ಚಾಮರಾಜನಗರ

ಆಕ್ಸಿಜನ್‌ ದುರಂತದ ಎಲ್ಲಾ ಸಂತ್ರಸ್ತರಿಗೂ ಉದ್ಯೋಗ : ಸಿಎಂ ಜೊತೆ ಚರ್ಚಿಸುವುದಾಗಿ ಎಆರ್‌ಕೆ ಭರವಸೆ

ಚಾಮರಾಜನಗರ : ಕೋವಿಡ್ ಸಂದರ್ಭದಲ್ಲಿ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಎಲ್ಲ ೩೬ ಮಂದಿಯ ಕುಟುಂಬದವರಿಗೂ ಸರ್ಕಾರಿ ಉದ್ಯೋಗ ದೊರೆಯಬೇಕು. ಈ ನಿಟ್ಟಿನಲ್ಲಿ ನಾನು ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸುತ್ತೇನೆ ಎಂದು ಶಾಸಕ ಎ.ಆರ್.ಕೃಷ್ಣಮುರ್ತಿ ತಿಳಿಸಿದರು.

ನಗರದಲ್ಲಿ ಆಕ್ಸಿಜನ್ ಸಂತ್ರಸ್ತರರು, ಎಸ್‌ಡಿಪಿಐ ಮುಖಂಡರಾದ ಅಬ್ರಾರ್ ಅಹಮದ್, ಮಹೇಶ್, ಪಿ.ಸಂಘಸೇನ ಹಾಗೂ ಇತರರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಯುವ ನಾಯಕರಾದ ರಾಹುಲ್ ಗಾಂಧಿ ಅವರ ಒತ್ತಾಸೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಚಿವ ಸಂಪುಟದಲ್ಲಿ ವಿಚಾರವನ್ನು ಮಂಡಿಸಿ, ಸರ್ಕಾರಿ ಉದ್ಯೋಗ ನೀಡುವುದಕ್ಕೆ ಒಪ್ಪಿಗೆ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

ಭಾರತ್ ಜೋಡೋ ಯಾತ್ರೆಯು ಗುಂಡ್ಲುಪೇಟೆಗೆ ಬಂದಾಗ ರಾಹುಲ್ ಗಾಂಧಿ ಅವರು, ಆಕ್ಸಿಜನ್ ದುರಂತದಲ್ಲಿ ಮೃತರಾದ ೩೬ ಮಂದಿಯ ಸಂತ್ರಸ್ತ ಕುಟುಂಬಗಳನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಸಂವಾದ ನಡೆಸಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮೆಲ್ಲರಿಗೂ ಒಳ್ಳೆಯದಾಗುತ್ತದೆ ಎಂಬ ಭರವಸೆ ಸಿಕ್ಕಿತ್ತು ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಈ ಬಗ್ಗೆ ರಾಜ್ಯ ವರಿಷ್ಠರಿಗೆ ಸೂಚನೆ ನೀಡಿ, ಈ ಬೇಡಿಕೆಯನ್ನು ಈಡೇರಿಸಬೇಕೆಂದು ಸೂಚನೆ ನೀಡಿದ ಫಲವಾಗಿ ನಿಮ್ಮೆಲ್ಲರಿಗೂ ಒಳ್ಳೆಯದಾಗಿದೆ. ನಾನು ಜಿಲ್ಲೆಯ ಶಾಸಕನಾಗಿ ನನ್ನ ಕರ್ತವ್ಯ ಮಾಡಿದ್ದೇವೆ. ಆ ಸಂದರ್ಭದಲ್ಲಿ ನಮ್ಮ ಪಕ್ಷವು ನಿಮ್ಮೊಂದಿಗೆ ನಿಂತು ಹೋರಾಟ ಮಾಡಿತ್ತು ಎಂದರು.

ಸರ್ಕಾರಕ್ಕೆ ಆರೋಗ್ಯ ಇಲಾಖೆ ನೀಡಿರುವ ವರದಿಯನ್ವಯ ೨೧ ಮಂದಿಗೆ ಸರ್ಕಾರಿ ಉದ್ಯೋಗ ದೊರೆಯುತ್ತಿದೆ. ಇನ್ನು ಉಳಿದವರಿಗೂ ಸರ್ಕಾರಿ ಕೆಲಸ ಕೊಡಿಸಲು ಪ್ರಯತ್ನ ಮಾಡಲಾಗುವುದು. ಜಿಲ್ಲಾಧಿಕಾರಿ ಶಿಲ್ಪನಾಗ್ ಅವರು ನಿಮ್ಮ ಪರವಾಗಿ ಶ್ರಮಿಸಿದ್ದಾರೆ. ಅವರೊಂದಿಗೆ ನಾನು ಕೂಡ ಸಮಾಲೋಚನೆ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲರಿಗೂ ಒಳ್ಳಯದಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ದುರಂತದ ಸಂತ್ರಸ್ತರಾದ ನಾಗರತ್ನ, ಸಿದ್ದರಾಜಮ್ಮ, ಮರಿಸ್ವಾಮಿ, ಶಿವಣ್ಣ, ನಂದಿನಿ, ಸುಶೀಲಾ, ಸವಿತಾ, ಮುಖಂಡರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

5 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

5 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

5 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

6 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

6 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

7 hours ago