Mysore
19
broken clouds

Social Media

ಬುಧವಾರ, 18 ಮಾರ್ಚ್ 2026
Light
Dark

ಕೊಳ್ಳೇಗಾಲ | ಜಗಳ ಬಿಡಿಸಲು ಹೋದ ವ್ಯಕ್ತಿ ಮೇಲೆ ಹಲ್ಲೆ

ಕೊಳ್ಳೇಗಾಲ: ಜಗಳ ಬಿಡಿಸಲು ಹೋದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಕುಣಗಳ್ಳಿ ಗ್ರಾಮದಲ್ಲಿ ನಡೆದಿದೆ.

ಕುಣಗಳ್ಳಿ ಗ್ರಾಮದ ಚನ್ನಯ್ಯ ಹಲ್ಲೆಗೆ ಒಳಗಾದವರು. ಈ ಸಂಬಂಧ ಅಗರ ಮಾಂಬಳ್ಳಿ ಪೊಲೀಸ್ ಠಾಣೆುಂಲ್ಲಿ ದೂರು ದಾಖಲಾಗಿದೆ.

ಅದೇ ಗ್ರಾಮದ ಡಿ.ಕೆ.ಶಿವಕುಮಾರ್ ಮತ್ತು ಲೋಕೇಶ್ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆಯುತ್ತಿದ್ದಾಗ ಜಗಳ ಬಿಡಿಸಲು ಹೋದ ಚನ್ನಯ್ಯ ಅವರಿಗೆ ಶಿವಕುವಾರ್ ಹಾಗೂ ಆತನ ಸಹೋದರ ಕಾಶಿ ಹಿಂಬದಿಯಿಂದ ಮಾರಕಾಸ್ತ್ರದಿಂದ ಹೊಡೆದು ಹಲ್ಲೆ ನಡೆಸಿದ್ದಾರೆ. ಇದರಿಂದ ಚನ್ನಯ್ಯ ಅವರ ತಲೆಗೆ ತೀವ್ರ ಸ್ವರೂಪದ ಪೆಟ್ಟಾಗಿದೆ.

ಗಾಯಾಳು ಚನ್ನಯ್ಯ ಅವರನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

 

Tags:
error: Content is protected !!