ಕೊಳ್ಳೇಗಾಲ: ಶಿವರಾತ್ರಿ ಹಬ್ಬದ ದಿನ ರಾತ್ರಿ ಎಪಿಎಂಸಿ ಆವರಣದಲ್ಲಿರುವ ಕರ್ನಾಟಕ ಆಹಾರ ನಿಗಮದ ಸಗಟು ಮಳಿಗೆಯಲ್ಲಿ ದಾಸ್ತಾನು ಇಟ್ಟಿದ್ದ 6900 ಕೆಜಿ ಅಕ್ಕಿಯನ್ನು ಕದ್ದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಆರೋಪಿಗಳು ತುಮಕೂರು ಜಿಲ್ಲಾ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಕೊಬ್ಬರಿ ಕಳವು ಪ್ರಕರಣದಲ್ಲಿ ಜೈಲು ಪಾಲಾಗಿದ್ದರು. ಇವರನ್ನು ಬೆರಳಚ್ಚು ಆಧಾರದ ಮೇಲೆ ಪತ್ತೆ ಮಾಡುವಲ್ಲಿ ಕೊಳ್ಳೇಗಾಲದ ಪೊಲೀಸರು ಯಶಸ್ವಿಯಾಗಿದ್ದಾರೆ.
ತುಮಕೂರು ಜೈಲಿನಲ್ಲಿರುವ ಇವರನ್ನು ನ್ಯಾಯಾಲಯದ ಅನುಮತಿ ಜೊತೆಗೆ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಅಕ್ಕಿ ಕದ್ದಿದ್ದನ್ನು ಒಪ್ಪಿಕೊಂಡಿದ್ದಾರೆ.
ದೊಡ್ಡ ಕವಲಂದೆ ಸದ್ದಾಂ ಹುಸೇನ್, ಮೈಸೂರಿನ ರಾಹಿಲ್ ಬಂಧಿತರು. ಇವರಿಂದ ಕದ್ದಿದ್ದ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ.
16 ವರ್ಷದ ಬಾಲ ಅಪರಾಧಿಯನ್ನು ಇನ್ನೂ ವಶಕ್ಕೆ ಪಡೆದಿಲ್ಲ. ಸಿಪಿಐ ಶಿವಮಾದಯ್ಯ ಹಾಗೂ ಅವರ ತಂಡದವರು ಪ್ರಕರಣ ಭೇದಿಸಿದ್ದಾರೆ.
ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…
ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…
ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…
ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…
ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ…