ಚಾಮರಾಜನಗರ

ನ.1ರಂದು ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವ

ಚಾಮರಾಜನಗರ : ಜಿಲ್ಲಾಡಳಿತ ಹಾಗೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಹಾಗೂ ಅಕ್ಟೋಬರ್ 28ರಂದು ರಾಜ್ಯೋತ್ಸವದ ಅಂಗವಾಗಿ ಕೋಟಿಕಂಠಗಾಯನ ವಿಶಿಷ್ಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲುತೀರ್ಮಾನಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡರಾಜ್ಯೋತ್ಸವ ಆಚರಣೆ ಕಾರ್ಯಕ್ರಮಕುರಿತ ಪೂರ್ವಭಾವಿ ಸಭೆಯಲ್ಲಿ ಈ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಯಿತು.
ನವೆಂಬರ್ 1ರಂದು ಕರ್ನಾಟಕರಾಜ್ಯೋತ್ಸವ ಹಾಗೂ ಇನ್ನೂ ಹೆಚ್ಚಿನ ಸಂಭ್ರಮಉತ್ಸಾಹದಿಂದ ರಾಜ್ಯೋತ್ಸವವನ್ನುಆಚರಿಸುವ ಹಿನ್ನೆಲೆಯಲ್ಲಿ ನಾಡು, ನುಡಿ, ಪರಂಪರೆ ಬಗ್ಗೆ ಅಭಿಮಾನ, ಹೆಮ್ಮೆ ಮೂಡಿಸುವಕನ್ನಡಗೀತ ಕವನಗಳ ಗಾಯನವನ್ನು ಕೋಟಿಕಂಠ ಗಾಯನ ಕಾರ್ಯಕ್ರಮದಡಿ ರಾಜ್ಯಾದ್ಯಂತ ಅಕ್ಟೋಬರ್ 28ರಂದು ಬೆಳಿಗ್ಗೆ 11 ಗಂಟೆಗೆಆಯೋಜಿಸಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲೂ ಅಕ್ಟೋಬರ್ 28ರಂದು ಗ್ರಾಮ ಗ್ರಾಮಗಳಲ್ಲಿ ಸಂಘ-ಸಂಸ್ಥೆ, ಶಾಲಾ-ಕಾಲೇಜುಗಳು, ವಿಶ್ವವಿದ್ಯಾನಿಲಯಗಳು, ಸರ್ಕಾರಿ ಕಚೇರಿಗಳು ಸೇರಿದಂತೆ ವಿವಿಧೆಡೆ ಹೆಚ್ಚು ಜನ ಏಕ ಕಂಠದಲ್ಲಿಆಯ್ದ 6 ಕನ್ನಡ ಹಾಡುಗಳ ಗಾಯನ ನಡೆಸಲುಯೋಜಿಸಲಾಗಿದೆ. ಜಿಲ್ಲಾಕೇಂದ್ರದಲ್ಲಿಯೂ ಹೆಚ್ಚು ಜನರನ್ನು ಒಳಗೊಂಡಂತೆ ಈ ಸಮೂಹ ಗಾಯನಕಾರ್ಯಕ್ರಮಆಯೋಜಿಸಲಾಗುತ್ತಿದೆಎಂದು ಸಭೆಯಆರಂಭದಲ್ಲಿ ವಿವರಿಸಲಾಯಿತು.
ಸಭೆಯಲ್ಲಿಕನ್ನಡ ಪರ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ ಜಿಲ್ಲಾಡಳಿತದಿಂದ ಆಚರಿಸಲಾಗುವಎಲ್ಲಾ ಕಾರ್ಯಕ್ರಮಗಳಿಗೆ ಸಂಘಟನೆಗಳು ಈ ಹಿಂದಿನಿಂದಲೂ ಸಹಕಾರ ನೀಡುತ್ತಾ ಬಂದಿವೆ. ಆದರೆ ಕಳೆದ ಚಾಮರಾಜನಗರದಸರಾ ಮಹೋತ್ಸವ ಸಂದರ್ಭದಲ್ಲಿ ಸಂಘಟನೆಗಳನ್ನು ಕಡೆಗಣಿಸಲಾಗಿದೆ. ವಿಳಂಬವಾಗಿ ದಸರಾ ಸಮಿತಿಗಳಿಗೆ ಸಂಘಟನೆಯ ಪ್ರತಿನಿಧಿಗಳನ್ನು ಸೇರ್ಪಡೆ ಮಾಡಲಾಯಿತು. ಇನ್ನು ಮುಂದೆಇಂತಹ ನಿರ್ಲಕ್ಷ್ಯಧೋರಣೆ ಸಹಿಸುವುದಿಲ್ಲ ಎಂದುಅಸಮಧಾನ ವ್ಯಕ್ತಪಡಿಸಿದರು.

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

9 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

9 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago