ಚಾಮರಾಜನಗರ

ಆಕ್ಸಿಜನ್‌ ದುರಂತದ ಎಲ್ಲಾ ಸಂತ್ರಸ್ತರಿಗೂ ಉದ್ಯೋಗ : ಸಿಎಂ ಜೊತೆ ಚರ್ಚಿಸುವುದಾಗಿ ಎಆರ್‌ಕೆ ಭರವಸೆ

ಚಾಮರಾಜನಗರ : ಕೋವಿಡ್ ಸಂದರ್ಭದಲ್ಲಿ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಎಲ್ಲ ೩೬ ಮಂದಿಯ ಕುಟುಂಬದವರಿಗೂ ಸರ್ಕಾರಿ ಉದ್ಯೋಗ ದೊರೆಯಬೇಕು. ಈ ನಿಟ್ಟಿನಲ್ಲಿ ನಾನು ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸುತ್ತೇನೆ ಎಂದು ಶಾಸಕ ಎ.ಆರ್.ಕೃಷ್ಣಮುರ್ತಿ ತಿಳಿಸಿದರು.

ನಗರದಲ್ಲಿ ಆಕ್ಸಿಜನ್ ಸಂತ್ರಸ್ತರರು, ಎಸ್‌ಡಿಪಿಐ ಮುಖಂಡರಾದ ಅಬ್ರಾರ್ ಅಹಮದ್, ಮಹೇಶ್, ಪಿ.ಸಂಘಸೇನ ಹಾಗೂ ಇತರರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಯುವ ನಾಯಕರಾದ ರಾಹುಲ್ ಗಾಂಧಿ ಅವರ ಒತ್ತಾಸೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಚಿವ ಸಂಪುಟದಲ್ಲಿ ವಿಚಾರವನ್ನು ಮಂಡಿಸಿ, ಸರ್ಕಾರಿ ಉದ್ಯೋಗ ನೀಡುವುದಕ್ಕೆ ಒಪ್ಪಿಗೆ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

ಭಾರತ್ ಜೋಡೋ ಯಾತ್ರೆಯು ಗುಂಡ್ಲುಪೇಟೆಗೆ ಬಂದಾಗ ರಾಹುಲ್ ಗಾಂಧಿ ಅವರು, ಆಕ್ಸಿಜನ್ ದುರಂತದಲ್ಲಿ ಮೃತರಾದ ೩೬ ಮಂದಿಯ ಸಂತ್ರಸ್ತ ಕುಟುಂಬಗಳನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಸಂವಾದ ನಡೆಸಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮೆಲ್ಲರಿಗೂ ಒಳ್ಳೆಯದಾಗುತ್ತದೆ ಎಂಬ ಭರವಸೆ ಸಿಕ್ಕಿತ್ತು ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಈ ಬಗ್ಗೆ ರಾಜ್ಯ ವರಿಷ್ಠರಿಗೆ ಸೂಚನೆ ನೀಡಿ, ಈ ಬೇಡಿಕೆಯನ್ನು ಈಡೇರಿಸಬೇಕೆಂದು ಸೂಚನೆ ನೀಡಿದ ಫಲವಾಗಿ ನಿಮ್ಮೆಲ್ಲರಿಗೂ ಒಳ್ಳೆಯದಾಗಿದೆ. ನಾನು ಜಿಲ್ಲೆಯ ಶಾಸಕನಾಗಿ ನನ್ನ ಕರ್ತವ್ಯ ಮಾಡಿದ್ದೇವೆ. ಆ ಸಂದರ್ಭದಲ್ಲಿ ನಮ್ಮ ಪಕ್ಷವು ನಿಮ್ಮೊಂದಿಗೆ ನಿಂತು ಹೋರಾಟ ಮಾಡಿತ್ತು ಎಂದರು.

ಸರ್ಕಾರಕ್ಕೆ ಆರೋಗ್ಯ ಇಲಾಖೆ ನೀಡಿರುವ ವರದಿಯನ್ವಯ ೨೧ ಮಂದಿಗೆ ಸರ್ಕಾರಿ ಉದ್ಯೋಗ ದೊರೆಯುತ್ತಿದೆ. ಇನ್ನು ಉಳಿದವರಿಗೂ ಸರ್ಕಾರಿ ಕೆಲಸ ಕೊಡಿಸಲು ಪ್ರಯತ್ನ ಮಾಡಲಾಗುವುದು. ಜಿಲ್ಲಾಧಿಕಾರಿ ಶಿಲ್ಪನಾಗ್ ಅವರು ನಿಮ್ಮ ಪರವಾಗಿ ಶ್ರಮಿಸಿದ್ದಾರೆ. ಅವರೊಂದಿಗೆ ನಾನು ಕೂಡ ಸಮಾಲೋಚನೆ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲರಿಗೂ ಒಳ್ಳಯದಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ದುರಂತದ ಸಂತ್ರಸ್ತರಾದ ನಾಗರತ್ನ, ಸಿದ್ದರಾಜಮ್ಮ, ಮರಿಸ್ವಾಮಿ, ಶಿವಣ್ಣ, ನಂದಿನಿ, ಸುಶೀಲಾ, ಸವಿತಾ, ಮುಖಂಡರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

21 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

21 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

21 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

21 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

21 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

21 hours ago