ಹನೂರು: ಮೈಸೂರು ಎಂಬ ರಾಜ್ಯದಿಂದ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಕರ್ನಾಟಕ ರಾಜ್ಯ ಎಂದು ಮರುನಾಮಕರಣ ಮಾಡಿ 50 ವರ್ಷ ಪೂರ್ಣಗೊಂಡ ಹಿನ್ನೆಲೆ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು.
ಹನೂರು ಪಟ್ಟಣದ ಲೋಕೋಪಯೋಗಿ ವಸತಿಗೃಹದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಮೈಸೂರು ರಾಜ್ಯ ಈಗಿನ ಕರ್ನಾಟಕ ೧೯೫೬ ನವೆಂಬರ್ ಒಂದರಂದು ನಿರ್ಮಾಣವಾದುದರ ಸಂಕೇತವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಕನ್ನಡಿಗರು ನಾಡ ಹಬ್ಬವನ್ನಾಗಿ ಆಚರಿಸುತ್ತಿದ್ದಾರೆ.
ಹನೂರು ತಾಲೂಕು ವ್ಯಾಪ್ತಿಯಲ್ಲಿ ವಿವಿಧ ಭಾಷೆಯ ಜನರು ಶಾಂತಿ ಸಹ ಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ಎಲ್ಲಾ ಭಾಷೆಯ ಜನರನ್ನು ಒಗ್ಗೂಡಿಸಿಕೊಂಡು, ರಾಜ್ಯದ ಗಡಿ ತಾಲೂಕಾದ ಹನೂರಿನಲ್ಲಿ ವಿಜೃಂಭಣೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಬೇಕು, ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಮುಖಂಡರುಗಳು ಪಕ್ಷತೀತವಾಗಿ ಸಹಕರಿಸಬೇಕು, ನಮ್ಮ ಕಾರ್ಯಕ್ರಮ ಇತಿಹಾಸ ಪುಟದಲ್ಲಿ ಸೇರುವಂತೆ ಆಚರಣೆ ಮಾಡಬೇಕು ಎಂದು ಸಲಹೆ ನೀಡಿದರು.
ಪ್ರತಿ ವರ್ಷದಂತೆ ಈ ವರ್ಷವೂ ಪಟ್ಟಣದ ಉನ್ನತೀಕರಿಸಿದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರಧ್ವಜ ಹಾಗೂ ನಾಡಧ್ವಜ ಹಾರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಬೇಕು. ಕಾರ್ಯಕ್ರಮದಲ್ಲಿ ಬರುವಂತಹ ಅತಿಥಿಗಳು ಹಾಗೂ ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ, ಉಪಹಾರ, ಕನ್ನಡ ಧ್ವಜ ಶಾಲು, ಶಲ್ಯ ಸೇರಿದಂತೆ ಕಾರ್ಯಕ್ರಮದ ಜವಾಬ್ದಾರಿಯನ್ನು ಇಲಾಖೆವಾರು ಹಂಚಿಕೆ ಮಾಡುವ ಬಗ್ಗೆ ತಹಸಿಲ್ದಾರ್ ರವರಿಂದ ಮಾಹಿತಿ ಪಡೆದುಕೊಂಡು ಜವಾಬ್ದಾರಿ ವಹಿಸಿಕೊಂಡ ಇಲಾಖೆಯವರು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು. ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತಿರುವ ಹಿನ್ನೆಲೆ ಪಟ್ಟಣದ ವಿವಿಧೆಡೆ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡುವಂತೆ ಸೂಚನೆ ನೀಡಿದರು.
ಪಟ್ಟಣದ ಆರ್ ಎಂ ಸಿ ಆವರಣದಿಂದ ಕಲಾ ತಂಡಗಳ ಮೂಲಕ ಕನ್ನಡಾಂಬೆಯ ಭಾವ ಚಿತ್ರ ಮೆರವಣಿಗೆಯನ್ನು ಮಾಡಬೇಕು, ಕ್ಷೇತ್ರ ವ್ಯಾಪ್ತಿಯ ಹಾಗೂ ಜಿಲ್ಲೆಯ ಪ್ರವಾಸಿ ತಾಣಗಳ ಕುರಿತು ಸ್ತಬ್ದ ಚಿತ್ರಗಳನ್ನು ಆಯೋಜನೆ ಮಾಡಬೇಕು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಬೇಕು, ಈ ನಿಟ್ಟಿನಲ್ಲಿ ಅಧಿಕಾರಿಗಳು ಹೋರಾಟಗಾರರು ಸಹಕಾರ ನೀಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಹಸಿಲ್ದಾರ್ ವೈಕೆ ಗುರುಪ್ರಸಾದ್, ಪಪಂ ಅಧ್ಯಕ್ಷೆ ಮುಮ್ತಾಜ್ ಬಾನು, ಉಪಾಧ್ಯಕ್ಷ ಆನಂದ್ ಕುಮಾರ್, ಮಹೇಶ್, ಸೋಮಶೇಖರ್, ಟಿಎಚ್ಒ ಡಾ ಪ್ರಕಾಶ್, ಮುಖ್ಯಾಧಿಕಾರಿ ಅಶೋಕ್ ,ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜೇಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೇಶವಮೂರ್ತಿ ,ಸಿಡಿಪಿಓ ನಂಜಮಣಿ, ದೈಹಿಕ ಪರಿವೀಕ್ಷಕ ಮಹದೇವ್, ಎಎಸ್ಐ ಶಿವಕುಮಾರ್, ಕಂದಾಯ ನಿರೀಕ್ಷಕ ಶೇಷಣ್ಣ, ಗ್ರಾಮ ಆಡಳಿತ ಅಧಿಕಾರಿ ಕಾವ್ಯ, ಕನ್ನಡಪರ ಹೋರಾಟಗಾರ ವಿನೋದ್, ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಅಭಿಲಾಶ್ ರೈತ ಮುಖಂಡ ಮಾದಪ್ಪ, ಸೇರಿದಂತೆ ಇನ್ನಿತರರು ಹಾಜರಿದ್ದರು.
ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…
ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…
ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…
ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…
ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…