ಚಾಮರಾಜನಗರ

ಕಸದ ಹಳ್ಳಿಯಾದ ಕೌದಳ್ಳಿ ಗ್ರಾಮ

ಹನೂರು: ತಾಲ್ಲೂಕಿನ ಕೌದಳ್ಳಿ ಗ್ರಾಮ ಕೌದಳ್ಳಿ ಗ್ರಾಮ ಪಂಚಾಯತಿ ಸೇರಿದ್ದು, ಕರ್ನಾಟಕ ರಾಜ್ಯದ ಎರಡನೇ ಅತಿ ಹೆಚ್ಚು ಲಾಭ ಗಳಿಸುವ ಮೇಲೆ ಮಹದೇಶ್ವರ ಬೆಟ್ಟದ ಮಾದಪ್ಪನ ದೇವಸ್ಥಾನಕ್ಕೆ ಹಾದು ಹೋಗುವ ಮುಖ್ಯ ರಸ್ತೆಯಲ್ಲಿ ಇದೆ. ಮತ್ತು ತಮಿಳುನಾಡು ಕರ್ನಾಟಕ ಸಂಪರ್ಕಿಸುವ ಹೆದ್ದಾರಿ. ಸ್ವಾತಂತ್ರ ಪೂರ್ವದಲ್ಲಿದ್ದ ಗ್ರಾಮದ ರೀತಿಯಲ್ಲಿಯೇ ಇರುವ ಈ ಗ್ರಾಮ ಹೆಚ್ಚು ಮುಸ್ಲಿಂ ಮತ್ತು ನಾಯಕ ಜನಾಂಗ ಇರುವ ದೊಡ್ಡ ಗ್ರಾಮ. ಮೊದಲಿಂದಲೂ ಕೌದಳ್ಳಿ ಗ್ರಾಮ ಅನೈರ್ಮಲ್ಯ ಎದ್ದು ಕಾಣುತ್ತಿದೆ.ಯಾವ ಆಡಳಿತವು ಮಂಡಳಿ ಗ್ರಾಮ ಪಂಚಾಯತಿಯಲ್ಲಿ ಅಸ್ತಿತ್ವಕ್ಕೆ ಬಂದರು ಶಾಶ್ವತ ಪರಿಹಾರ ಕಾಣಲೇ ಇಲ್ಲ. ಕಿರಿದಾದ ರಸ್ತೆ, ಹೂಳು ತುಂಬಿರುವ ಚರಂಡಿ, ಕಸದ ರಾಶಿ ರಾಶಿ ಗುಡ್ಡೆಗಳು ಸಾಮಾನ್ಯವಾಗಿದೆ.

ಮೂಲಭೂತ ಸೌಕರ್ಯ ವಂಚಿತ  ಗ್ರಾಮಸ್ಥರಆಕ್ರೋಶ: ಕೌದಳ್ಳಿಯ ನಾಯಕ ಸಮುದಾಯದ ಕೆಲವು ಬೀದಿ ಬೀದಿಗಳಲ್ಲಿ ಸರಿಯಾದ ಸಿ ಸಿ ರಸ್ತೆ ಗಳು ಇಲ್ಲ ಮತ್ತೆ ಚರಂಡಿ ಗಳು ಇಲ್ಲ ಇದರಿಂದ ಕೊಳಚೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ಕೆಲವು ಕಡೆ ಮಡುಗಟ್ಟಿ ನಿಂತಿದೆ.ಇದರಿಂದ ಅನೈರ್ಮಲ್ಯ ಉಂಟಾಗುತ್ತದೆ ಜತೆಗೆ ಸಮರ್ಪಕವಾಗಿ ಕಸ ವಿಲೇವಾರಿ ಮಾಡದ ಪರಿಣಾಮ ಎಲ್ಲೆಲೂ ಕಸದ ರಾಶಿ ಉಂಟಾಗಿದೆ ಇದರಿಂದ ಕೌದಳ್ಳಿ ಗ್ರಾಮವು ಕಸದ ಹಳ್ಳಿಯಾಗಿ ಮಾರ್ಪಟ್ಟಿದೆ

ಇಲ್ಲಿನ ಜನರಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಆವರಿಸಿದ್ದು ಮತ್ತೆ ಸೊಳ್ಳೆಗಳ ಕಾಟ ವಿಪರೀತ ಮಳೆ ಬಂತೆಂದರೆ ಕಸದ ರಾಶಿ ಕೊಳೆತ ತ್ಯಾಜ್ಯವಾಗಿ ಮಾರ್ಪಟ್ಟು ದುರ್ವಾಸನೆ ಬಿರುತ್ತಿದೆ ಇದರಿಂದ ಜನರು ಮೂಗು ಮುಚ್ಚಿಕೊಂಡು ತಿರುಗಾಡುವ ಪರಿಸ್ಥಿತಿ ಎದುರಾಗುತ್ತದೆ.

 

andolana

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

23 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

28 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

37 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago