ಚಾಮರಾಜನಗರ

ಪ್ರವಾಸೋದ್ಯಮ, ಹೋಟೆಲ್ ಉದ್ಯಮ ಬೆಳೆದರೆ ಉದ್ಯೋಗ ಸೃಷ್ಟಿ: ಬಿ.ಚಂದ್ರಶೇಖರ ಹೆಬ್ಬಾರ್

ಚಾಮರಾಜನಗರ: ಪ್ರವಾಸೋದ್ಯಮವು ಬೆಳೆದಂತೆ ಹೋಟೆಲ್ ಉದ್ಯಮಗಳು ಬೆಳೆಯಲು ಸಾಧ್ಯವಾಗುತ್ತದೆ. ಇದರಿಂದ ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ಬಿ.ಚಂದ್ರಶೇಖರ ಹೆಬ್ಬಾರ್ ತಿಳಿಸಿದರು.

ನಗರದ ಕರಿನಂಜನಪುರದ ರಸ್ತೆಯಲ್ಲಿ ಇರುವ ಖಾಸಗಿ ಹೋಟೇಲ್ನಲ್ಲಿ ಚಾಮರಾಜನಗರ ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಉದ್ಘಾಟನ ಕಾರ್ಯಕ್ರಮದಲ್ಲಿ ಜ್ಯೊತಿಬೆಳಗಿಸಿ ಮಾತನಾಡಿದ ಅವರು, ಹೋಟೆಲ್ ಉದ್ಯಮ ಬಹಳಷ್ಟು ಜನರಿಗೆ ದಾರಿದೀಪವಾಗಿದೆ. ಇದರಲ್ಲಿ ಕಷ್ಟವು ಇದೆ ಸುಖವು ಇದೆ ಎಂದರು.

೩೦ ವರ್ಷಗಳ ಹಿಂದೆ ಕಡಿಮೆ ಜನರು ಮಾತ್ರ ಹೋಟೆಲ್ಗಳನ್ನು ತೆರೆದು ಜೀವನ ನಡೆಸುತ್ತಿದ್ದರು. ಇತ್ತಿಚೀನ ದಿನಗಳಲ್ಲಿ ಹೋಟೆಲ್ ಉದ್ಯಮ ಸಾಕಷ್ಟು ಬೆಳೆದಿದೆ. ಯಾವುದೇ ವೃತ್ತಿಯನ್ನು ಮಾಡಬೇಕಾದರೆ ಅದರ ಜೊತೆಗೆ ಕೈ ಜೋಡಿಸುವವರು ಬೇಕಾಗುತ್ತದೆ. ಅದೇ ಕಾರಣಕ್ಕೆ ಹೋಟೆಲ್ ಮಾಲೀಕರ ಸಂಘವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಇದರ ಉದ್ದೇಶ ಸರ್ಕಾರದ ಜೊತೆಗೆ ಹೋಟೇಲ್ ಮಾಲೀಕರು ಸೇರಿಕೊಂಡು ಪ್ರವಾಸೋದ್ಯಮವಿರುವ ಜಾಗಗಳಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೋಟೆಲ್ಗಳನ್ನು ತೆರೆದು ಉತ್ತಮ ಆಹಾರವನ್ನು ನೀಡಿದರೆ, ಫಲಹಾರ ಮಂದಿರಗಳು ಬೆಳೆಯಲು ಸಾಧ್ಯವಾಗುತ್ತದೆ ಎಂದರು.

