್ಣ, ಸಾವಕಯ್ಯ, ಕುರಟ್ಟಿ ಹೊಸೂರು ನಾಗರಾಜು, ರಾಚಪ್ಪ, ಪ್ರಮೊದ್, ಸತ್ಯರಾಜ್, ದಿನೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

38 seconds ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

6 mins ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

13 mins ago

ಕಣ್ಣಿಲ್ಲದ ತಮ್ಮ, ದಿಕ್ಕಿಲ್ಲದ ಅಕ್ಕ

ಮಧುಕರ ಎಮ್.ಎಲ್. ಯಳಂದೂರಿನಲ್ಲೊಂದು ಅಪರೂಪದ ಜೋಡಿ ಅದು ಬೇಸಿಗೆ ಕಾಲ, ಬೆಳಗಿನ ವೇಳೆಯಲ್ಲಿ ವಾಕಿಂಗ್ ಮಾಡುವ ಜನರ ಸಂಖ್ಯೆ ಹೆಚ್ಚು,…

19 mins ago

ಯರಿಯೂರಿನ ಸೋಬಾನೆ ಮಾಳಗರಸಮ್ಮ ಮತ್ತು ಸೋದರಿಯರು

ಪ್ರಕಾಶ್ ಪುಟ್ಟಪ್ಪ ಸುತ್ತಮುತ್ತ ಹಳ್ಳಿಗಳಿಗೆಲ್ಲ ಸೋಬಾನೆ ಮಾಳಗರಸಮ್ಮ ಎಂದೇ ಪ್ರಖ್ಯಾತಿ ಗಳಿಸಿರೋ ಈ ಹಿರಿ ತಾಯಿಯ ವೈಯಕ್ತಿಕ ಬದುಕು ನಿಜಕ್ಕೂ…

24 mins ago

2026ರ ಮೈಸೂರು ದಸರಾಗೆ ಡಿಜಿಟಲ್ ಸ್ಪರ್ಶ!

ಕೆ.ಎಸ್.ಚಂದ್ರಶೇಖರ್‌ಮೂರ್ತಿ ಅರಮನೆಯಿಂದ ಪಂಜಿನ ಕವಾಯತುವರೆಗೂ ಅಂಗೈಯ ವೀಕ್ಷಣೆಗೆ ಅವಕಾಶ  ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ೨೦೨೬ರ ವರ್ಷದಲ್ಲಿ ಹತ್ತು ಹಲವು…

28 mins ago