ಚಾಮರಾಜನಗರ

ಕೊಳ್ಳೇಗಾಲ | ಒಡಹುಟ್ಟಿದ ತಂಗಿಯನ್ನೆ ಕೊಂದ ಅಣ್ಣ

ಕೊಳ್ಳೇಗಾಲ: ಸಿಹಿ ಸಂಭ್ರಮದಲ್ಲಿ ಆರಂಭಗೊಂಡಿದ್ದ ಹೊಸ ವರ್ಷದ ಮೊದಲ ದಿನವು ಕಹಿ ಅವಘಡದೊಂದಿಗೆ ಅಂತ್ಯಗೊಂಡಿದೆ. ರಕ್ತ ಹಂಚಿಕೊಂಡು ಹುಟ್ಟಿದ ಅಣ್ಣನೇ ತನ್ನ ಸಹೋದರಿಯನ್ನು ಕೊಲೆಗೈದಿದ್ದಾನೆ.

ಪಟ್ಟಣದ ಈದ್ಗಾ ಮೊಹಲ್ಲ ನಿವಾಸಿ ಫರ್ಮನ್ ಪಾಷ(30) ಕೊಲೆ ಆರೋಪಿ. ಈತನ ಸಹೋದರಿ ಐಮನ್ ಬಾನು (23) ಕೊಲೆಯಾದ ಯುವತಿ.

ಕೌಟುಂಬಿಕ ಕಲಹದಿಂದ ಮನೆಯಲ್ಲಿ ಮಂಗಳವಾರ ಜೋರು ಗಲಾಟೆ ನಡೆದಿದೆ. ಈ ವೇಳೆ ಕೋಪದಲ್ಲಿ ಸಹೋದರಿ ಐಮನ್ ಮೇಲೆ ಹಲ್ಲೆ ಮಾಡಿ ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದು ಕೊಂದಿದ್ದಾನೆ. ಈ ವೇಳೆ ಅತ್ತಿಗೆ ತಸ್ಲಿಮ್ ತಾಜ್, ತಂದೆ ಸೈಯದ್ ಪಾಷ ಮೇಲು ಮಾರಣಾಂತಿಕ ಹಲ್ಲೆ ನಡೆಸಿ ದ್ದಾನೆ.

ಬಳಿಕ, ತಸ್ಲಿಮ್ ತಾಜ್, ಸೈಯದ್ ಪಾಷ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಚಾಮರಾಜನಗರ ಆಸ್ಪತ್ರೆಗೆ ರವಾನಿಸಲಾಗಿದೆ. ಐಮನ್ ಬಾನು ಮೃತ ದೇಹವನ್ನು ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಪಟ್ಟಣ ಪೊಲೀಸ್ ಠಾಣೆಯ ಪಿಎಸ್ಐ ವರ್ಷಾ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಕ್ರಮ ಕೈಗೊಂ ಡಿದ್ದಾರೆ. ಆರೋಪಿ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ. ಆಸ್ಪತ್ರೆಯಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಂಗಾಳ-ಕೇರಳದಲ್ಲಿ ಬದಲಾವಣೆಯ ಸುಳಿವು?

ಅಧಿಕಾರ ಹಿಡಿಯಲು ದಿನದ ಇಪ್ಪತ್ನಾಲ್ಕು ಗಂಟೆಯೂ ರಾಜಕೀಯ ಲೆಕ್ಕಾಚಾರ ಹಾಕುವುದರಲ್ಲಿ ನಿಪುಣರೆಂದೇ ಖ್ಯಾತಿ ಪಡೆದಿದ್ದ ಜನತಾದಳದ ಅಗ್ರಗಣ್ಯ ನಾಯಕ ಎಚ್.ಡಿ.…

1 hour ago

ಪೊದೆಗಳ ನಡುವೆ ಮರೆಯಾಗಿರುವ ಚನ್ನಕೇಶವ ದೇವಾಲಯ

ಚಿತ್ರಾ ವೆಂಕಟರಾಜು ಪಿರಿಯಾಪಟ್ಟಣದಲ್ಲಿ ಅಷ್ಟು ಪ್ರಸಿದ್ಧಿ ಪಡೆಯದ ಹೊಯ್ಸಳರ ಕಾಲದ ಚನ್ನಕೇಶವ ದೇವಾಲಯವಿದೆ. ಹೊಯ್ಸಳರ ಶೈಲಿಯ ವಾಸ್ತುಶಿಲ್ಪ ದಲ್ಲಿರುವ ಈ…

1 hour ago

ಮಂಗಳಮುಖಿಯರ ‘ಮನೆ ನ್ಯಾಯ!’

ಅಕ್ಷತಾ ತೃತೀಯ ಲಿಂಗಿಗಳ ಮೇಲೆ ದೌರ್ಜನ್ಯ, ಕಿರುಕುಳ, ಅಪಹರಣ ದಂತಹ ಪ್ರಕರಣಗಳು ದಿನೇದಿನೇ ಕೇಳಿ ಬರುತ್ತಿವೆ. ಪ್ರತೀ ಸಲ ಇಂತಹ…

1 hour ago

ನಳಂದ ಅಕಾಡೆಮಿ

ಗೋವಿಂದರಾಜು ದಲಿತ ವಿದ್ಯಾರ್ಥಿಗಳ ಉನ್ನತ ಓದಿಗೆ ಆಸರೆಯಾಗಿರುವ ಅವ್ವ  ಅದು ಉತ್ತರಪ್ರದೇಶದ ಒಂದು ಇಂಜಿನಿಯರಿಂಗ್ ಕಾಲೇಜ್. ಪದವಿ ಕಲಿತು ಬದುಕನ್ನು…

1 hour ago

ಎರಡೇ ದಿನಕ್ಕೆ 168 ಹೆಕ್ಟೇರ್ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಿರುಗಾಳಿ ಮಳೆಗೆ ಕಮರಿದ ರೈತರ ಕನಸು ಗುಂಡ್ಲುಪೇಟೆ: ರೈತರು ಒಂದಷ್ಟು ಕನಸು ಕಟ್ಟಿಕೊಂಡು ಬೆಳೆಸಿ ಕಟಾವಿಗೆ…

2 hours ago

ಭಾರೀ ಗಾಳಿ-ಮಳೆಯಿಂದ ಬೆಳೆ, ಮನೆಗಳಿಗೆ ಹಾನಿ

ಮಂಜು ಕೋಟೆ ಕೋಟೆ: ಅಂದಾಜು ೫ ಕೋಟಿ ರೂ. ನಷ್ಟ; ಕಂಗಾಲಾದ ರೈತರು, ಸಾರ್ವಜನಿಕರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಶುಕ್ರವಾರ ಸಂಜೆ…

2 hours ago