ಚಾಮರಾಜನಗರ ಜಿಲ್ಲೆಯ ಸುತ್ತಲು ಪ್ರವಾಸಿ ಕೇಂದ್ರಗಳು ಇದೇ. ಅಲ್ಲಿ ಇರುವ ಹೋಟೆಲ್ ಉದ್ಯಮಿಗಳನ್ನು ಸಂಘದ ಸದಸ್ಯರಾಗಿ ಮಾಡಿದರೆ ಸಂಘವು ಉತ್ತಮ ಮಟ್ಟಕ್ಕೆ ಬೆಳೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ಹೋಟೆಲ್ ಮಾಲೀಕರ ಸಂಘದ ಗೌರವ ಕಾರ್ಯದರ್ಶಿ ಜಿ.ಕೆ.ಶೆಟ್ಟಿ ಮಾತನಾಡಿ ಚಾಮರಾಜನಗರ ಜಿಲ್ಲೆ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು ಸರ್ಕಾರಿ ಅಧಿಕಾರಿಗಳನ್ನು ಮತ್ತು ಸಾರ್ವಜನಿಕರನ್ನು ಪ್ರೀತಿಯಿಂದ ಗೌರವಿಸಬೇಕು. ಅವರಿಂದ ನಮ್ಮ ಉದ್ಯಮವು ಹೆಚ್ಚಲಿದೆ. ಚಾಮರಾಜನಗರ ಜಿಲ್ಲೆಯು ಶೇಕಡ ೫೦ರಷ್ಟು ಅರಣ್ಯ ಪ್ರದೇಶವನ್ನು ಹೊಂದಿದೆ. ಹೆಚ್ಚು ಪ್ರವಾಸೋದ್ಯಮವು ಇದೇ. ಪ್ರವಾಸೋದ್ಯಮದಲ್ಲಿ ಹೋಟೆಲ್ ತೆರೆಯಲು ಬಯಸುವವರು ಅವರಿಗೆ ಮಾರ್ಗದರ್ಶನ ನೀಡುತ್ತೇನೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಚಾಮರಾಜನಗರ ಹೋಟೆಲ್ ಮಾಲಿಕರ ಸಂಘದ ಅಧ್ಯಕ್ಷ ನಂದ್ಯಪ್ಪ ಶೆಟ್ಟಿ  ಮಾತನಾಡಿ ಇತ್ತೀಚೆಗೆ ಹೋಟೆಲ್ ನಡೆಸಲು ಕಾರ್ಮಿಕರ ಕೊರತೆ ಇದೆ. ಜನರಿಗೆ ಒಪ್ಪುವಂತೆ ರುಚಿಕರವಾದ ಆಹಾರವನ್ನು ಕೊಡಬೇಕಾದರೆ ಕಾರ್ಮಿಕರನ್ನು ನಾವೇ ರೆಡಿಮಾಡಬೇಕಿದೆ. ಎಷ್ಟೋ ಕಾರ್ಮಿಕರು ಸ್ವಂತ ಊರಿನಲ್ಲಿ ಕೆಲಸ ನಿರ್ವಹಿಸಲು ಒಪ್ಪುವುದಿಲ್ಲ, ಚಾಮರಾಜನಗರದ ಹಲವಾರು ಕಾರ್ಮಿಕರು ಬೆಂಗಳೂರು, ಮೈಸೂರುಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಹೋಟೆಲ್ ನಡೆಸಲು ಪೈಪೋಟಿ ನಡೆಸಬೇಕಿದೆ. ಬೆಲೆ ಏರಿಕೆಯಾದ ಸಂದರ್ಭದಲ್ಲಿ ಗ್ರಾಹಕರು ನಮ್ಮ ಜೊತೆ ಸಹಕರಿಸಿದರೆ ಉದ್ಯಮ ಬೆಳೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಚಾಮರಾಜನಗರ ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಕಾರ್ಯದರ್ಶಿ ಪ್ರತಾಪ್.ಎಸ್ ಮಾತನಾಡಿ ಹೋಟೆಲ್ ಉದ್ಯಮಕ್ಕೆ ಸೇರುವ ಸಂಸ್ಥೆಗಳು ಬಾರ್ & ರೆಸ್ಟೋರೆಂಟ್, ರೇರ್ಜಟ್, ಹೊಂಸ್ಟೆ, ಬೇಕರಿ, ಸ್ವೀಟ್ಸ್ಟಾಲ್, ಕ್ಯಾಟಿಂಗ್ ಗಳು ಇದರ ಅನುದಡಿಗೆ ಬರುತ್ತದೆ. ನಮ್ಮ ಸಂಘವನ್ನು ತಾಲ್ಲೂಕು ಸಂಘವನ್ನು ಕೋವಿಡ್ ಸಂದರ್ಭದಲ್ಲಿ ಸ್ಥಾಪಿಸಲಾಯಿತು. ಜಿಲ್ಲಾ ಸಂಘವನ್ನು ಇಂದು ಉದ್ಘಾಟನೆಯಾಗಿದೆ. ನಮ್ಮ ಸಂಘದಲ್ಲಿ ೫೦ ಜನ ಸದಸ್ಯರು ಇದ್ದಾರೆ ಈ ಸಂಘ ಸದಸ್ಯತ್ವವನ್ನು ಜಿಲ್ಯಾಂದ್ಯತ ಮಾಡಲು ಹೊರಟಿದ್ದೇವೆ ಎಂದು ಹೇಳಿದರು.

