ಚಾಮರಾಜನಗರ: ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬಂಡೀಪುರ ಅರಣ್ಯ ಪ್ರದೇಶಕ್ಕೆ ಅಪಾರ ಪ್ರಮಾಣದ ನೀರು ನುಗ್ಗಿದೆ.
ಬಂಡೀಪುರಕ್ಕೆ ಅಪಾರ ಪ್ರಮಾಣದ ನೀರು ನುಗ್ಗಿರುವ ಪರಿಣಾಮ ಕೇರಳದ ವಯನಾಡು-ಗುಂಡ್ಲುಪೇಟೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಸೇತುವೆ ಬಂದ್ ಆಗಿದೆ.
ರಾಷ್ಟ್ರೀಯ ಹೆದ್ದಾರಿ ಮೇಲೆ ಅಪಾರ ಪ್ರಮಾಣದ ನೀರು ಹರಿಯುತ್ತಿದ್ದು, ಮಳೆ ಜಾಸ್ತಿಯಾದ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಕೇರಳದಲ್ಲಿ ಮಳೆ ಇನ್ನೂ ಜಾಸ್ತಿಯಾದರೆ ಬಂಡೀಪುರ ಅರಣ್ಯ ವ್ಯಾಪ್ತಿಯ ಮುತ್ತಂಗ ಬಳಿ ಹೆದ್ದಾರಿ ಮೇಲೆಯೇ ಅಪಾರ ಪ್ರಮಾಣದ ನೀರು ಹರಿಯಲಿದೆ.
ಈಗಾಗಲೇ ರಸ್ತೆ ಸಂಪರ್ಕ ಕಡಿತವಾಗಿದ್ದು, ವಾಹನ ಸವಾರರಿಗೆ ಬದಲಿ ರಸ್ತೆ ವ್ಯವಸ್ಥೆ ಮಾಡಲಾಗಿದೆ. ಮಳೆ ಮುಂದುವರಿದರೆ ಇನ್ನೂ ಹೆಚ್ಚಿನ ಅನಾಹುತ ಸಂಭವಿಸಲಿದೆ ಎನ್ನಲಾಗಿದೆ.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…