ಹನೂರು : ತಾಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸ್ ನಿಲ್ದಾಣದ ಸರ್ಕಲ್ ನಲ್ಲಿ ಅಳವಡಿಸಿರುವ ಹೈ ಮಾಸ್ಕ್ ದೀಪ ದುರಸ್ತಿಯಾಗಿ ತಿಂಗಳು ಕಳೆದರೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲೆ ಮಹದೇಶ್ವರ ಬೆಟ್ಟ ಮುಖ್ಯ ರಸ್ತೆಯ ಸರ್ಕಲ್ ನಲ್ಲಿ ಅಳವಡಿಸಿರುವ ಹೈ ಮಾಸ್ಕ್ ದೀಪಕೆಟ್ಟು ಹಲವು ದಿನಗಳ ಕಳೆದಿದೆ. ಆದರೆ ದುರಸ್ತಿ ಮಾಡುವ ಬಗ್ಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದರಿಂದ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ತೀವ್ರ ತೊಂದರೆಯಾಗಿದೆ.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಹನೂರು, ಎಲ್ಲೇಮಾಳ ಮಾರ್ಗವಾಗಿ ಹಾಗೂ ಅಜ್ಜೀಪುರ ರಾಮಪುರ ಮಾರ್ಗವಾಗಿ ತೆರಳಿ ಕೌದಳ್ಳಿ ಗ್ರಾಮದ ಸರ್ಕಲ್ ನಲ್ಲಿ ಸೇರಿ ನಂತರ ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನಗಳು ಸರಕು ಸಾಗಣೆ ವಾಹನ ಬಸ್, ಸೇರಿದಂತೆ ಇನ್ನಿತರ ವಾಹನಗಳ ಮೂಲಕ ತೆರಳುತ್ತಾರೆ.
ಆದರೆ ಕೌದಳ್ಳಿ ಗ್ರಾಮ ಪಂಚಾಯಿತಿಯ ಕೇಂದ್ರ ಸ್ಥಾನದಲ್ಲಿಯೇ ಹೈ ಮಾಸ್ ದೀಪವನ್ನು ದುರಸ್ತಿ ಮಾಡದಿದ್ದ ಮೇಲೆ ಇನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಗಳ ಗ್ರಾಮದ ವಿದ್ಯುತ್ ದೀಪಗಳು ಕೆಟ್ಟು ನಿಂತರೆ ಯಾವ ರೀತಿ ಕ್ರಮವಹಿಸುತ್ತಾರೆ ಎಂಬುದಕ್ಕೆ ಇದೆ ಉದಾಹರಣೆಯನ್ನು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.
ಮಹಾನವಮಿ ಆಯುಧ ಪೂಜೆ ವಿಜಯದಶಮಿ ದೀಪಾವಳಿ ಕಾರ್ತಿಕ ಮಾಸ ಜಾತ್ರಾ ಮಹೋತ್ಸವಗಳು ಆಗಮಿಸುವ ಹಿನ್ನೆಲೆ ಶ್ರೀ ಕ್ಷೇತ್ರಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸುತ್ತಾರೆ ಇನ್ನು ಮುಂದಾದರು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸರ್ಕಲ್ ನಲ್ಲಿರುವ ಹೈ ಮಾಸ್ಕ್ ದೀಪವನ್ನು ದುರಸ್ತಿ ಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಿದೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…