ಚಾಮರಾಜನಗರ

ಹನೂರಿನಲ್ಲಿ ಈ ಬಾರಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು: ಶಾಸಕ ಎಂಆರ್‌ ಮಂಜುನಾಥ್‌

ಹನೂರು: ಮೈಸೂರು ಎಂಬ ರಾಜ್ಯದಿಂದ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಕರ್ನಾಟಕ ರಾಜ್ಯ ಎಂದು ಮರುನಾಮಕರಣ ಮಾಡಿ 50 ವರ್ಷ ಪೂರ್ಣಗೊಂಡ ಹಿನ್ನೆಲೆ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು.

ಹನೂರು ಪಟ್ಟಣದ ಲೋಕೋಪಯೋಗಿ ವಸತಿಗೃಹದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಮೈಸೂರು ರಾಜ್ಯ ಈಗಿನ ಕರ್ನಾಟಕ ೧೯೫೬ ನವೆಂಬರ್ ಒಂದರಂದು ನಿರ್ಮಾಣವಾದುದರ ಸಂಕೇತವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಕನ್ನಡಿಗರು ನಾಡ ಹಬ್ಬವನ್ನಾಗಿ ಆಚರಿಸುತ್ತಿದ್ದಾರೆ.

ಹನೂರು ತಾಲೂಕು ವ್ಯಾಪ್ತಿಯಲ್ಲಿ ವಿವಿಧ ಭಾಷೆಯ ಜನರು ಶಾಂತಿ ಸಹ ಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ಎಲ್ಲಾ ಭಾಷೆಯ ಜನರನ್ನು ಒಗ್ಗೂಡಿಸಿಕೊಂಡು, ರಾಜ್ಯದ ಗಡಿ ತಾಲೂಕಾದ ಹನೂರಿನಲ್ಲಿ ವಿಜೃಂಭಣೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಬೇಕು, ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಮುಖಂಡರುಗಳು ಪಕ್ಷತೀತವಾಗಿ ಸಹಕರಿಸಬೇಕು, ನಮ್ಮ ಕಾರ್ಯಕ್ರಮ ಇತಿಹಾಸ ಪುಟದಲ್ಲಿ ಸೇರುವಂತೆ ಆಚರಣೆ ಮಾಡಬೇಕು ಎಂದು ಸಲಹೆ ನೀಡಿದರು.

ಪ್ರತಿ ವರ್ಷದಂತೆ ಈ ವರ್ಷವೂ ಪಟ್ಟಣದ ಉನ್ನತೀಕರಿಸಿದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರಧ್ವಜ ಹಾಗೂ ನಾಡಧ್ವಜ ಹಾರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಬೇಕು. ಕಾರ್ಯಕ್ರಮದಲ್ಲಿ ಬರುವಂತಹ ಅತಿಥಿಗಳು ಹಾಗೂ ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ, ಉಪಹಾರ, ಕನ್ನಡ ಧ್ವಜ ಶಾಲು, ಶಲ್ಯ ಸೇರಿದಂತೆ ಕಾರ್ಯಕ್ರಮದ ಜವಾಬ್ದಾರಿಯನ್ನು ಇಲಾಖೆವಾರು ಹಂಚಿಕೆ ಮಾಡುವ ಬಗ್ಗೆ ತಹಸಿಲ್ದಾರ್ ರವರಿಂದ ಮಾಹಿತಿ ಪಡೆದುಕೊಂಡು ಜವಾಬ್ದಾರಿ ವಹಿಸಿಕೊಂಡ ಇಲಾಖೆಯವರು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು. ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತಿರುವ ಹಿನ್ನೆಲೆ ಪಟ್ಟಣದ ವಿವಿಧೆಡೆ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡುವಂತೆ ಸೂಚನೆ ನೀಡಿದರು.

ಪಟ್ಟಣದ ಆರ್ ಎಂ ಸಿ ಆವರಣದಿಂದ ಕಲಾ ತಂಡಗಳ ಮೂಲಕ ಕನ್ನಡಾಂಬೆಯ ಭಾವ ಚಿತ್ರ ಮೆರವಣಿಗೆಯನ್ನು ಮಾಡಬೇಕು, ಕ್ಷೇತ್ರ ವ್ಯಾಪ್ತಿಯ ಹಾಗೂ ಜಿಲ್ಲೆಯ ಪ್ರವಾಸಿ ತಾಣಗಳ ಕುರಿತು ಸ್ತಬ್ದ ಚಿತ್ರಗಳನ್ನು ಆಯೋಜನೆ ಮಾಡಬೇಕು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಬೇಕು, ಈ ನಿಟ್ಟಿನಲ್ಲಿ ಅಧಿಕಾರಿಗಳು ಹೋರಾಟಗಾರರು ಸಹಕಾರ ನೀಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಹಸಿಲ್ದಾರ್ ವೈಕೆ ಗುರುಪ್ರಸಾದ್, ಪಪಂ ಅಧ್ಯಕ್ಷೆ ಮುಮ್ತಾಜ್ ಬಾನು, ಉಪಾಧ್ಯಕ್ಷ ಆನಂದ್ ಕುಮಾರ್, ಮಹೇಶ್, ಸೋಮಶೇಖರ್, ಟಿಎಚ್ಒ ಡಾ ಪ್ರಕಾಶ್, ಮುಖ್ಯಾಧಿಕಾರಿ ಅಶೋಕ್ ,ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜೇಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೇಶವಮೂರ್ತಿ ,ಸಿಡಿಪಿಓ ನಂಜಮಣಿ, ದೈಹಿಕ ಪರಿವೀಕ್ಷಕ ಮಹದೇವ್, ಎಎಸ್ಐ ಶಿವಕುಮಾರ್, ಕಂದಾಯ ನಿರೀಕ್ಷಕ ಶೇಷಣ್ಣ, ಗ್ರಾಮ ಆಡಳಿತ ಅಧಿಕಾರಿ ಕಾವ್ಯ, ಕನ್ನಡಪರ ಹೋರಾಟಗಾರ ವಿನೋದ್, ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಅಭಿಲಾಶ್ ರೈತ ಮುಖಂಡ ಮಾದಪ್ಪ, ಸೇರಿದಂತೆ ಇನ್ನಿತರರು ಹಾಜರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

32 mins ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

39 mins ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

1 hour ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

2 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

2 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

3 hours ago