ಚಾಮರಾಜನಗರ

ಕಿಚ್ಚುಗುತ್ತು ಮಾರಮ್ಮ ದೇವಸ್ಥಾನ ವಿಷ ಪ್ರಸಾದ ಪ್ರಕರಣ : ಆರೋಪಿ ಮಹದೇವಸ್ವಾಮಿ ಜಾಮೀನಿಗೆ ಖಂಡನೆ

ಹನೂರು : ತಾಲ್ಲೂಕಿನ ಸುಳ್ವಾಡಿ ಕಿಚ್ಚುಗುತ್ತು ಮಾರಮ್ಮ ದೇವಸ್ಥಾನದ ಪ್ರಸಾದಕ್ಕೆ ವಿಷ ಬೆರೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಇಮ್ಮಡಿ ಮಹಾದೇವಸ್ವಾಮಿಗೆ ನೀಡಿರುವ ಜಾಮೀನು ರದ್ದುಪಡಿಸುವಂತೆ ಆಗ್ರಹಿಸಿ ವಿಷಪ್ರಸಾದ ಬಾಧಿತರು ದೇವಸ್ಥಾನದ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಸುಳ್ವಾಡಿ ಮಾರಮ್ಮ ದೇವಸ್ಥಾನದ ಮೇಲ್ಭಾಗದಲ್ಲಿ ಹೊಸ ಗೋಪುರ ನಿರ್ಮಾಣ ಮಾಡುವ ಸಂದರ್ಭದಲ್ಲಿ ತಯಾರಿಸಿದ್ದ ಪ್ರಸಾದಕ್ಕೆ ಇಮ್ಮಡಿ ಮಹದೇವಸ್ವಾಮಿ ಹಾಗೂ ಈತನ ಸಹಚರರು ವಿಷ ಬೆರೆಸಿದ್ದರು. ಬಿದರಹಳ್ಳಿ, ದೊಡ್ಡಾಣೆ, ಎಂ.ಜಿ.ದೊಡ್ಡಿ, ಸುಳ್ಳಾಡಿ, ಸುತ್ತಮುತ್ತಲಿನ ಭಕ್ತಾದಿಗಳು ಹಾಗೂ ಓಂಶಕ್ತಿ ಮಾಲಾಧಾರಿಗಳು ಪ್ರಸಾದ ಸ್ವೀಕರಿಸಿ 17 ಜನರು ಮೃತಪಟ್ಟಿದ್ದಲ್ಲದೆ, 150ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ನಾಲ್ವರು ಆರೋಪಿಗಳು ಕಳೆದ 6 ವರ್ಷ 10 ತಿಂಗಳುಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಹಲವು ಬಾರಿ ಆರೋಪಿಗಳು ಹೈಕೋರ್ಟ್, ಸುಪ್ರೀಂ ಕೋರ್ಟಿನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿ ವಜಾ ಮಾಡಲಾಗಿತ್ತು.
ನವೆಂಬರ್ 12ರ ಮಂಗಳವಾರ ಸುಳ್ವಾಡಿ ಕಿಚ್ಚುಗುತ್ತು ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಹೈಕೋರ್ಟ್ ವೈದ್ಯಕೀಯ ಚಿಕಿತ್ಸೆಗೆಂದು ಒಂದು ವರ್ಷದ ಅವಧಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಇದನ್ನು ಖಂಡಿಸಿ ವಿಷ ಪ್ರಸಾದ ಬಾಧಿತರು ಪ್ರತಿಭಟನೆ ನಡೆಸಿದರು.

ಇದನ್ನು ಓದಿ: ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣ: ಎ.1 ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಷರತ್ತುಬದ್ಧ ಜಾಮೀನು

ಇಮ್ಮಡಿ ಮಹಾದೇವಸ್ವಾಮಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆದರೆ, ಯಾವೆಲ್ಲ ಷರತ್ತುಗಳನ್ನು ಹೈಕೋರ್ಟ್ ವಿಧಿಸಿದೆ ಎಂಬುದು ಗೊತ್ತಿಲ್ಲ. ಸುಳ್ಳಾಡಿ ವಿಷಪ್ರಸಾದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹಾದೇವಸ್ವಾಮಿಗೆ ನೀಡಲಾಗಿರುವ ಜಾಮೀನು ತಡೆಗಾಗಿ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು ಎಂದು ಪ್ರಕರಣದ ಸಂತ್ರಸ್ತರು ಒತ್ತಾಯಿಸಿದರು. ಜಾಮೀನು ಮಂಜೂರು ಮಾಡಿರುವುದು ಸಾಕ್ಷಿದಾರರ ಮೇಲೆ ಪರಿಣಾಮ ಬೀರುತ್ತದೆ ಹಾಗೂ ಸಾಕ್ಷ್ಯಗಳು ನಾಶಗೊಳ್ಳುವ ಭೀತಿ ಇದೆ ಎಂದು ಅವರು ಆತಂಕ ವ್ಯಕ್ತ ಪಡಿಸಿದರು.

ಪ್ರಕರಣದಲ್ಲಿ 17 ಭಕ್ತರು ಸಾವಿಗೀಡಾಗಿದ್ದು, 150ಕ್ಕೂ ಹೆಚ್ಚು ಜನರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಈಗಲೂ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಸಂತ್ರಸ್ತರಿಗೆ ಈವರೆಗೂ ಸರ್ಕಾರ ಸೂಕ್ತ ಚಿಕಿತ್ಸೆ ಕೊಡಿಸುವುದಾಗಲಿ, ಪರಿಹಾರ ನೀಡುವುದಾಗಲಿ ಮಾಡಿಲ್ಲ ಎಂದು ಸಂತ್ರಸ್ತರು ಆರೋಪಿಸಿದರು.

ಆಂದೋಲನ ಡೆಸ್ಕ್

Recent Posts

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

22 mins ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

4 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

4 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

4 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

4 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

4 hours ago