ಹನೂರು: ತಾಲ್ಲೂಕಿನ ಕೌದಳ್ಳಿ ಗ್ರಾಮ ಕೌದಳ್ಳಿ ಗ್ರಾಮ ಪಂಚಾಯತಿ ಸೇರಿದ್ದು, ಕರ್ನಾಟಕ ರಾಜ್ಯದ ಎರಡನೇ ಅತಿ ಹೆಚ್ಚು ಲಾಭ ಗಳಿಸುವ ಮೇಲೆ ಮಹದೇಶ್ವರ ಬೆಟ್ಟದ ಮಾದಪ್ಪನ ದೇವಸ್ಥಾನಕ್ಕೆ ಹಾದು ಹೋಗುವ ಮುಖ್ಯ ರಸ್ತೆಯಲ್ಲಿ ಇದೆ. ಮತ್ತು ತಮಿಳುನಾಡು ಕರ್ನಾಟಕ ಸಂಪರ್ಕಿಸುವ ಹೆದ್ದಾರಿ. ಸ್ವಾತಂತ್ರ ಪೂರ್ವದಲ್ಲಿದ್ದ ಗ್ರಾಮದ ರೀತಿಯಲ್ಲಿಯೇ ಇರುವ ಈ ಗ್ರಾಮ ಹೆಚ್ಚು ಮುಸ್ಲಿಂ ಮತ್ತು ನಾಯಕ ಜನಾಂಗ ಇರುವ ದೊಡ್ಡ ಗ್ರಾಮ. ಮೊದಲಿಂದಲೂ ಕೌದಳ್ಳಿ ಗ್ರಾಮ ಅನೈರ್ಮಲ್ಯ ಎದ್ದು ಕಾಣುತ್ತಿದೆ.ಯಾವ ಆಡಳಿತವು ಮಂಡಳಿ ಗ್ರಾಮ ಪಂಚಾಯತಿಯಲ್ಲಿ ಅಸ್ತಿತ್ವಕ್ಕೆ ಬಂದರು ಶಾಶ್ವತ ಪರಿಹಾರ ಕಾಣಲೇ ಇಲ್ಲ. ಕಿರಿದಾದ ರಸ್ತೆ, ಹೂಳು ತುಂಬಿರುವ ಚರಂಡಿ, ಕಸದ ರಾಶಿ ರಾಶಿ ಗುಡ್ಡೆಗಳು ಸಾಮಾನ್ಯವಾಗಿದೆ.
ಮೂಲಭೂತ ಸೌಕರ್ಯ ವಂಚಿತ ಗ್ರಾಮಸ್ಥರಆಕ್ರೋಶ: ಕೌದಳ್ಳಿಯ ನಾಯಕ ಸಮುದಾಯದ ಕೆಲವು ಬೀದಿ ಬೀದಿಗಳಲ್ಲಿ ಸರಿಯಾದ ಸಿ ಸಿ ರಸ್ತೆ ಗಳು ಇಲ್ಲ ಮತ್ತೆ ಚರಂಡಿ ಗಳು ಇಲ್ಲ ಇದರಿಂದ ಕೊಳಚೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ಕೆಲವು ಕಡೆ ಮಡುಗಟ್ಟಿ ನಿಂತಿದೆ.ಇದರಿಂದ ಅನೈರ್ಮಲ್ಯ ಉಂಟಾಗುತ್ತದೆ ಜತೆಗೆ ಸಮರ್ಪಕವಾಗಿ ಕಸ ವಿಲೇವಾರಿ ಮಾಡದ ಪರಿಣಾಮ ಎಲ್ಲೆಲೂ ಕಸದ ರಾಶಿ ಉಂಟಾಗಿದೆ ಇದರಿಂದ ಕೌದಳ್ಳಿ ಗ್ರಾಮವು ಕಸದ ಹಳ್ಳಿಯಾಗಿ ಮಾರ್ಪಟ್ಟಿದೆ
ಇಲ್ಲಿನ ಜನರಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಆವರಿಸಿದ್ದು ಮತ್ತೆ ಸೊಳ್ಳೆಗಳ ಕಾಟ ವಿಪರೀತ ಮಳೆ ಬಂತೆಂದರೆ ಕಸದ ರಾಶಿ ಕೊಳೆತ ತ್ಯಾಜ್ಯವಾಗಿ ಮಾರ್ಪಟ್ಟು ದುರ್ವಾಸನೆ ಬಿರುತ್ತಿದೆ ಇದರಿಂದ ಜನರು ಮೂಗು ಮುಚ್ಚಿಕೊಂಡು ತಿರುಗಾಡುವ ಪರಿಸ್ಥಿತಿ ಎದುರಾಗುತ್ತದೆ.
ಮಧ್ಯ ಪ್ರಾಚ್ಯದಲ್ಲಿ ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕದಿಂದ ನಡೆಯುತ್ತಿರುವ ದಾಳಿ ಹಾಗೂ ಯುಎಇ, ಬಹರೇನ್, ಕುವೈತ್ ಮೊದಲಾದ ರಾಷ್ಟ್ರಗಳಲ್ಲಿರುವ…
೩೦ ವರ್ಷ ಪ್ರಾಯದ ಸಫುರಾ ಖಾನ್ರ ತಂದೆ ತಾಯಿ ಚೆನ್ನೆ ಯಿಂದ ಕರ್ನಾಟಕಕ್ಕೆ ವಲಸೆ ಬಂದಾಗ ಆಕೆ ಇನ್ನೂ ಮಗುವಾಗಿದ್ದರು.…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಗುಂಡ್ಲುಪೇಟೆಯಿಂದ ನಂಜನಗೂಡು ತನಕ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ರಸ್ತೆಯ ಎರಡೂ ಬದಿಗಳನ್ನು ಅಗೆದು…
ಮಾಮರಶಿ ರೇಷ್ಮೆ ಕೃಷಿಯಿಂದಲೇ ಉದ್ಯಮ ಕಟ್ಟಿದ ರೇಷ್ಮೆ ತ್ಯಾಗರಾಜು ೨೦೦ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಿದ ರೈತನ ಮಗ ಮಳವಳ್ಳಿ:…
ಕೆ.ಬಿ.ರಮೇಶನಾಯಕ ಮೈಸೂರು: ದಕ್ಷಿಣ ಭಾರತದಲ್ಲೇ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಶ್ರೀ ಚಾಮರಾಜೇಂದ್ರ ಮೃಗಾಲಯವು ಕೋವಿಡ್ ಸಮಯದಲ್ಲಿ ಆದಾಯ ಕುಸಿತದಿಂದ ಕಂಗೆಟ್ಟರೂ…
ಶೇಷಾದ್ರಿ ಗಂಜೂರು ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ನಾಲ್ಕನೇ ದಿನ ಪೂರ್ಣಗೊಳಿಸಿದೆ. ಯುದ್ಧದ ಬೀಸಿಗೆ ಸಿಲುಕಿ ಮುಖ್ಯವಾಗಿ ೧೨…