ಚಾಮರಾಜನಗರ

ಕಿಚ್ಚುಗುತ್ತು ಮಾರಮ್ಮ ದೇವಸ್ಥಾನ ವಿಷ ಪ್ರಸಾದ ಪ್ರಕರಣ : ಆರೋಪಿ ಮಹದೇವಸ್ವಾಮಿ ಜಾಮೀನಿಗೆ ಖಂಡನೆ

ಹನೂರು : ತಾಲ್ಲೂಕಿನ ಸುಳ್ವಾಡಿ ಕಿಚ್ಚುಗುತ್ತು ಮಾರಮ್ಮ ದೇವಸ್ಥಾನದ ಪ್ರಸಾದಕ್ಕೆ ವಿಷ ಬೆರೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಇಮ್ಮಡಿ ಮಹಾದೇವಸ್ವಾಮಿಗೆ ನೀಡಿರುವ ಜಾಮೀನು ರದ್ದುಪಡಿಸುವಂತೆ ಆಗ್ರಹಿಸಿ ವಿಷಪ್ರಸಾದ ಬಾಧಿತರು ದೇವಸ್ಥಾನದ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಸುಳ್ವಾಡಿ ಮಾರಮ್ಮ ದೇವಸ್ಥಾನದ ಮೇಲ್ಭಾಗದಲ್ಲಿ ಹೊಸ ಗೋಪುರ ನಿರ್ಮಾಣ ಮಾಡುವ ಸಂದರ್ಭದಲ್ಲಿ ತಯಾರಿಸಿದ್ದ ಪ್ರಸಾದಕ್ಕೆ ಇಮ್ಮಡಿ ಮಹದೇವಸ್ವಾಮಿ ಹಾಗೂ ಈತನ ಸಹಚರರು ವಿಷ ಬೆರೆಸಿದ್ದರು. ಬಿದರಹಳ್ಳಿ, ದೊಡ್ಡಾಣೆ, ಎಂ.ಜಿ.ದೊಡ್ಡಿ, ಸುಳ್ಳಾಡಿ, ಸುತ್ತಮುತ್ತಲಿನ ಭಕ್ತಾದಿಗಳು ಹಾಗೂ ಓಂಶಕ್ತಿ ಮಾಲಾಧಾರಿಗಳು ಪ್ರಸಾದ ಸ್ವೀಕರಿಸಿ 17 ಜನರು ಮೃತಪಟ್ಟಿದ್ದಲ್ಲದೆ, 150ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ನಾಲ್ವರು ಆರೋಪಿಗಳು ಕಳೆದ 6 ವರ್ಷ 10 ತಿಂಗಳುಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಹಲವು ಬಾರಿ ಆರೋಪಿಗಳು ಹೈಕೋರ್ಟ್, ಸುಪ್ರೀಂ ಕೋರ್ಟಿನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿ ವಜಾ ಮಾಡಲಾಗಿತ್ತು.
ನವೆಂಬರ್ 12ರ ಮಂಗಳವಾರ ಸುಳ್ವಾಡಿ ಕಿಚ್ಚುಗುತ್ತು ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಹೈಕೋರ್ಟ್ ವೈದ್ಯಕೀಯ ಚಿಕಿತ್ಸೆಗೆಂದು ಒಂದು ವರ್ಷದ ಅವಧಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಇದನ್ನು ಖಂಡಿಸಿ ವಿಷ ಪ್ರಸಾದ ಬಾಧಿತರು ಪ್ರತಿಭಟನೆ ನಡೆಸಿದರು.

ಇದನ್ನು ಓದಿ: ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣ: ಎ.1 ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಷರತ್ತುಬದ್ಧ ಜಾಮೀನು

ಇಮ್ಮಡಿ ಮಹಾದೇವಸ್ವಾಮಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆದರೆ, ಯಾವೆಲ್ಲ ಷರತ್ತುಗಳನ್ನು ಹೈಕೋರ್ಟ್ ವಿಧಿಸಿದೆ ಎಂಬುದು ಗೊತ್ತಿಲ್ಲ. ಸುಳ್ಳಾಡಿ ವಿಷಪ್ರಸಾದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹಾದೇವಸ್ವಾಮಿಗೆ ನೀಡಲಾಗಿರುವ ಜಾಮೀನು ತಡೆಗಾಗಿ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು ಎಂದು ಪ್ರಕರಣದ ಸಂತ್ರಸ್ತರು ಒತ್ತಾಯಿಸಿದರು. ಜಾಮೀನು ಮಂಜೂರು ಮಾಡಿರುವುದು ಸಾಕ್ಷಿದಾರರ ಮೇಲೆ ಪರಿಣಾಮ ಬೀರುತ್ತದೆ ಹಾಗೂ ಸಾಕ್ಷ್ಯಗಳು ನಾಶಗೊಳ್ಳುವ ಭೀತಿ ಇದೆ ಎಂದು ಅವರು ಆತಂಕ ವ್ಯಕ್ತ ಪಡಿಸಿದರು.

ಪ್ರಕರಣದಲ್ಲಿ 17 ಭಕ್ತರು ಸಾವಿಗೀಡಾಗಿದ್ದು, 150ಕ್ಕೂ ಹೆಚ್ಚು ಜನರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಈಗಲೂ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಸಂತ್ರಸ್ತರಿಗೆ ಈವರೆಗೂ ಸರ್ಕಾರ ಸೂಕ್ತ ಚಿಕಿತ್ಸೆ ಕೊಡಿಸುವುದಾಗಲಿ, ಪರಿಹಾರ ನೀಡುವುದಾಗಲಿ ಮಾಡಿಲ್ಲ ಎಂದು ಸಂತ್ರಸ್ತರು ಆರೋಪಿಸಿದರು.

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

8 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

8 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

9 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

9 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

9 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

10 hours ago