ಮೈಸೂರು ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷರಾದ ಸಿ.ನಾರಾಯಣಗೌಡ, ಕರ್ನಾಟಕ ರಾಜ್ಯ ಹೋಟೆಲ್ ಮಾಲೀಕರ ಸಂಘದ ಉಪಾಧ್ಯಕ್ಷ ರವಿಶಾಸ್ತ್ರಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಎಲ್ಲರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಖಜಾಂಚಿ ವಿಜಯ್ಕುಲಾಲ್, ಉಪಾಧ್ಯಕ್ಷ ಸಿ.ಓ.ಪಾಪಣ್ಣ, ಶ್ರೀನಿವಾಸ್ರಾವ್, ಸಹ ಕಾರ್ಯದರ್ಶಿ ಜಿ.ಅಂಕಶೆಟ್ಟಿ, ಸಮಿತಿ ಸದಸ್ಯರಾದ ಕೆ.ಇ.ಮಂಜುನಾಥ್, ಜಿ.ಶಂಕರ್, ವೆಂಕಟೇಶ್.ಎಂ ಕುಮಾರ್, ಕಿರಣ್.ಎಸ್ ಉಪಸ್ಥಿತರಿದ್ದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಎಲ್ಲಾ ಶಾಸಕರಿಗೂ ಮಂತ್ರಿ ಆಗಬೇಕೆಂಬ ಆಸೆ ಇರುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…

1 min ago

114 ಸೆಕ್ಷನ್‌ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ: ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಬೆಂಗಳೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾದರೆ 114 ಸೆಕ್ಷನ್‌ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ ಎಂದು…

11 mins ago

ಸಿಎಂ ಸಿದ್ದರಾಮಯ್ಯ ಭೇಟಿಯಾದ ತೆಲಂಗಾಣ ಡಿಸಿಎಂ: ಮಗನ ಮದುವೆಗೆ ಆಹ್ವಾನ

ಬೆಂಗಳೂರು: ತೆಲಂಗಾಣ ರಾಜ್ಯದ ಡಿಸಿಎಂ ಭಟ್ಟಿ ವಿಕ್ರಮಾರ್ಕ ಮಲ್ಲು ಅವರಿಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡಿಸಿಎಂ…

22 mins ago

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ಪ್ರಕರಣ: 15 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

ಶಿವಮೊಗ್ಗ: ಇಲ್ಲಿನ ಸೂಳೆಬೈಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆತನ ಕುಟುಂಬಕ್ಕೆ 15…

39 mins ago

ಹೊಸ ಶಾಸಕರನ್ನು ಮಂತ್ರಿ ಮಾಡಿದ್ರೆ ತಪ್ಪೇನು?: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…

57 mins ago

ಎಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿದ ವಿಚಾರ: ಸಚಿವ ಪರಮೇಶ್ವರ್‌ ರಿಯಾಕ್ಷನ್‌

ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಪರಮೇಶ್ವರ್‌ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದ…

1 hour ago