ಕೊಳ್ಳೇಗಾಲ: ಶಿವರಾತ್ರಿ ಹಬ್ಬದ ದಿನ ರಾತ್ರಿ ಎಪಿಎಂಸಿ ಆವರಣದಲ್ಲಿರುವ ಕರ್ನಾಟಕ ಆಹಾರ ನಿಗಮದ ಸಗಟು ಮಳಿಗೆಯಲ್ಲಿ ದಾಸ್ತಾನು ಇಟ್ಟಿದ್ದ 6900 ಕೆಜಿ ಅಕ್ಕಿಯನ್ನು ಕದ್ದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಆರೋಪಿಗಳು ತುಮಕೂರು ಜಿಲ್ಲಾ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಕೊಬ್ಬರಿ ಕಳವು ಪ್ರಕರಣದಲ್ಲಿ ಜೈಲು ಪಾಲಾಗಿದ್ದರು. ಇವರನ್ನು ಬೆರಳಚ್ಚು ಆಧಾರದ ಮೇಲೆ ಪತ್ತೆ ಮಾಡುವಲ್ಲಿ ಕೊಳ್ಳೇಗಾಲದ ಪೊಲೀಸರು ಯಶಸ್ವಿಯಾಗಿದ್ದಾರೆ.
ತುಮಕೂರು ಜೈಲಿನಲ್ಲಿರುವ ಇವರನ್ನು ನ್ಯಾಯಾಲಯದ ಅನುಮತಿ ಜೊತೆಗೆ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಅಕ್ಕಿ ಕದ್ದಿದ್ದನ್ನು ಒಪ್ಪಿಕೊಂಡಿದ್ದಾರೆ.
ದೊಡ್ಡ ಕವಲಂದೆ ಸದ್ದಾಂ ಹುಸೇನ್, ಮೈಸೂರಿನ ರಾಹಿಲ್ ಬಂಧಿತರು. ಇವರಿಂದ ಕದ್ದಿದ್ದ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ.
16 ವರ್ಷದ ಬಾಲ ಅಪರಾಧಿಯನ್ನು ಇನ್ನೂ ವಶಕ್ಕೆ ಪಡೆದಿಲ್ಲ. ಸಿಪಿಐ ಶಿವಮಾದಯ್ಯ ಹಾಗೂ ಅವರ ತಂಡದವರು ಪ್ರಕರಣ ಭೇದಿಸಿದ್ದಾರೆ.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…