ಚಾಮರಾಜನಗರ : ಕೋವಿಡ್ ಸಂದರ್ಭದಲ್ಲಿ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಎಲ್ಲ ೩೬ ಮಂದಿಯ ಕುಟುಂಬದವರಿಗೂ ಸರ್ಕಾರಿ ಉದ್ಯೋಗ ದೊರೆಯಬೇಕು. ಈ ನಿಟ್ಟಿನಲ್ಲಿ ನಾನು ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸುತ್ತೇನೆ ಎಂದು ಶಾಸಕ ಎ.ಆರ್.ಕೃಷ್ಣಮುರ್ತಿ ತಿಳಿಸಿದರು.
ನಗರದಲ್ಲಿ ಆಕ್ಸಿಜನ್ ಸಂತ್ರಸ್ತರರು, ಎಸ್ಡಿಪಿಐ ಮುಖಂಡರಾದ ಅಬ್ರಾರ್ ಅಹಮದ್, ಮಹೇಶ್, ಪಿ.ಸಂಘಸೇನ ಹಾಗೂ ಇತರರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಯುವ ನಾಯಕರಾದ ರಾಹುಲ್ ಗಾಂಧಿ ಅವರ ಒತ್ತಾಸೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಚಿವ ಸಂಪುಟದಲ್ಲಿ ವಿಚಾರವನ್ನು ಮಂಡಿಸಿ, ಸರ್ಕಾರಿ ಉದ್ಯೋಗ ನೀಡುವುದಕ್ಕೆ ಒಪ್ಪಿಗೆ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.
ಭಾರತ್ ಜೋಡೋ ಯಾತ್ರೆಯು ಗುಂಡ್ಲುಪೇಟೆಗೆ ಬಂದಾಗ ರಾಹುಲ್ ಗಾಂಧಿ ಅವರು, ಆಕ್ಸಿಜನ್ ದುರಂತದಲ್ಲಿ ಮೃತರಾದ ೩೬ ಮಂದಿಯ ಸಂತ್ರಸ್ತ ಕುಟುಂಬಗಳನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಸಂವಾದ ನಡೆಸಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮೆಲ್ಲರಿಗೂ ಒಳ್ಳೆಯದಾಗುತ್ತದೆ ಎಂಬ ಭರವಸೆ ಸಿಕ್ಕಿತ್ತು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಈ ಬಗ್ಗೆ ರಾಜ್ಯ ವರಿಷ್ಠರಿಗೆ ಸೂಚನೆ ನೀಡಿ, ಈ ಬೇಡಿಕೆಯನ್ನು ಈಡೇರಿಸಬೇಕೆಂದು ಸೂಚನೆ ನೀಡಿದ ಫಲವಾಗಿ ನಿಮ್ಮೆಲ್ಲರಿಗೂ ಒಳ್ಳೆಯದಾಗಿದೆ. ನಾನು ಜಿಲ್ಲೆಯ ಶಾಸಕನಾಗಿ ನನ್ನ ಕರ್ತವ್ಯ ಮಾಡಿದ್ದೇವೆ. ಆ ಸಂದರ್ಭದಲ್ಲಿ ನಮ್ಮ ಪಕ್ಷವು ನಿಮ್ಮೊಂದಿಗೆ ನಿಂತು ಹೋರಾಟ ಮಾಡಿತ್ತು ಎಂದರು.
ಸರ್ಕಾರಕ್ಕೆ ಆರೋಗ್ಯ ಇಲಾಖೆ ನೀಡಿರುವ ವರದಿಯನ್ವಯ ೨೧ ಮಂದಿಗೆ ಸರ್ಕಾರಿ ಉದ್ಯೋಗ ದೊರೆಯುತ್ತಿದೆ. ಇನ್ನು ಉಳಿದವರಿಗೂ ಸರ್ಕಾರಿ ಕೆಲಸ ಕೊಡಿಸಲು ಪ್ರಯತ್ನ ಮಾಡಲಾಗುವುದು. ಜಿಲ್ಲಾಧಿಕಾರಿ ಶಿಲ್ಪನಾಗ್ ಅವರು ನಿಮ್ಮ ಪರವಾಗಿ ಶ್ರಮಿಸಿದ್ದಾರೆ. ಅವರೊಂದಿಗೆ ನಾನು ಕೂಡ ಸಮಾಲೋಚನೆ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲರಿಗೂ ಒಳ್ಳಯದಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ದುರಂತದ ಸಂತ್ರಸ್ತರಾದ ನಾಗರತ್ನ, ಸಿದ್ದರಾಜಮ್ಮ, ಮರಿಸ್ವಾಮಿ, ಶಿವಣ್ಣ, ನಂದಿನಿ, ಸುಶೀಲಾ, ಸವಿತಾ, ಮುಖಂಡರು ಉಪಸ್ಥಿತರಿದ್ದರು.
ಮೈಸೂರು : ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಟ್ಟು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ನಗರ…
ಟೆಹ್ರಾನ್ : ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಘರ್ಷಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಗಳು…
ಜೆರುಸಲೆಮ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ವಿರುದ್ಧದ ತಮ್ಮ ದೇಶದ ಸೈನಿಕ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ…
ಬೆಂಗಳೂರು : ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್ವೆಲ್ಗಳನ್ನು…
ಹೊಸದಿಲ್ಲಿ : ಇರಾನ್-ಇಸ್ರೇಲ್-ಅಮೆರಿಕಾ ನಡುವೆ ಹೆಚ್ಚುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಎಲ್ಪಿಜಿ (ಅಡುಗೆ ಗ್ಯಾಸ್) ಸರಬರಾಜುವಿನಲ್ಲಿ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ…
ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…