ಚಾಮರಾಜನಗರ

ನ.1ರಂದು ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವ

ಚಾಮರಾಜನಗರ : ಜಿಲ್ಲಾಡಳಿತ ಹಾಗೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಹಾಗೂ ಅಕ್ಟೋಬರ್ 28ರಂದು ರಾಜ್ಯೋತ್ಸವದ ಅಂಗವಾಗಿ ಕೋಟಿಕಂಠಗಾಯನ ವಿಶಿಷ್ಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲುತೀರ್ಮಾನಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡರಾಜ್ಯೋತ್ಸವ ಆಚರಣೆ ಕಾರ್ಯಕ್ರಮಕುರಿತ ಪೂರ್ವಭಾವಿ ಸಭೆಯಲ್ಲಿ ಈ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಯಿತು.
ನವೆಂಬರ್ 1ರಂದು ಕರ್ನಾಟಕರಾಜ್ಯೋತ್ಸವ ಹಾಗೂ ಇನ್ನೂ ಹೆಚ್ಚಿನ ಸಂಭ್ರಮಉತ್ಸಾಹದಿಂದ ರಾಜ್ಯೋತ್ಸವವನ್ನುಆಚರಿಸುವ ಹಿನ್ನೆಲೆಯಲ್ಲಿ ನಾಡು, ನುಡಿ, ಪರಂಪರೆ ಬಗ್ಗೆ ಅಭಿಮಾನ, ಹೆಮ್ಮೆ ಮೂಡಿಸುವಕನ್ನಡಗೀತ ಕವನಗಳ ಗಾಯನವನ್ನು ಕೋಟಿಕಂಠ ಗಾಯನ ಕಾರ್ಯಕ್ರಮದಡಿ ರಾಜ್ಯಾದ್ಯಂತ ಅಕ್ಟೋಬರ್ 28ರಂದು ಬೆಳಿಗ್ಗೆ 11 ಗಂಟೆಗೆಆಯೋಜಿಸಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲೂ ಅಕ್ಟೋಬರ್ 28ರಂದು ಗ್ರಾಮ ಗ್ರಾಮಗಳಲ್ಲಿ ಸಂಘ-ಸಂಸ್ಥೆ, ಶಾಲಾ-ಕಾಲೇಜುಗಳು, ವಿಶ್ವವಿದ್ಯಾನಿಲಯಗಳು, ಸರ್ಕಾರಿ ಕಚೇರಿಗಳು ಸೇರಿದಂತೆ ವಿವಿಧೆಡೆ ಹೆಚ್ಚು ಜನ ಏಕ ಕಂಠದಲ್ಲಿಆಯ್ದ 6 ಕನ್ನಡ ಹಾಡುಗಳ ಗಾಯನ ನಡೆಸಲುಯೋಜಿಸಲಾಗಿದೆ. ಜಿಲ್ಲಾಕೇಂದ್ರದಲ್ಲಿಯೂ ಹೆಚ್ಚು ಜನರನ್ನು ಒಳಗೊಂಡಂತೆ ಈ ಸಮೂಹ ಗಾಯನಕಾರ್ಯಕ್ರಮಆಯೋಜಿಸಲಾಗುತ್ತಿದೆಎಂದು ಸಭೆಯಆರಂಭದಲ್ಲಿ ವಿವರಿಸಲಾಯಿತು.
ಸಭೆಯಲ್ಲಿಕನ್ನಡ ಪರ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ ಜಿಲ್ಲಾಡಳಿತದಿಂದ ಆಚರಿಸಲಾಗುವಎಲ್ಲಾ ಕಾರ್ಯಕ್ರಮಗಳಿಗೆ ಸಂಘಟನೆಗಳು ಈ ಹಿಂದಿನಿಂದಲೂ ಸಹಕಾರ ನೀಡುತ್ತಾ ಬಂದಿವೆ. ಆದರೆ ಕಳೆದ ಚಾಮರಾಜನಗರದಸರಾ ಮಹೋತ್ಸವ ಸಂದರ್ಭದಲ್ಲಿ ಸಂಘಟನೆಗಳನ್ನು ಕಡೆಗಣಿಸಲಾಗಿದೆ. ವಿಳಂಬವಾಗಿ ದಸರಾ ಸಮಿತಿಗಳಿಗೆ ಸಂಘಟನೆಯ ಪ್ರತಿನಿಧಿಗಳನ್ನು ಸೇರ್ಪಡೆ ಮಾಡಲಾಯಿತು. ಇನ್ನು ಮುಂದೆಇಂತಹ ನಿರ್ಲಕ್ಷ್ಯಧೋರಣೆ ಸಹಿಸುವುದಿಲ್ಲ ಎಂದುಅಸಮಧಾನ ವ್ಯಕ್ತಪಡಿಸಿದರು.

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

8 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

9 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

10 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

11 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

15 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

15 hours ago