Kalanahundi | Protest demanding better bus facilities
ಚಾಮರಾಜನಗರ: ತಾಲ್ಲೂಕಿನ ಕಾಳನಹುಂಡಿ ಗ್ರಾಮಕ್ಕೆ ಹೆಚ್ಚುವರಿ ಸಾರಿಗೆ ಬಸ್ಗಳನ್ನು ಓಡಿಸುವಂತೆ ಆಗ್ರಹಿಸಿ ಗ್ರಾಮದ ಸಂಚಾರ ಮಾರ್ಗದಲ್ಲಿ ಗ್ರಾಮಸ್ಥರು, ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ಮಾಡಿದರು.
ಚಾಮರಾಜನಗರದಿಂದ ಕಲ್ಪುರ ಮಾರ್ಗವಾಗಿ ಕಾಳನಹುಂಡಿ ಗ್ರಾಮಕ್ಕೆ ಬರುವ ಸಾರಿಗೆ ಬಸ್ ಗಳು ದಿನಾಲೂ ಜನರಿಂದ ತುಂಬಿ ಹೋಗುತ್ತಿದ್ದು ಜನರು ಬಸ್ ಹತ್ತಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಕಾಳನಹುಂಡಿ ಗ್ರಾಮದ ವಿದ್ಯಾರ್ಥಿಗಳು, ಸಾರ್ವಜನಿಕರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ಬಸ್ ಪ್ರಯಾಣದಿಂದಲೇ ದೂರ ಉಳಿದು ತೊಂದರೆ ಪಡುವಂತಾಗಿದೆ. ಈ ವಾಸ್ತವ ಸ್ಥಿತಿಯ ಅರಿವು ಇದ್ದರೂ ಕೆಎಸ್ಸಾರ್ಟಿಸಿ ಅಧಿಕಾರಿಗಳು ಹೆಚ್ಚುವರಿ ಬಸ್ ಓಡಿಸಲು ಯಾವುದೇ ಕ್ರಮ ವಹಿಸದಿರುವುದರಿಂದ ಬೇಸತ್ತು ಪ್ರತಿಭಟನೆಗೆ ಇಳಿದಿರುವುದಾಗಿ ತಿಳಿಸಿದರು.
ಕಾಳನಹುಂಡಿ ಹಾಗೂ ಕಲ್ಪುರ ಗ್ರಾಮಗಳಿಗೆ ಪ್ರತ್ಯೇಕವಾಗಿ ಸಾರಿಗೆ ಬಸ್ಗಳನ್ನು ಓಡಿಸಿ ಜನರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.
ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಡಿಪೋ ಮ್ಯಾನೇಜರ್ ಕುಮಾರನಾಯಕ್ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಅಹವಾಲು ಆಲಿಸಿದರು. ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಲು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದ ಮೇರೆಗೆ ಪ್ರತಿಭಟನೆ ಕೈಬಿಟ್ಟರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…