Mysore
15
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಐವರ ಬಂಧನ

ಗುಂಡ್ಲುಪೇಟೆ: ಜಿಂಕೆಯನ್ನು ಕೊಂದು ಮಾಂಸ ಮಾರಾಟಕ್ಕೆ ಯತ್ನಿಸಿದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ರಾಷ್ಟ್ರೀಯ ಉದ್ಯಾನವನ ಬಂಡೀಪುರ ವ್ಯಾಪ್ತಿಯ ಅಣ್ಣೂರು ಕೇರಿ ವಲಯದಲ್ಲಿ ಈ ಘಟನೆ ನಡೆದಿದೆ.

ಅಣ್ಣೂರು ಕೇರಿ ಗ್ರಾಮದ ರವಿ, ಸಿದ್ದರಾಜು, ಮಹೇಶ್‌, ಸುರೇಶ್‌ ಹಾಗೂ ಸಿದ್ದಶೆಟ್ಟಿ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತರಿಂದ ಒಂದು ನಾಡ ಬಂದೂಕು, ತಲೆ ಬ್ಯಾಟರಿ, ಮಚ್ಚು ಹಾಗೂ ಬ್ಯಾಗನ್ನು ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

 

Tags:
error: Content is protected !!