ಚಾಮರಾಜನಗರ

ನ.1ರಂದು ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವ

ಚಾಮರಾಜನಗರ : ಜಿಲ್ಲಾಡಳಿತ ಹಾಗೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಹಾಗೂ ಅಕ್ಟೋಬರ್ 28ರಂದು ರಾಜ್ಯೋತ್ಸವದ ಅಂಗವಾಗಿ ಕೋಟಿಕಂಠಗಾಯನ ವಿಶಿಷ್ಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲುತೀರ್ಮಾನಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡರಾಜ್ಯೋತ್ಸವ ಆಚರಣೆ ಕಾರ್ಯಕ್ರಮಕುರಿತ ಪೂರ್ವಭಾವಿ ಸಭೆಯಲ್ಲಿ ಈ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಯಿತು.
ನವೆಂಬರ್ 1ರಂದು ಕರ್ನಾಟಕರಾಜ್ಯೋತ್ಸವ ಹಾಗೂ ಇನ್ನೂ ಹೆಚ್ಚಿನ ಸಂಭ್ರಮಉತ್ಸಾಹದಿಂದ ರಾಜ್ಯೋತ್ಸವವನ್ನುಆಚರಿಸುವ ಹಿನ್ನೆಲೆಯಲ್ಲಿ ನಾಡು, ನುಡಿ, ಪರಂಪರೆ ಬಗ್ಗೆ ಅಭಿಮಾನ, ಹೆಮ್ಮೆ ಮೂಡಿಸುವಕನ್ನಡಗೀತ ಕವನಗಳ ಗಾಯನವನ್ನು ಕೋಟಿಕಂಠ ಗಾಯನ ಕಾರ್ಯಕ್ರಮದಡಿ ರಾಜ್ಯಾದ್ಯಂತ ಅಕ್ಟೋಬರ್ 28ರಂದು ಬೆಳಿಗ್ಗೆ 11 ಗಂಟೆಗೆಆಯೋಜಿಸಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲೂ ಅಕ್ಟೋಬರ್ 28ರಂದು ಗ್ರಾಮ ಗ್ರಾಮಗಳಲ್ಲಿ ಸಂಘ-ಸಂಸ್ಥೆ, ಶಾಲಾ-ಕಾಲೇಜುಗಳು, ವಿಶ್ವವಿದ್ಯಾನಿಲಯಗಳು, ಸರ್ಕಾರಿ ಕಚೇರಿಗಳು ಸೇರಿದಂತೆ ವಿವಿಧೆಡೆ ಹೆಚ್ಚು ಜನ ಏಕ ಕಂಠದಲ್ಲಿಆಯ್ದ 6 ಕನ್ನಡ ಹಾಡುಗಳ ಗಾಯನ ನಡೆಸಲುಯೋಜಿಸಲಾಗಿದೆ. ಜಿಲ್ಲಾಕೇಂದ್ರದಲ್ಲಿಯೂ ಹೆಚ್ಚು ಜನರನ್ನು ಒಳಗೊಂಡಂತೆ ಈ ಸಮೂಹ ಗಾಯನಕಾರ್ಯಕ್ರಮಆಯೋಜಿಸಲಾಗುತ್ತಿದೆಎಂದು ಸಭೆಯಆರಂಭದಲ್ಲಿ ವಿವರಿಸಲಾಯಿತು.
ಸಭೆಯಲ್ಲಿಕನ್ನಡ ಪರ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ ಜಿಲ್ಲಾಡಳಿತದಿಂದ ಆಚರಿಸಲಾಗುವಎಲ್ಲಾ ಕಾರ್ಯಕ್ರಮಗಳಿಗೆ ಸಂಘಟನೆಗಳು ಈ ಹಿಂದಿನಿಂದಲೂ ಸಹಕಾರ ನೀಡುತ್ತಾ ಬಂದಿವೆ. ಆದರೆ ಕಳೆದ ಚಾಮರಾಜನಗರದಸರಾ ಮಹೋತ್ಸವ ಸಂದರ್ಭದಲ್ಲಿ ಸಂಘಟನೆಗಳನ್ನು ಕಡೆಗಣಿಸಲಾಗಿದೆ. ವಿಳಂಬವಾಗಿ ದಸರಾ ಸಮಿತಿಗಳಿಗೆ ಸಂಘಟನೆಯ ಪ್ರತಿನಿಧಿಗಳನ್ನು ಸೇರ್ಪಡೆ ಮಾಡಲಾಯಿತು. ಇನ್ನು ಮುಂದೆಇಂತಹ ನಿರ್ಲಕ್ಷ್ಯಧೋರಣೆ ಸಹಿಸುವುದಿಲ್ಲ ಎಂದುಅಸಮಧಾನ ವ್ಯಕ್ತಪಡಿಸಿದರು.

andolana

Recent Posts

ಮೈಸೂರು ಮೃಗಾಲಯದಲ್ಲಿ ‘ಕೂಲ್ ಕೂಲ್’ ವಾತಾವರಣ: ಪ್ರಾಣಿಗಳ ರಕ್ಷಣೆಗೆ ವಿಶೇಷ ಕ್ರಮ

ಮೈಸೂರು: ​ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…

38 mins ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ದುಬಾರಿಯಾಗಲಿದೆ ಡ್ರೈಫ್ರೂಟ್ಸ್‌

ಬೆಂಗಳೂರು: ಇರಾನ್-ಇಸ್ರೇಲ್‌ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್‌ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್‌…

44 mins ago

ಬರಿಗೈಯಲ್ಲಿ ಚರಂಡಿ ಸ್ವಚ್ಛ ಮಾಡಿದ ಪೌರಕಾರ್ಮಿಕರು

ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…

52 mins ago

ಮಾರ್ಚ್.‌10ರ ಬಳಿಕ ಐದು ರಾಜ್ಯಗಳ ಚುನಾವಣಾ ವೇಳಾಪಟ್ಟಿ ಪ್ರಕಟ.?

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ನಾಲ್ಕು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಲು…

57 mins ago

ಓದುಗರ ಪತ್ರ: ಲಂಚದ ಹಾವಳಿಗೆ ಕಡಿವಾಣ ಹಾಕಿ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಲಂಚದ ಹಾವಳಿ ಮಿತಿ ಮೀರಿದೆ. ಉಳ್ಳವರು ಲಂಚ ಕೊಟ್ಟು ತಮ್ಮ ಕೆಲಸವನ್ನು ಮಾಡಿಸಿಕೊಳ್ಳುತ್ತಾರೆ. ಆದರೆ…

60 mins ago

ಓದುಗರ ಪತ್ರ: ಗ್ಯಾರಂಟಿ ಯೋಜನೆಗೆ ಪರಿಶಿಷ್ಟರ ಮೀಸಲು ಹಣ ಬಳಸಬೇಡಿ

ಮಾರ್ಚ್ ೬ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೦೨೬-೨೭ ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ. ಈ ಬಾರಿಯ ಆಯವ್ಯದಲ್ಲಿ ಪರಿಶಿಷ್ಟ ಜಾತಿ…

1 hour ago